Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:32 - ಕನ್ನಡ ಸತ್ಯವೇದವು C.L. Bible (BSI)

32 ನೀವು ಶಾಂತಿಸಮಾಧಾನದ ಬಲಿದ್ರವ್ಯಗಳಲ್ಲಿ ಪ್ರಾಣಿಯ ಬಲತೊಡೆಯನ್ನು ಯಾಜಕನಿಗಾಗಿ ಪ್ರತ್ಯೇಕಿಸಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲತೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲದೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನೀವು ಸಮಾಧಾನಯಜ್ಞದ ಪಶುವಿನ ಬಲತೊಡೆಯನ್ನು ಸಹ ಯಾಜಕನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಬಲಭುಜವನ್ನು ನೀವು ಯಾಜಕನಿಗೆ ಸಮಾಧಾನದ ಬಲಿಯಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:32
12 ತಿಳಿವುಗಳ ಹೋಲಿಕೆ  

ಇದು ನೈವೇದ್ಯವಾಗಿ ಆರತಿಯೆತ್ತುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಬೇಕು. ಇದಾದ ನಂತರ ನಾಜೀರ ವ್ರತಸ್ಥನು ದ್ರಾಕ್ಷಾರಸವನ್ನು ಪಾನಮಾಡಬಹುದು.


ಮೋಶೆಯ ಆಜ್ಞಾನುಸಾರ ಅವನು ಅವುಗಳ ಎದೆಯ ಭಾಗಗಳನ್ನೂ ಬಲತೊಡೆಗಳನ್ನೂ ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿದನು.


ಶಾಂತಿಸಮಾಧಾನದ ಬಲಿಪ್ರಾಣಿಯ ಮಾಂಸದಲ್ಲಿ ನೈವೇದ್ಯರೂಪವಾಗಿ ಆರತಿಯೆತ್ತುವ ಎದೆಯ ಭಾಗವನ್ನು ಮತ್ತು ಯಾಜಕನಿಗಾಗಿ ಪ್ರತ್ಯೇಕಿಸುವ ತೊಡೆಯನ್ನು ಸರ್ವೇಶ್ವರ ಇಸ್ರಯೇಲ್ ಜನರಿಂದ ತೆಗೆದುಕೊಂಡು ಮಹಾಯಾಜಕ ಆರೋನನಿಗೂ ಅವನ ವಂಶಜರಿಗೂ ಕೊಟ್ಟು, ಅದು ಶಾಶ್ವತ ನಿಯಮವಾಗಿ ಅವರಿಗೆ ಸಲ್ಲುವಂತೆ ಮಾಡಿದ್ದಾರೆ.


“ಜನರಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ : ದನಕರುಗಳನ್ನು ಹಾಗು ಆಡುಕುರಿಗಳನ್ನು ಕೊಯ್ದು ಬಲಿದಾನ ಮಾಡುವವರೆಲ್ಲರು ಆ ಪಶುಗಳ ಮುಂದೊಡೆಯನ್ನೂ ಎರಡು ದವಡೆಗಳನ್ನೂ ಕೋಷ್ಠವನ್ನೂ ಯಾಜಕರಿಗೆ ಕೊಡಬೇಕು.


ನೀವು ಯಾಜಕನಿಗೆಂದೇ ಪ್ರತ್ಯೇಕವಾಗಿ ಆರತಿಯೆತ್ತಿ ಅರ್ಪಿಸಿದ ಎದೆಯ ಭಾಗವನ್ನು ಮತ್ತು ತೊಡೆಯನ್ನು ಯಾವುದಾದರೂ ಒಂದು ಶುದ್ಧ ಸ್ಥಳದಲ್ಲಿ ಊಟಮಾಡಬಹುದು. ನೀವೂ ನಿಮ್ಮ ಕುಟುಂಬದವರು ಅದನ್ನು ತಿನ್ನಬಹುದು. ಏಕೆಂದರೆ, ಇಸ್ರಯೇಲರು ಸಮರ್ಪಿಸುವ ಶಾಂತಿಸಮಾಧಾನದ ಬಲಿದ್ರವ್ಯಗಳಲ್ಲಿ ಇವು ನಿಮಗೂ ನಿಮ್ಮ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.


ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ಕಾಣಿಕೆಯಾಗಿ ಆರತಿ ಮಾಡಿಸಿದ ಎದೆಯ ಭಾಗವನ್ನು ಮತ್ತು ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ಅದರ ತೊಡೆಯನ್ನು ದೇವರದೆಂದು ಭಾವಿಸಬೇಕು.


ಆರೋನನ ವಂಶಜರಲ್ಲಿ ಯಾವನು ಆ ಬಲಿಪ್ರಾಣಿಯ ರಕ್ತವನ್ನು ಹಾಗು ಕೊಬ್ಬನ್ನು ಅರ್ಪಿಸುತ್ತಾನೋ, ಆ ಪ್ರಾಣಿಯ ಬಲತೊಡೆ ಅವನ ಪಾಲಿಗೆ ಸೇರಬೇಕು.


ಇಸ್ರಯೇಲಿನ ಜನರು ಪ್ರತ್ಯೇಕಿಸಿ ಯಾಜಕನಿಗೆ ಒಪ್ಪಿಸುವ ಪವಿತ್ರ ವಸ್ತುಗಳೆಲ್ಲವೂ ಯಾಜಕನವುಗಳಾಗಿಯೇ ಇರಬೇಕು.


ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಸಮುವೇಲನು ಸೌಲನಿಗೆ, “ಇಗೋ, ಇದು ನಿನಗಾಗಿ ಪ್ರತ್ಯೇಕಿಸಿದ್ದು; ಇದನ್ನು ತಿನ್ನು. ಜನರನ್ನು ಬಲಿಭೋಜನಕ್ಕೆ ಕರೆದಾಗಿನಿಂದ ಇದು ನಿನಗಾಗಿಯೇ ಪ್ರತ್ಯೇಕವಾಗಿ ಇಡಲಾಗಿತ್ತು,” ಎಂದು ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು