Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:10 - ಕನ್ನಡ ಸತ್ಯವೇದವು C.L. Bible (BSI)

10 ಯಾಜಕನು ನಾರುಮಡಿಯ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರುಮಡಿ ಚಡ್ಡಿಯನ್ನು ಹಾಕಿಕೊಂಡು ಬಲಿಪೀಠದ ಮೇಲಿನ ದಹನಬಲಿ ದ್ರವ್ಯದ ಬೂದಿಯನ್ನು ಎತ್ತಿ ವೇದಿಕೆಯ ಬಳಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರಿನ ಒಳಉಡುಪನ್ನು ಹಾಕಿಕೊಂಡು, ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ಯಜ್ಞವೇದಿಯ ಬಳಿಯಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು ಮಾನರಕ್ಷಕವಾದ ನಾರಿನ ಚಡ್ಡಿಯನ್ನು ಹಾಕಿಕೊಂಡು ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ವೇದಿಯ ಬಳಿಯಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಾಜಕನು ತನ್ನ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಳ್ಳಬೇಕು. ಯಾಜಕನು ಸರ್ವಾಂಗಹೋಮ ಮಾಡಿದಾಗ ಬೆಂಕಿಯಿಂದ ಉಂಟಾದ ಬೂದಿಯನ್ನು ತೆಗೆದು ವೇದಿಕೆಯ ಬಳಿಯಲ್ಲಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯಾಜಕನು ತನ್ನ ನಾರುಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರುಮಡಿಯ ಒಳಉಡುಪುಗಳನ್ನೂ ಧರಿಸಿಕೊಂಡು, ಬಲಿಪೀಠದ ಮೇಲೆ ದಹನಬಲಿಯೊಂದಿಗೆ ಸುಟ್ಟ ಬೂದಿಯನ್ನು ತೆಗೆದುಕೊಂಡು, ಅದನ್ನು ಬಲಿಪೀಠದ ಬಳಿಯಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:10
22 ತಿಳಿವುಗಳ ಹೋಲಿಕೆ  

ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು ನಾರಿನ ಚಡ್ಡಿಯನ್ನು ಹಾಕಿಕೊಂಡು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ತಲೆಗೆ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.


ಸ್ವರ್ಗದ ಸೈನಿಕರು ಬಿಳಿಯ ಕುದುರೆಗಳನ್ನೇರಿ ಆತನನ್ನು ಹಿಂಬಾಲಿಸಿದರು. ಅವರು ಶುಭ್ರವಾದ ಬಿಳಿಯ ಸಮವಸ್ತ್ರಗಳನ್ನು ಧರಿಸಿದ್ದರು.


ದಿವ್ಯವಾದುವು, ಭವ್ಯವಾದುವು, ಮೌಲ್ಯವಾದುವು, ಆಕೆಗಿತ್ತ ಉಡುಗೆತೊಡುಗೆಗಳು; ಸತ್ಕಾರ್ಯಗಳೇ ದೇವಜನರು ಧರಿಸುವ ಅಮೂಲ್ಯ ಉಡುಗೆತೊಡುಗೆಗಳು.”


ಸಭಾಪ್ರಮುಖರಲ್ಲಿ ಒಬ್ಬನು, “ಶ್ವೇತಾಂಬರರಾದ ಇವರೆಲ್ಲರೂ ಯಾರು? ಎಲ್ಲಿಂದ ಬಂದರು?” ಎಂದು ನನ್ನ‍ನ್ನು ಪ್ರಶ್ನಿಸಿದನು.


ದುರುಳರ ಬೆಡಗೋ ಬಾಡಿಹೋಗುವುದು ಹುಲ್ಲಿನಂತೆ I ಪ್ರಭುವಿನ ಶತ್ರುಗಳು ತೇಲಿಹೋಗುವರು ಹೊಗೆಯಂತೆ II


ನೆನಸಿಕೊಳ್ಳಲಾತ ನೀನರ್ಪಿಸಿದ ಕಾಣಿಕೆಗಳನು I ಒಲಿದು ಸ್ವೀಕರಿಸಲಿ, ನೀನಿತ್ತಾ ಯಜ್ಞಬಲಿಗಳನು II


ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.


“ನೀವು ಈ ಸಮುದಾಯದವರಿಂದ ಪ್ರತ್ಯೇಕವಾಗಿ ನಿಲ್ಲಿ; ನಾನು ಇವರನ್ನು ಒಂದು ಕ್ಷಣಮಾತ್ರದಲ್ಲಿ ಭಸ್ಮ ಮಾಡಿಬಿಡುತ್ತೇನೆ,” ಎಂದರು.


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆಸಿದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ. ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಹಾಗು ಕರುಳುಗಳಲ್ಲಿರುವ ಕಲ್ಮಶ ಇವುಗಳನ್ನೆಲ್ಲ ಪಾಳೆಯದ ಹೊರಗೆ, ವೇದಿಕೆಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.


ಅನಂತರ ತನ್ನ ವಸ್ತ್ರಗಳನ್ನು ಬದಲಾಯಿಸಿಕೊಂಡು ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


“ನೀನು ಆರೋನನನ್ನೂ ಅವನ ಗಂಡು ಮಕ್ಕಳನ್ನೂ ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು, ಅಭಿಷೇಕ ತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಹಾಗು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡು ಬಾ;


ಅವರು ಹೊರಗಿನ ಪ್ರಾಕಾರಕ್ಕೆ ಅಂದರೆ, ಅಲ್ಲಿನ ಜನರ ಬಳಿಗೆ ಹೊರಡುವಾಗ, ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗಲಿಸಿ ಅವರನ್ನು ಪರಿಶುದ್ಧರಾಗ ಮಾಡದಂತೆ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಲಿ.


“ನೀವು ಸರ್ವೇಶ್ವರನಿಗೆ ಕಾಣಿಕೆಯಾಗಿ ಸಮರ್ಪಿಸುವ ಯಾವ ಧಾನ್ಯದ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಸರ್ವೇಶ್ವರನಿಗೆ ಹೋಮಮಾಡಕೂಡದು.


ಆರೋನನ ವಂಶಜರಾದ ಗಂಡಸರೆಲ್ಲರು ಅದನ್ನು ತಿನ್ನಬಹುದು. ಸರ್ವೇಶ್ವರನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ಶಾಶ್ವತ ನಿಯಮವಾಗಿ ಆರೋನನ ಸಂತತಿಗೆ ಸಲ್ಲತಕ್ಕದು. ಆ ದ್ರವ್ಯಗಳಿಗೆ ಸೋಂಕಿದೆಲ್ಲವೂ ಪರಿಶುದ್ಧವಾಗುವುದು.


ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತ ಯಾಜಕಪಟ್ಟಕ್ಕೆ ಬರುತ್ತಾನೋ ಅವನೇ ಅದನ್ನು ಸಮರ್ಪಿಸಬೇಕು. ಇದು ಶಾಶ್ವತ ನಿಯಮ.


ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದುದನ್ನೂ ಮಹಾಪರಿಶುದ್ಧವಾದುದನ್ನೂ ಅವನು ಊಟಮಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು