Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:18 - ಕನ್ನಡ ಸತ್ಯವೇದವು C.L. Bible (BSI)

18 ಅನಂತರ ಜನರ ಪರವಾಗಿ ಶಾಂತಿಸಮಾಧಾನದ ಬಲಿದಾನಕ್ಕಾಗಿ ನೇಮಕವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಳಿಕ ಜನರಿಗೋಸ್ಕರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನು ಮತ್ತು ಟಗರನ್ನು ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬಳಿಕ ಜನರಿಗೋಸ್ಕರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಗೆ ಸುತ್ತಲೂ ಎರಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆರೋನನು ಜನರಿಗಾಗಿ ಸಮಾಧಾನಯಜ್ಞವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಪುತ್ರರು ಅವುಗಳ ರಕ್ತವನ್ನು ಅವನ ಬಳಿಗೆ ತಂದರು. ಆರೋನನು ಈ ರಕ್ತವನ್ನು ಯಜ್ಞವೇದಿಕೆಯ ಸುತ್ತಲೂ ಚಿಮಿಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ಜನರಿಗಾಗಿದ್ದ ಹೋರಿ ಮತ್ತು ಟಗರನ್ನು ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು. ಆರೋನನ ಪುತ್ರರು ರಕ್ತವನ್ನು ಅವನ ಬಳಿಗೆ ತರಲು, ಅದನ್ನು ಅವನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:18
7 ತಿಳಿವುಗಳ ಹೋಲಿಕೆ  

ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.


ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ?


ಆರೋನನ ಮಕ್ಕಳು ಆ ಬಲಿಪ್ರಾಣಿಯ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಹೊಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು