Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:5 - ಕನ್ನಡ ಸತ್ಯವೇದವು C.L. Bible (BSI)

5 (ಆಗ ಸರ್ವೇಶ್ವರ ನನಗೆ) : “ಕಾಲಾಳುಗಳ ಸಂಗಡ ಓಡಲು ಆಯಾಸಗೊಂಡೆಯಾದರೆ ಕುದುರೆಗಳೊಂದಿಗೆ ಓಡಿ ಹೇಗೆ ಹೋರಾಡುವೆ? ಪ್ರಶಾಂತ ಪ್ರದೇಶದಲ್ಲಿ ನಿರ್ಭಯನಾಗಿ ನಿಲ್ಲಲಾರೆಯಾದರೆ ಜೋರ್ಡಾನಿನ ದಟ್ಟ ಅಡವಿಯಲ್ಲಿ ಏನು ಮಾಡಬಲ್ಲೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಂತೆನ್ನುವ ಯೆಹೋವನು ನನಗೆ, “ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 [ಇಂತೆನ್ನುವ ನನಗೆ ಯೆಹೋವನು ಹೀಗೆ ಹೇಳಿದ್ದಾನೆ - ] ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ನಿರಪಾಯದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಯೆರೆಮೀಯನೇ, ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿರುವುದಾದರೆ, ಕುದುರೆಗಳೊಂದಿಗೆ ಓಡಿ ಹೇಗೆ ಗೆಲ್ಲುವೆ? ಸುರಕ್ಷಿತವಾದ ದೇಶದಲ್ಲಿ ನೀನು ದಣಿದುಕೊಂಡರೆ ಜೋರ್ಡನ್ ನದಿ ದಡದ ಭಯಾನಕ ಮುಳ್ಳುಕಂಟಿಯ ಪ್ರದೇಶಕ್ಕೆ ಬಂದಾಗ ಏನು ಮಾಡುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಕಾಲಾಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ, ಕುದುರೆಗಳ ಸಂಗಡ ಹೇಗೆ ಹೋರಾಡುವೆ? ನೀನು ಸುರಕ್ಷಿತವಾದ ದೇಶದಲ್ಲಿ ಎಡವಿದರೆ, ಯೊರ್ದನಿನ ದಟ್ಟ ಅಡವಿಯಲ್ಲಿ ಹೇಗೆ ಸುಧಾರಿಸುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:5
14 ತಿಳಿವುಗಳ ಹೋಲಿಕೆ  

ಪ್ರಿಯರೇ, ಪರಿಶೋಧನೆಗೆಂದು ನಿಮಗೆ ಬಂದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸಂಭವಿಸಿಬಿಟ್ಟಿತೆಂದು ವಿಸ್ಮಯಪಡಬೇಡಿ.


ಆಪತ್ತುಕಾಲದಲ್ಲಿ ನೀನು ಎದೆಗುಂದಿದವನಾದರೆ ನಿನ್ನ ಬಲವು ಅಸಮರ್ಪಕವಾದುದೆ.


ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


“ಎದೋಮ್ಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇದೋ ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ಏರಿಬರುವೆನು. ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯುವಂಥ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


ನಿನ್ನ ಜಲಪಾತಗಳ ಘನನಿನಾದ, ಮಡುವು ಮಡುವನು ಕರೆದಂತಿದೆ I ನಿನ್ನಲೆಗಳು, ಎಲ್ಲ ತರಂಗಗಳು ತಲೆಯ ಮೇಲೆ ಹಾದು ಹೋದಂತಿವೆ II


ಮಗನೇ, ಸರ್ವೇಶ್ವರನ ಶಿಕ್ಷೆಯನ್ನು ತಾತ್ಸಾರಮಾಡಬೇಡ, ಆತನು ನೀಡುವ ಎಚ್ಚರಿಕೆಗೆ ಬೇಸರಗೊಳ್ಳಬೇಡ.


ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿಗೆ ಬಂದರು. ಅದು ಸುಗ್ಗಿಯ ಕಾಲ ನದಿ ದಡಮೀರಿ ಹರಿಯುತ್ತಿತ್ತು. ಯಾಜಕರು ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಹರಿಯುತ್ತಿದ್ದ ಜೋರ್ಡನ್ ನದಿಯ ನೀರು ನಿಂತುಹೋಯಿತು.


ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು.


ಜನರಿಗೆ ತಿಳಿಸಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಸುತ್ತುಗಟ್ಟಿದರು.


ಜೋರ್ಡನ್ ನದಿಯು ಪ್ರಥಮ ಮಾಸದಲ್ಲಿ ದಡತುಂಬಿ ಹರಿಯುತ್ತ ಇದ್ದಾಗ ಅದನ್ನು ದಾಟಿ ನದಿಯ ತಗ್ಗಿನ ಪೂರ್ವಪಶ್ಚಿಮ ಪ್ರದೇಶದಲ್ಲಿದ್ದವರೆಲ್ಲರನ್ನು ಓಡಿಸಿಬಿಟ್ಟವರು ಇವರೇ.


ಹೀಗಿರಲು, “ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಬೇಡ, ಮಾಡಿದರೆ ನಮ್ಮ ಕೈಯಿಂದಲೆ ನೀನು ಸಾಯುವೆ,” ಎಂದು ಅನಾತೋತಿನವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು