Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:2 - ಕನ್ನಡ ಸತ್ಯವೇದವು C.L. Bible (BSI)

2 ಆರೋನನಿಗೆ, “ನೀನು ಪರಿಹಾರಕ ಬಲಿದಾನಕ್ಕಾಗಿ ಕಳಂಕರಹಿತವಾದ ಹೋರಿಕರುವನ್ನು ಮತ್ತು ದಹನಬಲಿಗಾಗಿ ಕಳಂಕರಹಿತವಾದ ಟಗರನ್ನು ತೆಗೆದುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ನಿನಗೋಸ್ಕರ ಸಮರ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಆರೋನನಿಗೆ, “ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ದೋಷಪರಿಹಾರಕಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನೂ ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನೂ ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೋಶೆಯು ಆರೋನನಿಗೆ ಹೀಗೆಂದನು; “ಒಂದು ಎಳೆಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊ. ಆ ಪಶುಗಳಲ್ಲಿ ಏನೂ ದೋಷವಿರಬಾರದು. ಹೋರಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಟಗರನ್ನು ಸರ್ವಾಂಗಹೋಮವಾಗಿಯೂ ಯೆಹೋವನಿಗೆ ಸಮರ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಆರೋನನಿಗೆ, “ನೀನು ಪಾಪ ಪರಿಹಾರದ ಬಲಿಗಾಗಿ ಒಂದು ಎಳೆಯ ಕರುವನ್ನೂ ಮತ್ತು ದಹನಬಲಿಗಾಗಿ ಕಳಂಕರಹಿತ ಟಗರನ್ನೂ ತೆಗೆದುಕೊಂಡು ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:2
15 ತಿಳಿವುಗಳ ಹೋಲಿಕೆ  

“ಅಭಿಷಿಕ್ತನಾದ ಯಾಜಕನೇ ಅಂಥ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಕಳಂಕರಹಿತವಾದ ಪ್ರಾಯದ ಹೋರಿಯೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.


ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ತರುವಾಯ ಅವನು ದಹನ ಬಲಿಗಾಗಿ ಟಗರನ್ನು ತರಿಸಿದನು. ಆರೋನನು ಮತ್ತು ಅವನ ಮಕ್ಕಳು ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಚಾಚಿದರು.


ಅನಂತರ ಅವನು ದೋಷಪರಿಹಾರಾರ್ಥವಾದ ಹೋರಿಯನ್ನು ತರಿಸಿದನು. ಆರೋನನು ಮತ್ತು ಅವನ ಮಕ್ಕಳು ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಚಾಚಿದರು.


“ಆರೋನನು ಮತ್ತು ಅವನ ಮಕ್ಕಳು ನನಗೆ ಯಾಜಕರಾಗಿ ಸೇವೆ ಸಲ್ಲಿಸುವಂತೆ ನೀನು ಅವರನ್ನು ಹೀಗೆ ಪ್ರತಿಷ್ಠಿಸು: ಕಳಂಕರಹಿತವಾದ ಒಂದು ಹೋರಿಕರುವನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.


ಜನರಿಗೋಸ್ಕರ ಹೇಗೋ ಹಾಗೆಯೇ ತನ್ನ ದೌರ್ಬಲ್ಯದ ನಿಮಿತ್ತ ತನಗೋಸ್ಕರವೂ ಆತನು ಪಾಪಪರಿಹಾರಕಬಲಿಯನ್ನು ಅರ್ಪಿಸಬೇಕಾಗಿದೆ.


ಮತ್ತು ನೀನು ಇಸ್ರಯೇಲರ ಸಂಗಡ ಮಾತಾಡಿ ಅವರಿಗೆ, ‘ಈ ದಿನ ಸರ್ವೇಶ್ವರ ಸ್ವಾಮಿ ಪ್ರತ್ಯಕ್ಷರಾಗುತ್ತಾರೆ. ಆದುದರಿಂದ ನೀವು ಅವರ ಸನ್ನಿಧಿಯಲ್ಲಿ ಸಮರ್ಪಿಸಲು ದೋಷಪರಿಹಾರಕ್ಕಾಗಿ ಒಂದು ಹೋತವನ್ನು, ದಹನಬಲಿಗಾಗಿ ಒಂದು ವರ್ಷದ ಕಳಂಕರಹಿತವಾದ ಒಂದು ಕರು ಹಾಗು ಒಂದು ಕುರಿಯನ್ನು,


ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:


ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


“ಒಬ್ಬನು ಆಡನ್ನಾಗಲಿ, ಕುರಿಯನ್ನಾಗಲಿ ದಹನಬಲಿದಾನ ಮಾಡಬೇಕೆಂದಿದ್ದರೆ ಅಂಥವನು ಕಳಂಕರಹಿತವಾದ ಗಂಡನ್ನು ತರಲಿ.


ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಈ ರೀತಿಯಾಗಿ ಬರಬೇಕು. ದೋಷಪರಿಹಾರಕ ಬಲಿಗಾಗಿ ಹೋರಿಯನ್ನೂ ದಹನಬಲಿಗಾಗಿ ಟಗರನ್ನೂ ತರಬೇಕು.


ಇಸ್ರಯೇಲರ ಸಮಾಜದಿಂದ ದೋಷಪರಿಹಾರಕ ಬಲಿಗಾಗಿ ಎರಡು ಹೋತಗಳನ್ನೂ ದಹನಬಲಿಗಾಗಿ ಒಂದು ಟಗರನ್ನೂ ತೆಗೆದುಕೊಂಡು ಬರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು