Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:3 - ಕನ್ನಡ ಸತ್ಯವೇದವು C.L. Bible (BSI)

3 ಆ ಜನಾಂಗಗಳ ಧಾರ್ಮಿಕ ಪದ್ಧತಿಗಳು ಶೂನ್ಯ. ಅರಣ್ಯದ ಮರಗಳನ್ನು ಅವರು ಕತ್ತರಿಸುತ್ತಾರೆ ಬಡಗಿಯ ಕೈಯಿಂದ, ಅವನ ಉಳಿಯಿಂದ, ಅದನ್ನು ರೂಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಬಾಚಿಯಿಂದ ರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬೇರೆ ಜನರ ಸಂಪ್ರದಾಯಗಳು ನಿಷ್ಪ್ರಯೋಜಕವಾದವುಗಳಾಗಿವೆ. ಅವರ ವಿಗ್ರಹಗಳು ಅರಣ್ಯದ ಮರವಲ್ಲದೆ ಮತ್ತೇನಲ್ಲ. ಅವರ ವಿಗ್ರಹಗಳು ಬಡಗಿಯು ಉಳಿಯಿಂದ ಮಾಡಲ್ಪಟ್ಟವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ. ಹೇಗೆಂದರೆ, ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ. ಅದು ಕೊಡಲಿಯಿಂದ ಕಡಿದ ಬಡಿಗೆಯವನ ಕೈಕೆಲಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:3
17 ತಿಳಿವುಗಳ ಹೋಲಿಕೆ  

ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನೇ ಅಶುದ್ಧಮಾಡಿಕೊಳ್ಳದೆ ನನ್ನ ವಿಧಿಗಳನ್ನು ಅನುಸರಿಸಿ ನಡೆಯಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.


ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ.


ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ; ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯ ಆಯಿತು.


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


“ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸುಗುಟ್ಟಬೇಡ. ತಮ್ಮ ಪ್ರಾರ್ಥನೆ ದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.


“ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.


“ನಿಮ್ಮ ಪಿತೃಗಳು ನನ್ನಲ್ಲಿ ಯಾವ ಕೊರತೆಯನ್ನು ಕಂಡು ನನ್ನಿಂದ ದೂರವಾದರು? ಅವರು ವ್ಯರ್ಥಾಚಾರಗಳನ್ನು ಅನುಸರಿಸುತ್ತಾ ತಾವೇ ವ್ಯರ್ಥವಾಗಿಬಿಟ್ಟರು !


ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.


ಅವರ ವಿಗ್ರಹ ಬರೀ ಬೆಳ್ಳಿ ಬಂಗಾರ I ಅವು ಮಾನವನ ಕೈ ಕೆಲಸಗಳು ಮಾತ್ರ II


ನನ್ನ ಸ್ವಜನರು ನನ್ನನ್ನೆ ತೊರೆದುಬಿಟ್ಟು, ಅನ್ಯದೇವತೆಗಳಿಗೆ ಬಲಿಯರ್ಪಿಸಿ, ತಮ್ಮ ಕೈಯಿಂದ ನಿರ್ಮಿಸಿದ ಮೂರ್ತಿಗಳಿಗೆ ಆರಾಧನೆ ಮಾಡುತ್ತಿದ್ದಾರೆ; ಇಂಥ ಅಧರ್ಮಕ್ಕೆಲ್ಲ ನಾನು ಅವರಿಗೆ ವಿಧಿಸುವ ದಂಡನೆಗಳನ್ನು ತಿಳಿಸುವೆನು, ಕೇಳು :


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು