Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:19 - ಕನ್ನಡ ಸತ್ಯವೇದವು C.L. Bible (BSI)

19 ಇವರು ನಿಮ್ಮಲ್ಲಿ ಭಿನ್ನಭೇದವನ್ನು ಉಂಟುಮಾಡುವವರು, ಪ್ರಾಪಂಚಿಕ ವಿಷಯಾಸಕ್ತರು; ಪವಿತ್ರಾತ್ಮರಹಿತರಾಗಿ ಬಾಳುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇವರು ಭೇದಗಳನ್ನು ಉಂಟುಮಾಡುವವರೂ ಪ್ರಾಕೃತಮನುಷ್ಯರೂ ದೇವರಾತ್ಮವಿಲ್ಲದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈ ಜನರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾರೆ. ಈ ಜನರು ತಮ್ಮ ಪಾಪಸ್ವಭಾವದ ಅಪೇಕ್ಷೆಯಂತೆ ಮಾತ್ರ ಮಾಡುತ್ತಾರೆ. ಅವರಲ್ಲಿ ಪವಿತ್ರಾತ್ಮನಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇವರು ನಿಮ್ಮಲ್ಲಿ ಭಿನ್ನಾಭಿಪ್ರಾಯವನ್ನು ಉಂಟುಮಾಡುವವರೂ ಪ್ರಾಪಂಚಿಕ ಮನುಷ್ಯರೂ ಪವಿತ್ರಾತ್ಮ ದೇವರಿಲ್ಲದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಹಿ ಲೊಕಾ ಹ್ಯಾ ಜಗಾಚಿ ಲೊಕಾತ್ನಿ ಭೆದ್‍ಭಾವ್ ಯೆವ್ಕ್ ಕಾರನ್ ಹೊತಾತ್, ತೆನಿ ಹ್ಯಾ ಜಗಾಚ್ಯಾ ಆಶಾಚ್ಯಾ ಪರ್ಕಾರ್ ಚಲ್ತಾತ್, ತೆಂಚ್ಯಾಕ್ಡೆ ಪವಿತ್ರ್ ಆತ್ಮೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:19
11 ತಿಳಿವುಗಳ ಹೋಲಿಕೆ  

ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.


ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ.


ಅಂಥ ಜ್ಞಾನ ದೇವರಿಂದ ಬಂದ ಜ್ಞಾನವಲ್ಲ; ಅದು ಪ್ರಾಪಂಚಿಕವಾದುದು, ಪ್ರಾಕೃತವಾದುದು, ಪೈಶಾಚಿಕವಾದುದು.


ಸಭೆ ಸೇರುವ ರೂಢಿಯನ್ನು ಕೆಲವರು ಕೈಬಿಟ್ಟಿದ್ದಾರೆ. ನಾವು ಹಾಗೆ ಮಾಡದಿರೋಣ. ನಿಮಗೆ ತಿಳಿದಿರುವಂತೆ ಪ್ರಭು ಪ್ರತ್ಯಕ್ಷರಾಗುವ ದಿನವು ಸಮೀಪಿಸುತ್ತಿರುವುದರಿಂದ ಮತ್ತಷ್ಟು ಹೆಚ್ಚಾಗಿ ಒಬ್ಬರನ್ನೊಬ್ಬರು ಪ್ರೋತ್ಸಾಹಿಸೋಣ.


ಬೆಂಗಾಡಿನಲ್ಲಿ ದ್ರಾಕ್ಷೆ ಸಿಕ್ಕಿದಂತೆ ಇಸ್ರಯೇಲ್ ನನಗೆ ಸಿಕ್ಕಿತು. ಅಂಜೂರದ ಮರದ ಮೊತ್ತಮೊದಲ ಹಣ್ಣು ಕಣ್ಣಿಗೆ ಬೀಳುವಂತೆ ನಿಮ್ಮ ಪಿತೃಗಳು ನನಗೆ ಕಾಣಿಸಿಕೊಂಡರು. ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾದರು. ಅವರು ನೆಚ್ಚಿಕೊಂಡ ದೇವತೆಯಂತೆ ನೀಚರಾದರು.


ಬೇರೆಯವರೊಡನೆ ಸೇರದವನು ಸ್ವೇಚ್ಛಾನುಸಾರ ನಡೆಯುವನು; ಇತರರು ಸುಜ್ಞಾನವೆನ್ನುವುದನ್ನೇ ವಿರೋಧಿಸುವನು.


ಸೂಳೆಯರಾಗಿ ನಡೆಯುವ ಪುತ್ರಿಯರನ್ನು ನಾನು ದಂಡಿಸುವುದಿಲ್ಲ, ವ್ಯಭಿಚಾರ ಮಾಡುವ ಸೊಸೆಗಳನ್ನು ನಾನು ಶಿಕ್ಷಿಸುವುದಿಲ್ಲ. ಕಾರಣ, ನೀವೇ ಸೂಳೆಯರನ್ನು ಸೇರಿಕೊಂಡು ಅಡ್ಡದಾರಿ ಹಿಡಿಯುತ್ತೀರಿ. ದೇವದಾಸಿಯರೊಂದಿಗೆ ಸೇರಿ ಬಲಿಯನ್ನು ಅರ್ಪಿಸುತ್ತೀರಿ. ‘ಮತಿಹೀನರು ಗತಿಸಿಹೋಗುವರು’ ಎಂಬ ಹೇಳಿಕೆ ಖಂಡಿತವಾಗಿ ನಿಮಗೆ ಅನ್ವಯಿಸುತ್ತದೆ.


“ಏಕೆಂದರೆ ಇಸ್ರಯೇಲ್ ವಂಶದವರಲ್ಲಾಗಲಿ ಇಸ್ರಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ ಅವನಿಗೆ ಸರ್ವೇಶ್ವರನಾದ ನಾನೇ ಉತ್ತರಕೊಡುವೆನು.


ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ಬೇರೆಯವರಿಗೆ, ‘ಅಲ್ಲೇ ನಿಲ್ಲು, ಹತ್ತಿರ ಬರಬೇಡ; ನಿನಗಿಂತ ನಾನು ಮಡಿವಂತ’ ಎನ್ನುತ್ತಾರೆ. ಹೀಗೆ ಇವರು ನನಗೆ ಉಸಿರುಕಟ್ಟುವ ಹೊಗೆಯಾಗಿದ್ದಾರೆ; ದಿನವೆಲ್ಲ ಉರಿಯುವ ಬೆಂಕಿಯಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು