Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:3 - ಕನ್ನಡ ಸತ್ಯವೇದವು C.L. Bible (BSI)

3 ಮತ್ತು ನೀನು ಇಸ್ರಯೇಲರ ಸಂಗಡ ಮಾತಾಡಿ ಅವರಿಗೆ, ‘ಈ ದಿನ ಸರ್ವೇಶ್ವರ ಸ್ವಾಮಿ ಪ್ರತ್ಯಕ್ಷರಾಗುತ್ತಾರೆ. ಆದುದರಿಂದ ನೀವು ಅವರ ಸನ್ನಿಧಿಯಲ್ಲಿ ಸಮರ್ಪಿಸಲು ದೋಷಪರಿಹಾರಕ್ಕಾಗಿ ಒಂದು ಹೋತವನ್ನು, ದಹನಬಲಿಗಾಗಿ ಒಂದು ವರ್ಷದ ಕಳಂಕರಹಿತವಾದ ಒಂದು ಕರು ಹಾಗು ಒಂದು ಕುರಿಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, ‘ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನೆ, ಆದುದರಿಂದ ನೀವು ಆತನ ಸನ್ನಿಧಿಯಲ್ಲಿ ದೋಷಪರಿಹಾರಕ್ಕಾಗಿ ಸಮರ್ಪಿಸಲು ಒಂದು ಹೋತವನ್ನು, ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಪೂರ್ಣಾಂಗವಾದ ಕರುವನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮತ್ತು ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಅವರಿಗೆ - ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನಾದದರಿಂದ ನೀವು ಆತನ ಸನ್ನಿಧಿಯಲ್ಲಿ ಸಮರ್ಪಿಸುವದಕ್ಕೋಸ್ಕರ ದೋಷಪರಿಹಾರಕ್ಕಾಗಿ ಹೋತವನ್ನೂ ಸರ್ವಾಂಗಹೋಮಕ್ಕಾಗಿ ಒಂದು ವರುಷದ ಪೂರ್ಣಾಂಗವಾದ ಕರುವನ್ನೂ ಕುರಿಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲರಿಗೆ ಹೀಗೆ ಹೇಳು: ‘ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ತೆಗೆದುಕೊಳ್ಳಿರಿ; ಸರ್ವಾಂಗಹೋಮಕ್ಕಾಗಿ ಕರುವನ್ನೂ ಕುರಿಮರಿಯನ್ನೂ ತೆಗೆದುಕೊಳ್ಳಿರಿ. ಕರುವೂ ಕುರಿಮರಿಯೂ ಒಂದು ವರ್ಷದ್ದಾಗಿರಬೇಕು. ಆ ಪ್ರಾಣಿಗಳಲ್ಲಿ ಯಾವ ದೋಷವಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ: ‘ಪಾಪ ಪರಿಹಾರದ ಬಲಿಗಾಗಿ ಹೋತವನ್ನೂ ದಹನಬಲಿಗಾಗಿ ಕಳಂಕರಹಿತ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿಯನ್ನೂ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:3
22 ತಿಳಿವುಗಳ ಹೋಲಿಕೆ  

ಅವರು ಆ ದೇವಾಲಯದ ಪ್ರತಿಷ್ಠೆಗಾಗಿ ನೂರು ಹೋರಿ, ಇನ್ನೂರು ಟಗರು ಹಾಗು ನಾನೂರು ಕುರಿಮರಿಗಳನ್ನು ಅರ್ಪಿಸಿದರು. ಅಲ್ಲದೆ ಇಸ್ರಯೇಲರ ದೋಷಪರಿಹಾರಾರ್ಥವಾಗಿ, ಅವರ ಕುಲಗಳ ಸಂಖ್ಯಾನುಸಾರ, ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ತನ್ನ ತಪ್ಪು ತನಗೆ ತಿಳಿದು ಬಂದಾಗ ಅವನು ಕಳಂಕರಹಿತವಾದ ಒಂದು ಹೋತವನ್ನು ತಂದು ಸಮರ್ಪಿಸಬೇಕು.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈಮುಟ್ಟಿ ಪ್ರಮಾಣಮಾಡಿದರು; ತಾವು ಅಪರಾಧಿಗಳೆಂದು ಒಪ್ಪಿ ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.


ನೀವು ಒಂದು ವರ್ಷದ ಕಳಂಕರಹಿತವಾದ ಟಗರನ್ನು ದಹನಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


ತರುವಾಯ ಅವನು ಜನರ ಪರವಾಗಿ ದೋಷಪರಿಹಾರಕ ಬಲಿಯ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿಮುಕಿಸಬೇಕು.


ಇಸ್ರಯೇಲರ ಸಮಾಜದಿಂದ ದೋಷಪರಿಹಾರಕ ಬಲಿಗಾಗಿ ಎರಡು ಹೋತಗಳನ್ನೂ ದಹನಬಲಿಗಾಗಿ ಒಂದು ಟಗರನ್ನೂ ತೆಗೆದುಕೊಂಡು ಬರಬೇಕು.


ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂಬತ್ತು ಸೇರು ಗೋಧಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


ಗಂಡುಮಗುವನ್ನು ಹೆತ್ತರೂ ಹೆಣ್ಣುಮಗುವನ್ನು ಹೆತ್ತರೂ ಆಕೆಯ ಶುದ್ಧೀಕರಣ ದಿನಗಳು ಮುಗಿದಾಗ ಆಕೆ ದಹನಬಲಿಗಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಒಂದು ಮರಿ ಪಾರಿವಾಳವನ್ನು, ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.


ಆ ಮರಿಯು ಯಾವ ದೋಷವೂ ಇಲ್ಲದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು.


ಬಳಿಕ ಅವರು ಒಂದು ಹೋತವನ್ನು ಕೊಯ್ದು, ಅದರ ರಕ್ತದಲ್ಲಿ ಜೋಸೆಫನ ನಿಲುವಂಗಿಯನ್ನು ಅದ್ದಿ


ಆರೋನನಿಗೆ, “ನೀನು ಪರಿಹಾರಕ ಬಲಿದಾನಕ್ಕಾಗಿ ಕಳಂಕರಹಿತವಾದ ಹೋರಿಕರುವನ್ನು ಮತ್ತು ದಹನಬಲಿಗಾಗಿ ಕಳಂಕರಹಿತವಾದ ಟಗರನ್ನು ತೆಗೆದುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ನಿನಗೋಸ್ಕರ ಸಮರ್ಪಿಸು.


ಶಾಂತಿಸಮಾಧಾನ ಬಲಿಗಾಗಿ ಒಂದು ಹೋರಿ ಹಾಗು ಒಂದು ಟಗರನ್ನು ಮತ್ತು ನೈವೇದ್ಯಕ್ಕಾಗಿ ಎಣ್ಣೆ ಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಬರಬೇಕೆಂದು ಆಜ್ಞಾಪಿಸು,” ಎಂದನು.


ಜನರೆಲ್ಲರ ದೋಷಪರಿಹಾರಕ್ಕಾಗಿ ಸಮರ್ಪಿತವಾದ ಹೋತದ ಬಗ್ಗೆ ಅದು ಏನಾಯಿತೆಂದು ಮೋಶೆ ವಿಚಾರಿಸಿದಾಗ ಅದನ್ನು ಸುಟ್ಟುಬಿಟ್ಟರೆಂದು ತಿಳಿದುಬಂದಿತು. ಇದನ್ನು ಕೇಳಿ ಮೋಶೆ, ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡನು.


“ಅಭಿಷಿಕ್ತನಾದ ಯಾಜಕನೇ ಅಂಥ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಕಳಂಕರಹಿತವಾದ ಪ್ರಾಯದ ಹೋರಿಯೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು