Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:22 - ಕನ್ನಡ ಸತ್ಯವೇದವು C.L. Bible (BSI)

22 ಅವರ ವಿಷಯವಾಗಿ ಸರ್ವೇಶ್ವರ, “ಇಗೋ ಅವರನ್ನು ನಾನು ದಂಡಿಸಿಯೇ ತೀರುವೆನು. ಅವರ ಯುವಕರು ಕತ್ತಿಗೆ ತುತ್ತಾಗುವರು. ಅವರ ಗಂಡುಹೆಣ್ಣು ಮಕ್ಕಳು ಕ್ಷಾಮದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು, ಅವರ ಗಂಡು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸರ್ವಶಕ್ತನಾದ ಯೆಹೋವನು, “ನಾನು ಕೂಡಲೇ ಅನಾತೋತಿನ ಜನರನ್ನು ದಂಡಿಸುವೆನು. ಅವರ ಯುವಕರೆಲ್ಲ ಯುದ್ಧದಲ್ಲಿ ಮಡಿದು ಹೋಗುವರು. ಅವರ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಹಸಿವಿನಿಂದ ಸತ್ತುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:22
9 ತಿಳಿವುಗಳ ಹೋಲಿಕೆ  

ಆದರೆ ಈಗ ಅವರ ಮಕ್ಕಳು ಕ್ಷಾಮಕ್ಕೆ ಗುರಿಯಾಗಲಿ. ಕತ್ತಿಗೆ ತುತ್ತಾಗಲಿ. ಅವರ ಮಡದಿಯರು ವಿಧವೆಯರಾಗಲಿ, ಮಕ್ಕಳನ್ನು ಕಳೆದುಕೊಳ್ಳಲಿ, ಅವರ ಗಂಡಂದಿರು ಸತ್ತುಬೀಳಲಿ. ಯುವಕರು ಕಾಳಗ-ಕತ್ತಿಗೆ ಬಲಿಯಾಗಲಿ.


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ವಯಸ್ಕರೂ ವೃದ್ಧರೂ ಬಿದ್ದಿದ್ದಾರೆ ಬೀದಿಗಳಲ್ಲೆ ತರುಣತರುಣಿಯರು ತುತ್ತಾಗಿದ್ದಾರೆ ಖಡ್ಗಗಳಿಗೆ. ನಿನ್ನ ಪ್ರಕೋಪದ ದಿನದಂದು ಹತಮಾಡಿದೆಯಲ್ಲಾ ಅವರನ್ನು ಕನಿಕರಿಸದೆ !


ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು.


ನಿಮ್ಮ ದುಷ್ಕೃತ್ಯಗಳಿಗೆ ವಿಧಿಸುವೆನು ತಕ್ಕ ದಂಡನೆ, ಬೆಂಕಿ ಹಚ್ಚುವೆನು ನಿಮ್ಮ ಪುರಿಯೆಂಬ ವನಕ್ಕೆ, ಅದು ಕಬಳಿಸಿಬಿಡುವುದು ಸುತ್ತಮುತ್ತಣ ವಸ್ತುಗಳನ್ನು.”


ಜೆರುಸಲೇಮಿನವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸಿದಂತೆ ಈಜಿಪ್ಟಿನಲ್ಲಿ ವಾಸಿಸುವವರನ್ನೂ ದಂಡಿಸುವೆನು.


ಅದರ ದುರ್ಗತಿಯ ದಿನದಂದು ಅಲ್ಲಿನ ಯುವಕರು ಚೌಕಗಳಲ್ಲಿ ಬಿದ್ದು ಸಾಯುವರು, ಯುದ್ಧ ವೀರರೆಲ್ಲರು ಸುಮ್ಮನಿರುವರು.


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಯುವಜನರು ಖಡ್ಗಕ್ಕೆ ತುತ್ತಾಗುವಂತೆ ಮಾಡಿದೆ. ನಿಮ್ಮ ಕುದುರೆಗಳು ಸೂರೆಯಾಗುವಂತೆ ಮಾಡಿದೆ. ನಿಮ್ಮ ದಂಡಿನವರ ಹೆಣಗಳು ಕೊಳೆತು ನಾರುವ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರಸ್ವಾಮಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು