Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:12 - ಕನ್ನಡ ಸತ್ಯವೇದವು C.L. Bible (BSI)

12 ಆಗ ಸ್ವಾಮಿ ನನಗೆ, “ಸರಿಯಾಗಿ ನೋಡಿದೆ; ನನ್ನ ಮಾತನ್ನು ನೆರವೇರಿಸುವುದಕ್ಕೆ ಎಚ್ಚರಗೊಂಡಿದ್ದೇನೆಂದು ತಿಳಿದುಕೊ” ಎಂಬುದಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಯೆಹೋವನು ನನಗೆ, “ಸರಿಯಾಗಿ ನೋಡಿದ್ದಿ, ನನ್ನ ಮಾತನ್ನು ನೆರವೇರಿಸುವುದಕ್ಕೆ ನೀನು ಎಚ್ಚರಗೊಂಡಿರುವೆ ಎಂದು ತಿಳಿದುಕೋ” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಯೆಹೋವನು ನನಗೆ - ಸರಿಯಾಗಿ ನೋಡಿದ್ದೀ, ನನ್ನ ಮಾತನ್ನು ನೆರವೇರಿಸುವದಕ್ಕೆ ಎಚ್ಚರಗೊಂಡಿದ್ದೇನೆ ಎಂದು ತಿಳಿದುಕೋ ಎಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಯೆಹೋವನು, “ನೀನು ಸರಿಯಾಗಿ ನೋಡಿರುವೆ, ನನ್ನ ಮಾತನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆ” ಎಂದು ತಿಳಿದುಕೊ ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೋವ ದೇವರು ನನಗೆ, “ನೀನು ಚೆನ್ನಾಗಿ ನೋಡಿದ್ದೀ. ಏಕೆಂದರೆ ನನ್ನ ವಾಕ್ಯವನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆಂದು, ತಿಳಿದುಕೊ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:12
15 ತಿಳಿವುಗಳ ಹೋಲಿಕೆ  

ಆದಕಾರಣ ನೀನು ಅವರಿಗೆ ಹೀಗೆ ಹೇಳು: ಸರ್ವೇಶ್ವರನಾದ ದೇವರು ಹೇಳುವುದನ್ನು ಗಮನಿಸಿ: ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ಸಾವಕಾಶವಾಗದು; ನಾನಾಡುವ ಮಾತು ನೆರವೇರುವುದು ಖಂಡಿತ; ಇದು ಸರ್ವೇಶ್ವರನಾದ ದೇವರ ನುಡಿ.”


ನಾನೇ ಸರ್ವೇಶ್ವರ; ನಾನು ನುಡಿದೆ ತೀರುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು. ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು. ಇದು ಸರ್ವೇಶ್ವರನಾದ ದೇವರ ವಾಕ್ಯ.”


ಯೇಸು, “ಸರಿಯಾಗಿ ಉತ್ತರಕೊಟ್ಟೆ, ಅದರಂತೆ ಮಾಡು. ನಿನಗೆ ಅಮರಜೀವ ಲಭಿಸುವುದು,” ಎಂದರು.


ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. “ಮಾಗಿದ ಹಣ್ಣಿನ ಒಂದು ಬುಟ್ಟಿ” ಎಂದು ಉತ್ತರಿಸಿದೆ. ಆಗ ಸರ್ವೇಶ್ವರ ನನಗೆ ಹೀಗೆಂದರು: “ಇಸ್ರಯೇಲರಾದ ನನ್ನ ಜನರಿಗೆ ಕಡೆಗಾಲ ಮಾಗುತ್ತಾ ಬಂದಿದೆ. ಇನ್ನು ಅವರನ್ನು ಕಂಡೂ ಕಾಣದಂತೆ ಇರಲಾರೆ. ಅವರನ್ನು ದಂಡಿಸಿಯೇ ತೀರುವೆನು.


“ನೀವು ನನಗೆ ಹೇಳಿದ ಈ ಮಾತುಗಳನ್ನು ಸರ್ವೇಶ್ವರಸ್ವಾಮಿ ಕೇಳಿ ನನಗೆ ಹೀಗೆಂದರು: ‘ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಅವರು ಹೇಳಿದ್ದು ಸರಿಯಾಗಿದೆ.


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ಆಗ ಸರ್ವೇಶ್ವರ ನನಗೆ, ‘ಇವರು ಹೇಳಿದ್ದು ಸರಿಯಾಗಿದೆ;


ಇದನ್ನು ಕೇಳಿದ ಕೆಲವು ಧರ್ಮಶಾಸ್ತ್ರಿಗಳು, “ಬೋಧಕರೇ, ಚೆನ್ನಾಗಿ ಹೇಳಿದಿರಿ,” ಎಂದರು.


ಅವರನ್ನು ಕೀಳಲು ಕೆಡವಲು, ಅಳಿಸಲು ಹಾಳುಮಾಡಲು, ಈ ಮೊದಲು ಎಚ್ಚರವಹಿಸಿದ ಹಾಗೆಯೆ ಇನ್ನು ಮುಂದೆ ಅವರನ್ನು ಕಟ್ಟಲು ಹಾಗು ನೆಡಲು ಎಚ್ಚರವಹಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಮತ್ತೆ ಸರ್ವೇಶ್ವರ ನನಗೆ, “ಇನ್ನೂ ಏನು ನೋಡುತ್ತಿರುವೆ?” ಎಂದರು. ಅದಕ್ಕೆ ನಾನು, “ಉರಿಯುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯೊಂದನ್ನು ನೋಡುತ್ತಿದ್ದೇನೆ. ಅದರ ಬಾಯಿ ಉತ್ತರದಿಂದ ಇತ್ತ ಬಾಗಿಕೊಂಡಿದೆ,” ಎಂದೆ.


ಅಂತೆಯೇ, ನನ್ನ ಬಾಯಿಂದ ಹೊರಡುವ ಮಾತು ನನ್ನ ಇಷ್ಟಾರ್ಥವನು ನೆರವೇರಿಸಿದ ಹೊರತು, ನನ್ನ ಉದ್ದೇಶವನು ಕೈಗೂಡಿಸಿದ ಹೊರತು. ನನ್ನ ಬಳಿಗೆ ವ್ಯರ್ಥವಾಗಿ ಹಿಂದಿರುಗದು.


ಆಗ ಸರ್ವೇಶ್ವರ ನನ್ನನ್ನು, “ಯೆರೆಮೀಯನೇ, ನಿನಗೆ ಕಾಣುತ್ತಿರುವುದು ಏನು?” ಎಂದು ಕೇಳಿದರು. ನಾನು, “ಅಂಜೂರದ ಹಣ್ಣುಗಳನ್ನು ನೋಡುತ್ತಿದ್ದೇನೆ. ಒಳ್ಳೆಯ ಹಣ್ಣುಗಳು ಅತ್ತ್ಯುತ್ತಮವಾಗಿವೆ. ಕೆಟ್ಟ ಹಣ್ಣುಗಳು ಬಹಳ ಕೆಟ್ಟಿವೆ. ಯಾರೂ ತಿನ್ನಲಾಗದಷ್ಟು ಅಸಹ್ಯವಾಗಿವೆ,” ಎಂದು ಉತ್ತರಕೊಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು