Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:9 - ಕನ್ನಡ ಸತ್ಯವೇದವು C.L. Bible (BSI)

9 “ನೀನು ಆರೋನನಿಗೂ ಅವನ ವಂಶದವರಿಗೂ ಈ ಕೆಳಕಂಡ ದಹನ ಬಲಿಯ ಈ ನಿಯಮಗಳನ್ನು ಆಜ್ಞಾಪಿಸು: ದಹನ ಬಲಿ ದ್ರವ್ಯವು ರಾತ್ರಿಯೆಲ್ಲಾ, ಮರುದಿನದ ಬೆಳಗಿನವರೆಗೂ ಬಲಿಪೀಠದ ಮೇಲೆ ಉರಿಯುತ್ತಿರಬೇಕು. ಅದರಿಂದಲೇ ಬಲಿಪೀಠದ ಮೇಲಿನ ಬೆಂಕಿ ಹೊತ್ತಿ ಉರಿಯುತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, ‘ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆರೋನನಿಗೂ ಅವನ ಪುತ್ರರಿಗೂ ಈ ಅಪ್ಪಣೆಯನ್ನು ಕೊಡು: ಸರ್ವಾಂಗಹೋಮದ ನಿಯಮ ಇದಾಗಿದೆ. ಸರ್ವಾಂಗಹೋಮವು ವೇದಿಕೆಯ ಒಲೆಯಲ್ಲಿ ರಾತ್ರಿಯೆಲ್ಲಾ ಮರುದಿನ ಮುಂಜಾನೆಯವರೆಗೆ ಉರಿಯುತ್ತಿರಬೇಕು. ವೇದಿಕೆಯಲ್ಲಿ ಬೆಂಕಿಯು ಉರಿಯುತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆರೋನನಿಗೂ ಅವನ ಪುತ್ರರಿಗೂ ಆಜ್ಞಾಪಿಸಿ ಹೀಗೆ ಹೇಳು, ‘ಇದು ದಹನಬಲಿಯ ನಿಯಮವಾಗಿದೆ. ದಹನಬಲಿ ಇಡೀ ರಾತ್ರಿ, ಅಂದರೆ ಬೆಳಗಿನವರೆಗೆ ಬಲಿಪೀಠದ ಅಗ್ನಿಕುಂಡದ ಮೇಲೆ ಇರಬೇಕು. ಬಲಿಪೀಠದ ಬೆಂಕಿಯು ಅದರೊಳಗೆ ಸುಡುತ್ತಾ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:9
10 ತಿಳಿವುಗಳ ಹೋಲಿಕೆ  

ಆ ವಿಷಯದಲ್ಲಿ ನೀನು ಅವರಿಗೆ ಹೀಗೆಂದು ಅಪ್ಪಣೆಮಾಡು:


‘ಪ್ರತಿದಿನ ಅರ್ಪಿಸಬೇಕಾದ ದಹನಬಲಿ ಹಾಗು ಅದಕ್ಕೆ ಸಂಬಂಧಿಸಿದ ಪಾನದ್ರವ್ಯ ಇವುಗಳ ಜೊತೆಗೆ


ಮೋಶೆಗೆ ಸರ್ವೇಶ್ವರ ಹೀಗೆಂದರು:


ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಯುವ ಹೋಮಶೇಷವು ಮಹಾಪರಿಶುದ್ಧವಾದುದು.


ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶಜರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಕೆಯಾದದ್ದು ಮಹಾಪರಿಶುದ್ಧವಾದುದು.


ಮೋಶೆಗೆ ಸರ್ವೇಶ್ವರ ಹೀಗೆಂದು ತಿಳಿಸಿದರು:


ಅವು ಆರೋನನಿಗೂ ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಆ ರೊಟ್ಟಿಗಳನ್ನು ದೇವಸ್ಥಾನದ ಪ್ರಾಕಾರದಲ್ಲೇ ತಿನ್ನಬೇಕು. ಅವು ಸರ್ವೇಶ್ವರನಿಗೆ ಸಮರ್ಪಿತವಾದ ದಹನದ್ರವ್ಯಗಳಿಗೆ ಸೇರಿದವುಗಳಾಗಿರುವುದರಿಂದ ಶಾಶ್ವತ ನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು