Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:12 - ಕನ್ನಡ ಸತ್ಯವೇದವು C.L. Bible (BSI)

12 ಯಾರಾದರು ಕೃತಜ್ಞತೆಯನ್ನು ಸಲ್ಲಿಸುವುದಕ್ಕಾಗಿ ಶಾಂತಿಸಮಾಧಾನದ ಬಲಿಯನ್ನು ಸರ್ವೇಶ್ವರನಿಗೆ ಅರ್ಪಿಸಲಾಶಿಸಿದರೆ ಆ ಬಲಿಪ್ರಾಣಿಯ ಸಮೇತ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಹಾಗು ಎಣ್ಣೆಯಿಂದ ಪೂರ್ತಿಯಾಗಿ ತೋಯಿಸಿದ ಗೋದಿಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆ ಹೊಯಿದು ಮಾಡಿದ ಕಡುಬುಗಳನ್ನೂ ಎಣ್ಣೆಬೆರೆಸಿದ ಹೋಳಿಗೆಗಳನ್ನೂ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ ‘ಅವನು ಉಪಕಾರ ಸ್ತುತಿಗಾಗಿ ಅರ್ಪಿಸುವುದಾದರೆ, ಕೃತಜ್ಞತಾಸ್ತುತಿ ಬಲಿಯನ್ನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಗಳೊಂದಿಗೆ, ಎಣ್ಣೆ ಹೊಯ್ದ ಹುಳಿಯಿಲ್ಲದ ದೋಸೆಗಳೊಂದಿಗೆ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದ ರೊಟ್ಟಿಗಳೊಂದಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:12
25 ತಿಳಿವುಗಳ ಹೋಲಿಕೆ  

ಇದಲ್ಲದೆ ಒಂದು ಬುಟ್ಟಿ ತುಂಬ ಎಣ್ಣೆಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆಹಾಕಿದ ಹುಳಿಯಿಲ್ಲದ ಕಡಬುಗಳು ಮತ್ತು ಮೇಲೆ ಹೇಳಿದ ಬಲಿಗಳ ಸಮೇತ ಕೊಡಬೇಕಾದ ಧಾನ್ಯದ್ರವ್ಯ-ಪಾನದ್ರವ್ಯಗಳು, ಇವುಗಳನ್ನೆಲ್ಲಾ ಸಮರ್ಪಿಸಬೇಕು.


“ನೀವು ಒಲೆಯಲ್ಲಿ ಅಡಿಗೆ ಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿ ಹಿಟ್ಟಿನ ಹೋಳಿಗೆಗಳಾಗಿರಲಿ ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳಾಗಿರಲಿ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ಯಾವಾಗಲೂ ಎಲ್ಲ ವರಗಳಿಗಾಗಿಯೂ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ; ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯ ಆಯಿತು.


ದೇವರನ್ನು ಸ್ತುತಿಸುವುದಕ್ಕೆ ಈ ಹೊರನಾಡಿನವನು ಹೊರತು ಬೇರಾರೂ ಬರಲಿಲ್ಲವೇ?” ಎಂದರು.


ಯೇಸುವಿನ ಪಾದಕ್ಕೆ ಸಾಷ್ಟಾಂಗವೆರಗಿ ಕೃತಜ್ಞತೆಯನ್ನು ಸಲ್ಲಿಸಿದನು. ಇವನೋ ಸಮಾರಿಯದವನು!


ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.


ಅರ್ಪಿಸುವೆ ನಾ ನಿನಗೆ ಕೃತಜ್ಞತಾ ಬಲಿಗಳನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗೆ ಆತನೆಸಗಿದ ಅತಿಶಯಗಳನು II


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ದೇವರು ತಮಗೆ ವಿಶೇಷಾನಂದವನ್ನುಂಟು ಮಾಡಿದ್ದರಿಂದ ಜನರು ಆ ದಿನ ಅನೇಕ ಬಲಿದಾನಗಳನ್ನು ಸಮರ್ಪಿಸಿ ತಮ್ಮ ಮಡದಿಮಕ್ಕಳೊಡನೆ ಮಹೋತ್ಸವ ಮಾಡಿದರು. ಜೆರುಸಲೇಮಿನ ಉತ್ಸವದ ಹರ್ಷಧ್ವನಿ ಬಹುದೂರದವರೆಗೂ ಕೇಳಿಸಿತು.


ಸರ್ವೇಶ್ವರನ ಬಲಿಪೀಠವನ್ನು ಪುನಃ ಕಟ್ಟಿಸಿ, ಅದರ ಮೇಲೆ ಶಾಂತಿಸಮಾಧಾನ ಬಲಿಗಳನ್ನೂ ಕೃತಜ್ಞತಾ ಬಲಿಗಳನ್ನೂ ಅರ್ಪಿಸಿದನು. ಇಸ್ರಯೇಲ್ ದೇವರಾದ ಸರ್ವೇಶ್ವರನನ್ನೇ ಅವಲಂಬಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.


ಆಮೇಲೆ ಹಿಜ್ಕೀಯನು ಸಭೆ ಸೇರಿದವರಿಗೆ, “ನೀವು ಈಗ ಸರ್ವೇಶ್ವರನಿಗಾಗಿ ನಿಮ್ಮನ್ನೇ ಪ್ರತಿಷ್ಠಿಸಿಕೊಂಡಿದ್ದೀರಿ; ಹತ್ತಿರ ಬಂದು ಸರ್ವೇಶ್ವರನ ಆಲಯಕ್ಕೆ ಸಮಾಧಾನಬಲಿಗಳನ್ನೂ ಕೃತಜ್ಞತಾಬಲಿಗಳನ್ನೂ ಸಮರ್ಪಿಸಿರಿ,” ಎಂದನು. ಸಭೆ ಸೇರಿದ್ದವರು ಸಮಾಧಾನ ಬಲಿಗಳನ್ನೂ ಕೃತಜ್ಞತಾಬಲಿಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವಇಚ್ಛೆಯಿಂದ ದಹನಬಲಿಗಳನ್ನೂ ಸಮರ್ಪಿಸಿದರು.


“ನೀವು ಧನ್ಯವಾದ ಸಲ್ಲಿಸಲು ಸರ್ವೇಶ್ವರನಿಗೆ ಮಾಡುವ ಬಲಿದಾನವನ್ನು ಮೆಚ್ಚುಗೆಯಾದ ರೀತಿಯಲ್ಲಿ ಸಮರ್ಪಿಸಬೇಕು.


ಕೃತಜ್ಞತಾ ಬಲಿಪ್ರಾಣಿಯ ಮಾಂಸವನ್ನು ಬಲಿ ನಡೆದ ದಿನದಲ್ಲೇ ಭೋಜನ ಮಾಡಬೇಕು. ಮರುದಿನದವರೆಗೆ ಕಿಂಚಿತ್ತನ್ನೂ ಉಳಿಸಬಾರದು.


ಮಿಕ್ಕದ್ದನ್ನು ಆರೋನನೂ ಅವನ ವಂಶಜರೂ ತಿನ್ನಬಹುದು. ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ, ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.


ನೀವು ಅರ್ಪಿಸುವುದು ಕಬ್ಬಿಣದ ಹೆಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿ ಹಿಟ್ಟಿನದಾಗಿರಬೇಕು.


ಹುಳಿಹಿಟ್ಟಿನ ರೊಟ್ಟಿಯನ್ನು ಹೋಮಮಾಡಿ ಉಪಕಾರಸ್ಮರಣೆ ಮಾಡಿಕೊಳ್ಳಿ. ಇಷ್ಟಬಂದಂತೆ ಕಾಣಿಕೆಗಳನ್ನು ಸಮರ್ಪಿಸಿ ಪ್ರಚಾರಮಾಡಿಕೊಳ್ಳಿ. ಹೀಗೆ ಮಾಡುವುದು ನಿಮಗೆ ಇಷ್ಟವಲ್ಲವೆ?” ಇದು ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು