Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:3 - ಕನ್ನಡ ಸತ್ಯವೇದವು C.L. Bible (BSI)

3 ಜನಸಮೂಹವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಕರೆಯಿಸು,” ಎಂದು ಆಜ್ಞೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿನ ಹತ್ತಿರಕ್ಕೆ ಕರಿಸು ಎಂದು ಆಜ್ಞಾಪಿಸಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮತ್ತು ಜನರನ್ನು ಒಟ್ಟಾಗಿ ದೇವದರ್ಶನಗುಡಾರದ ಬಾಗಿಲಿಗೆ ಎದುರಿನಲ್ಲಿ ಸೇರಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎಲ್ಲಾ ಸಭೆಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:3
16 ತಿಳಿವುಗಳ ಹೋಲಿಕೆ  

ಪಂಚಾಶತ್ತಮ ಹಬ್ಬದ ದಿನ ಭಕ್ತವಿಶ್ವಾಸಿಗಳೆಲ್ಲರೂ ಒಂದು ಸ್ಥಳದಲ್ಲಿ ಸಭೆಸೇರಿದ್ದರು.


ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿ ಕೂಡಿದರು; ಅದೊಂದು ಮಹಾಕೂಟವಾಗಿತ್ತು.


ಪ್ರಭು, ನೀನೆ ಸ್ಪೂರ್ತಿ, ತುಂಬುಸಭೆಯಲಿ ನಾ ಮಾಳ್ಪ ಸ್ತುತಿಗೆ I ಭಕ್ತಜನರ ಮುಂದೆ ನಾ ಸಲ್ಲಿಸುವೆ, ನಿನಗೆ ಹೊತ್ತ ಹರಕೆ II


ತಮ್ಮ ತಮ್ಮ ಪಟ್ಟಣಗಲ್ಲಿ ವಾಸಿಸುತ್ತಿದ್ದ ಇಸ್ರಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ಒಟ್ಟಿಗೆ ಸೇರಿದರು. ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.


ಯೆಹೂದ್ಯರ ಸರ್ವಸಮೂಹದವರು, ಯಾಜಕರು, ಲೇವಿಯರು ಇಸ್ರಯೇಲ್ ಪ್ರಾಂತಗಳಿಂದ ನೆರೆದುಬಂದವರು ಎಲ್ಲರು ಹಾಗು ಇಸ್ರಯೇಲ್, ಜುದೇಯ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗಾರರಾಗಿದ್ದರು.


ಯಾಜಕರಲ್ಲಿ ತಕ್ಕಷ್ಟು ಮಂದಿ ತಮ್ಮನ್ನು ಶುದ್ಧಪಡಿಸಿಕೊಂಡಿರಲಿಲ್ಲ. ಜನರು ಜೆರುಸಲೇಮಿನಲ್ಲಿ ಇನ್ನೂ ಕೂಡಿಬಂದಿರಲಿಲ್ಲವಾದುದರಿಂದ ಪಾಸ್ಕವನ್ನು ಕೂಡಲೆ ಆಚರಿಸಲಾಗದೆಂದು ಅರಸನು, ಅವನ ಪದಾಧಿಕಾರಿಗಳು ಹಾಗು ಜೆರುಸಲೇಮಿನ ಸರ್ವಸಂಘದವರು ತಿಳಿದು


ಅರಸ ಸೊಲೊಮೋನನೂ ಅಲ್ಲಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೆ ಅಸಂಖ್ಯಾತ ಕುರಿದನಗಳನ್ನು ಬಲಿದಾನ ಮಾಡಿದರು.


ಅನಂತರ ಸೊಲೊಮೋನನು ದಾವೀದ ನಗರವಾದ ಸಿಯೋನಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವುದಕ್ಕಾಗಿ ಇಸ್ರಯೇಲರ ಹಿರಿಯರು, ಕುಲಾಧಿಪತಿಗಳು, ಇವರೇ ಮೊದಲಾದ ಎಲ್ಲಾ ಇಸ್ರಯೇಲ್ ಗಣ್ಯವ್ಯಕ್ತಿಗಳನ್ನು ಜೆರುಸಲೇಮಿಗೆ ಕರೆಸಿಕೊಂಡನು.


ತಾನು ಸಿದ್ಧಪಡಿಸಿದ ಸ್ಥಳಕ್ಕೆ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ಎಲ್ಲಾ ಇಸ್ರಯೇಲರನ್ನು ಜೆರುಸಲೇಮಿಗೆ ಬರಮಾಡಿಕೊಂಡನು.


ಹೀಗೆ ಅರಸ ದಾವೀದನು ಕಿರ್ಯತ್ಯಾರೀಮಿನಿಂದ ಜೆರುಸಲೇಮಿಗೆ ದೇವಮಂಜೂಷವನ್ನು ತರಲು ದೇಶದ ಎಲ್ಲಾ ಕಡೆಗಳಿಂದಲೂ, ದಕ್ಷಿಣದ ಈಜಿಪ್ಟ್ ಗಡಿಯಿಂದ ಉತ್ತರದ ಹಾಮಾತ್ ಕಣಿವೆಯವರೆಗಿನ ಜನರನ್ನು ಒಂದುಗೂಡಿಸಿದನು.


ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಸೇರಿಸು, ಅವರಿಗೆ ಜಲಧಾರೆಯನ್ನು ಕೊಡುವೆನು” ಎಂದು ಸರ್ವೇಶ್ವರ ಮೋಶೆಗೆ ಹೇಳಿದ್ದು ಇಲ್ಲಿನ ಬಾವಿಯನ್ನು ಕುರಿತೇ.


ಅದರಿಂದ ನೀರು ಹೊರಟು ಬರುವುದು. ಅದನ್ನು ಜನಸಮೂಹದವರಿಗೂ ಅವರ ಜಾನುವಾರುಗಳಿಗೂ ಕುಡಿಯಲು ಕೊಡಬಹುದು,” ಎಂದರು.


“ನೀನು ಆರೋನನನ್ನೂ ಅವನ ಗಂಡು ಮಕ್ಕಳನ್ನೂ ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು, ಅಭಿಷೇಕ ತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಹಾಗು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡು ಬಾ;


ಸರ್ವೇಶ್ವರ ಹೇಳಿದಂತೆಯೇ ಮೋಶೆ ಮಾಡಿದನು. ಜನರೆಲ್ಲರು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.


ಆಗ ನೀನು ಅವರನ್ನು ದೇವದರ್ಶನದ ಗುಡಾರದ ಮುಂದಕ್ಕೆ ಕರೆದುಕೊಂಡು ಬಾ. ಇಸ್ರಯೇಲ್ ಜನರನ್ನು ಸಭೆಸೇರಿಸು.


ಶುದ್ಧಿಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಿಲಲ್ಲಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು