Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:27 - ಕನ್ನಡ ಸತ್ಯವೇದವು C.L. Bible (BSI)

27 ಆ ಪ್ರಾಣಿಯ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು, ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರ ಸ್ಥಳದಲ್ಲೇ ಒಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲಾ ಪರಿಶುದ್ಧವಾಗುವದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಪಾಪಪರಿಹಾರಕ ಯಜ್ಞದ ಮಾಂಸವು ತಗಲಿದ ವಸ್ತುವೂ ಪವಿತ್ರವಾಗುತ್ತದೆ; ಮುಟ್ಟುವ ವ್ಯಕ್ತಿಯೂ ಪವಿತ್ರವಾಗುವನು. “ಚಿಮಿಕಿಸಲ್ಪಟ್ಟ ರಕ್ತದಲ್ಲಿ ಸ್ವಲ್ಪ ರಕ್ತವು ಯಾರ ಬಟ್ಟೆಯ ಮೇಲಾದರೂ ಬಿದ್ದರೆ, ನೀವು ಆ ಬಟ್ಟೆಗಳನ್ನು ಪವಿತ್ರಸ್ಥಳದಲ್ಲಿ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅದರ ಮಾಂಸವನ್ನು ಮುಟ್ಟಿದ್ದೆಲ್ಲವೂ ಪರಿಶುದ್ಧವಾಗಿರುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಉಡುಪಿನ ಮೇಲೆ ಬಿದ್ದರೆ, ಅದನ್ನು ಚಿಮುಕಿಸಿದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:27
11 ತಿಳಿವುಗಳ ಹೋಲಿಕೆ  

ಹೀಗೆ ಏಳು ದಿನಗಳವರೆಗೆ ಬಲಿಪೀಠದ ನಿಮಿತ್ತ ಪಾಪಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪ್ರತಿಷ್ಠಾಪಿಸು. ಬಲಿಪೀಠವು ಅತಿಶುದ್ಧವಾಗಿರಬೇಕು. ಅದನ್ನು ಸೋಕಿದ್ದೆಲ್ಲವು ಪರಿಶುದ್ಧವಾಗುವುದು.


ದೇವರ ಚಿತ್ತಾನುಸಾರವಾದ ನಿಮ್ಮ ದುಃಖದಿಂದ ಎಂಥಾ ಶ್ರದ್ಧೆ ಉಂಟಾಗಿದೆ ಎಂಬುದನ್ನು ಗಮನಿಸಿನೋಡಿರಿ; ನಿಮ್ಮಲ್ಲಿ ಎಂಥ ಉತ್ಸಾಹ, ದೋಷವಿಮುಕ್ತರಾಗಲು ಎಂಥ ಪ್ರಯಾಸ, ಎಷ್ಟು ರೋಷ, ಎಷ್ಟು ಆವೇಶ, ಎಷ್ಟು ಎಚ್ಚರಿಕೆ, ಎಷ್ಟು ಹಂಬಲ, ತಪ್ಪಿತಸ್ಥರನ್ನು ಶಿಕ್ಷಿಸಲು ಎಷ್ಟು ಕಟ್ಟುನಿಟ್ಟು! ನೀವು ನಿರ್ದೋಷಿಗಳೆಂಬುದಕ್ಕೆ ಇವೆಲ್ಲವೂ ಸಾದೃಶ್ಯಗಳಾಗಿವೆ.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


‘ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು’ ಎಂದುಕೊಂಡಿದ್ದಳು ಆಕೆ.


ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಪ್ರತಿಷ್ಠಿತ ಮಾಂಸವನ್ನು ಕಟ್ಟಿಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ, ಅನ್ನವನ್ನಾಗಲಿ, ದ್ರಾಕ್ಷಾರಸವನ್ನಾಗಲೀ, ಎಣ್ಣೆಯನ್ನಾಗಲೀ ಅಥವಾ ಯಾವ ಆಹಾರ ಪದಾರ್ಥವನ್ನೇ ಆಗಲಿ ಸೋಕಿದರೆ ಅದು ಪವಿತ್ರವಾಗುತ್ತದೋ? ಎಂದು ಧರ್ಮವಿಧಿಯನ್ನು ವಿಚಾರಿಸು.” ಪ್ರವಾದಿ ಹಾಗೆ ವಿಚಾರಿಸಲು ಯಾಜಕರು ‘ಇಲ್ಲ’ ಎಂದು ಉತ್ತರಕೊಟ್ಟರು.


ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಗೋಣಿಯಾಗಲಿ ಅದು ಎಂಥದಾದರೂ ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಸಾಯಂಕಾಲದವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.


ಆರೋನನ ವಂಶಜರಾದ ಗಂಡಸರೆಲ್ಲರು ಅದನ್ನು ತಿನ್ನಬಹುದು. ಸರ್ವೇಶ್ವರನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ಶಾಶ್ವತ ನಿಯಮವಾಗಿ ಆರೋನನ ಸಂತತಿಗೆ ಸಲ್ಲತಕ್ಕದು. ಆ ದ್ರವ್ಯಗಳಿಗೆ ಸೋಂಕಿದೆಲ್ಲವೂ ಪರಿಶುದ್ಧವಾಗುವುದು.


ಅವು ಅತಿ ಪರಿಶುದ್ಧವಾಗುವಂತೆ ಪ್ರತಿಷ್ಠಿಸಬೇಕು. ಅವುಗಳಿಗೆ ಸೋಕಿದ್ದೆಲ್ಲವು ಪರಿಶುದ್ಧವಾಗುವುದು.


ಇವರು, “ನಿಮ್ಮ ಉಡುಪಿನ ಅಂಚನ್ನಾದರೂ ಮುಟ್ಟಲು ಅಪ್ಪಣೆಯಾದರೆ ಸಾಕು,” ಎಂದು ಯೇಸುವನ್ನು ಬೇಡಿಕೊಂಡರು. ಹಾಗೆ ಮುಟ್ಟಿದವರೆಲ್ಲಾ ಗುಣಹೊಂದಿದರು.


“ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.


ಅವರು ಹೊರಗಿನ ಪ್ರಾಕಾರಕ್ಕೆ ಅಂದರೆ, ಅಲ್ಲಿನ ಜನರ ಬಳಿಗೆ ಹೊರಡುವಾಗ, ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗಲಿಸಿ ಅವರನ್ನು ಪರಿಶುದ್ಧರಾಗ ಮಾಡದಂತೆ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು