Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:23 - ಕನ್ನಡ ಸತ್ಯವೇದವು C.L. Bible (BSI)

23 ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅಲ್ಲಿಂದ ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಸರ್ವೇಶ್ವರನ ಮಹಿಮೆ ಜನರಿಗೆ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತರುವಾಯ ಮೋಶೆಯೂ ಆರೋನನೂ ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಮೋಶೆಯೂ ಆರೋನನೂ ದೇವದರ್ಶನದ ಗುಡಾರದ ಒಳಗೆ ಹೋಗಿ, ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವ ದೇವರ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:23
10 ತಿಳಿವುಗಳ ಹೋಲಿಕೆ  

ಮೋಶೆ ಅವರಿಗೆ, “ನೀವು ಇವುಗಳನ್ನೆಲ್ಲ ಮಾಡಬೇಕೆಂದು ಸರ್ವೇಶ್ವರ ಸ್ವಾಮಿಯೇ ಆಜ್ಞಾಪಿಸಿದ್ದಾರೆ; ಅದರಂತೆ ನೀವು ನಡೆದುಕೊಂಡರೆ ಸರ್ವೇಶ್ವರನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು,” ಎಂದು ಹೇಳಿದನು.


ಬಳಿಕ ಕೋರಹನು ಸಮುದಾಯದವರೆಲ್ಲರನ್ನು ತಮಗೆದುರಾಗಿ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿದನು. ಆಗ ಸರ್ವೇಶ್ವರನ ತೇಜಸ್ಸು ಸಮುದಾಯದವರೆಲ್ಲರಿಗೆ ಹೊಳೆಯಿತು.


ಸಮುದಾಯದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರ ವಿರುದ್ಧ ಪ್ರತಿಭಟಿಸಲು ಸಭೆ ಸೇರಿದರು. ಅವರು ದೇವದರ್ಶನದ ಗುಡಾರದತ್ತ ನೋಡಿದಾಗ, ಮೇಘವೊಂದು ಅದನ್ನು ಆವರಿಸಿತು ಮತ್ತು ಸರ್ವೇಶ್ವರನ ತೇಜಸ್ಸು ಹೊಳೆಯಿತು.


ಆದರೆ ಜನಸಂದಣಿ ಅವರಿಗೆ ಕಿವಿಗೊಡಲೊಲ್ಲದೆ ಕಲ್ಲೆಸೆದು ಅವರನ್ನು ಕೊಲ್ಲಬೇಕೆಂದಿದ್ದರು. ಆಗ ಸರ್ವೇಶ್ವರನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಹೊಳೆದು ಇಸ್ರಯೇಲರೆಲ್ಲರಿಗೂ ಕಾಣಿಸಿಕೊಂಡಿತು.


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಕರ್ತನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳಿದುಕೊಂಡು ಅವರನ್ನು ಆಶೀರ್ವದಿಸಿದನು.


ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ ಆಕಾಶದಿಂದ ಬೆಂಕಿ ಇಳಿದು ಬಂದು ದಹನಬಲಿದ್ರವ್ಯಗಳನ್ನೂ ಬಲಿಮಾಂಸವನ್ನೂ ದಹಿಸಿಬಿಟ್ಟಿತು; ಸರ್ವೇಶ್ವರನ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿತು.


ಅಂತೆಯೇ ಆರೋನನು ಇಸ್ರಯೇಲರ ಸಮಾಜಕ್ಕೆಲ್ಲ ಈ ಮಾತುಗಳನ್ನು ತಿಳಿಸುತ್ತಿರುವಾಗ ಆ ಜನರು ಮರುಭೂಮಿಯ ಕಡೆಗೆ ನೋಡಿದರು. ಆಗ ಇಗೋ, ಮೇಘದಲ್ಲಿ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು:


ಶಾಂತಿಸಮಾಧಾನ ಬಲಿಗಾಗಿ ಒಂದು ಹೋರಿ ಹಾಗು ಒಂದು ಟಗರನ್ನು ಮತ್ತು ನೈವೇದ್ಯಕ್ಕಾಗಿ ಎಣ್ಣೆ ಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಬರಬೇಕೆಂದು ಆಜ್ಞಾಪಿಸು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು