Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:9 - ಕನ್ನಡ ಸತ್ಯವೇದವು C.L. Bible (BSI)

9 ಬಳಿಕ ಸ್ವಾಮಿ ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ - ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಯೆರೆಮೀಯನೇ, ಇಗೋ, ನಾನು ನನ್ನ ಮಾತುಗಳನ್ನು ನಿನ್ನ ಬಾಯಲ್ಲಿ ಇಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಯೆಹೋವ ದೇವರು ಕೈಚಾಚಿ, ನನ್ನ ಬಾಯಿಯನ್ನು ಮುಟ್ಟಿ ನನಗೆ, “ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:9
22 ತಿಳಿವುಗಳ ಹೋಲಿಕೆ  

ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ಏಕೆಂದರೆ, ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,” ಎಂದರು.


ಆಕಾಶವನ್ನ ಹರಡಿದೆ; ಭುವಿಯನ್ನು ಸ್ಥಾಪಿಸಿದೆ; ಸಿಯೋನಿಗೆ ‘ನೀನೆನ್ನ ಜನತೆ’ ಎಂದೆ ನಾನಾಡುವುದನೆ ನಿನ್ನಿಂದ ಮಾತನಾಡಿಸಿದೆ, ನಿನ್ನನು ನನ್ನ ಅಂಗೈಯಲಿ ಕೊರೆದು ಕಾದಿಟ್ಟೆ.”


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು.


ಆದುದರಿಂದ ಸೇನಾಧೀಶ್ವರ ಸರ್ವೇಶ್ವರ ಆದ ದೇವರು ಯೆರೆಮೀಯನಿಗೆ ಹೀಗೆಂದರು : “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು; ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು; ಆ ಬೆಂಕಿ ಅವರನ್ನು ಸುಟ್ಟುಹಾಕುವುದು.


ಇದಲ್ಲದೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ನಿನಗೆ ನುಡಿಯುವ, ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಮನಸ್ಸಿನಲ್ಲಿಟ್ಟುಕೋ.


ಮಾಡಿದನು ನನ್ನ ನುಡಿಯನ್ನು ಹರಿತವಾದ ಖಡ್ಗವನ್ನಾಗಿ ಮುಚ್ಚಿಟ್ಟಹನು ನನ್ನನ್ನು ತನ್ನ ಕರದ ನೆರಳಿನಲ್ಲಿ ರೂಪಿಸಿಹನು ನನ್ನನ್ನು ಚೂಪಾದ ಬಾಣವನ್ನಾಗಿ, ಬಚ್ಚಿಟ್ಟಿಹನು ನನ್ನನು ತನ್ನ ಬತ್ತಳಿಕೆಯಲ್ಲಿ.


ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದೊಯ್ದು, ತಮ್ಮ ಬೆರಳುಗಳನ್ನು ಅವನ ಕಿವಿಯೊಳಗೆ ಇಟ್ಟರು.


ಸರ್ವೇಶ್ವರ ಬಿಳಾಮನಿಗೆ ಹೇಳಬೇಕಾದುದನ್ನು ಹೇಳಿ, “ನೀನು ಬಾಲಾಕನ ಬಳಿಗೆ ಹಿಂದಿರುಗಿ ಹೋಗಿ ನಾನು ಹೇಳಿದ್ದನ್ನು ತಿಳಿಸು,” ಎಂದು ಆಜ್ಞಾಪಿಸಿದರು.


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೆ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


“ನೀನು ಗ್ರಂಥ ಬರೆಯುವ ಒಂದು ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಯೇಲ್, ಯೆಹೂದ ಹಾಗೂ ಸಕಲ ರಾಷ್ಟ್ರಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲ ಬರೆ.


ಆಗ ಯಾರದೋ ಕೈ ನನ್ನನ್ನು ಮುಟ್ಟಿದಂತಾಯಿತು. ನಾನು ಗಡಗಡನೆ ನಡುಗುತ್ತಾ ಅಂಗೈಗಳನ್ನೂ ಮೊಣಕಾಲುಗಳನ್ನೂ ಊರಿ ನಿಲ್ಲುವಂತೆ ಮಾಡಿತು.


ಆಗ ನರರೂಪ ಹೊಂದಿದ್ದ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದ. ನಾನು ಬಾಯಿ ತೆರೆದು ನನ್ನ ಮುಂದೆ ನಿಂತಿದ್ದವನಿಗೆ, “ಎನ್ನೊಡೆಯಾ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಾನು ನಿತ್ರಾಣನಾಗಿದ್ದೇನೆ.


ಹೋರೇಬಿನಲ್ಲಿ ನೀವು ಸಭೆಕೂಡಿದ ದಿನದಂದು ಇದನ್ನೇ ನೀವು ಕೋರಿಕೊಂಡಿರಿ; ‘ನಮ್ಮ ದೇವರಾದ ಸರ್ವೇಶ್ವರನ ಸ್ವರವನ್ನು ಇನ್ನು ಕೇಳಲು ಹಾಗು ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡಲು ನಮಗೆ ಮನಸ್ಸಿಲ್ಲ; ಹಾಗೇನಾದರು ಕೇಳಿ, ನೋಡಿದರೆ ಸತ್ತೇವು’ ಎಂದು ನೀವು ಹೇಳಿದಿರಿ.


ಆಗ ಸರ್ವೇಶ್ವರ ನನಗೆ, ‘ಇವರು ಹೇಳಿದ್ದು ಸರಿಯಾಗಿದೆ;


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಅದಕ್ಕೆ ಸರ್ವೇಶ್ವರ : “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ.


ಅಂತೆಯೇ, ಪ್ರವಾದಿ ಯೆರೆಮೀಯನು ಈ ವಿಷಯಗಳನ್ನೆಲ್ಲ ಜುದೇಯದ ಅರಸ ಚಿದ್ಕೀಯನಿಗೆ ಜೆರುಸಲೇಮಿನಲ್ಲೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು