Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:18 - ಕನ್ನಡ ಸತ್ಯವೇದವು C.L. Bible (BSI)

18 ಏಕೆಂದರೆ ಸರ್ವೇಶ್ವರ ನುಡಿವ ಮಾತಿದು : “ಇಗೋ, ಈ ಸಾರಿ ಈ ನಾಡಿನ ನಿವಾಸಿಗಳನ್ನು ಕವಣೆಯ ಕಲ್ಲಂತೆ ಎಸೆದುಬಿಡುವೆನು; ಬುದ್ಧಿಬರಲೆಂದು ಅವರನ್ನು ಬಾಧಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿಬರಲೆಂದು ಅವರನ್ನು ಬಾಧಿಸುವೆನು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನು ಹೇಳುತ್ತಾನೆ: “ಈ ಸಾರಿ ಯೆಹೂದದ ಜನರನ್ನು ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನ್ನು ತರುತ್ತೇನೆ. ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಏಕೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣೆಯಿಂದ ಎಸೆದುಬಿಡುತ್ತೇನೆ. ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:18
11 ತಿಳಿವುಗಳ ಹೋಲಿಕೆ  

ಯಾವನಾದರೂ ನನ್ನ ಒಡೆಯರಾದ ನಿಮ್ಮನ್ನು ಹಿಂಸಿಸಿ ಜೀವತೆಗೆಯಬೇಕೆಂದು ಇರುವಾಗ, ಆ ನಿಮ್ಮ ಜೀವ, ತಮ್ಮ ದೇವರಾದ ಸರ್ವೇಶ್ವರನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಸುಭದ್ರವಾಗಿರಲಿ; ಆದರೆ ನಿಮ್ಮ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.”


ಸರ್ವೇಶ್ವರ ತಮ್ಮ ಅಂತರಾಳದ ಸಂಕಲ್ಪಗಳನ್ನು ನಡೆಸಿ ನೆರವೇರಿಸುವ ತನಕ ಅವರ ಆ ಕೋಪವು ಹಿಂದಿರುಗದು. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸಿಕೊಳ್ಳುವಿರಿ.


ಈ ಕಾರಣಗಳ ನಿಮಿತ್ತ ನೀವಾಗಲಿ ನಿಮ್ಮ ಪೂರ್ವಜರಾಗಲಿ ನೋಡದ ನಾಡಿಗೆ ನಿಮ್ಮನ್ನು ಇಲ್ಲಿಂದ ಎಸೆದುಬಿಡುವೆನು. ಅಲ್ಲಿ ಹಗಲಿರುಳೂ ಅನ್ಯದೇವತೆಗಳಿಗೆ ಸೇವೆಮಾಡುವಿರಿ, ನನ್ನ ದಯೆ ದಾಕ್ಷಿಣ್ಯ ಮಾತ್ರ ನಿಮಗೆ ದೊರಕದು".


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟಿರುವ ನಾಡಿನ ಪಟ್ಟಣಗಳಿಗೆಲ್ಲಾ ಅವರು ಮುತ್ತಿಗೆ ಹಾಕುವರು; ನೀವು ನೆಚ್ಚಿಕೊಳ್ಳುವ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.


ನಿನ್ನನ್ನೂ ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂಮಿಯಲ್ಲದ ಅನ್ಯದೇಶಕ್ಕೆ ಎಸೆದುಬಿಡುವೆನು. ನೀವು ಅಲ್ಲೇ ಸಾಯುವಿರಿ.


ಸರ್ವೇಶ್ವರ ಇಂತೆನ್ನುತ್ತಾರೆ, “ಮಾನವರ ಮೇಲೆ ಕಷ್ಟ - ಸಂಕಷ್ಟಗಳನ್ನು ಬರಮಾಡುವೆನು; ಅವರು ಕುರುಡರಂತೆ ತಡಕಾಡುವರು. ಏಕೆಂದರೆ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ; ಅವರ ರಕ್ತವನ್ನು ನೀರಿನಂತೆ ಚೆಲ್ಲಲಾಗುವುದು; ಅವರ ಹೆಣಗಳನ್ನು ಕಸದಂತೆ ಕೊಳೆಯಲು ಬಿಡಲಾಗುವುದು.”


ಎಲೈ ಬಲಾಢ್ಯನೇ, ಸರ್ವೇಶ್ವರ ನಿನ್ನನ್ನು ಬಿಗಿಹಿಡಿದು ದೂರಕ್ಕೆಸೆಯುವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು