Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:6 - ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ಸಹೋದರರೂ ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹ ಮಾಡಿರುತ್ತಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗಿರುತ್ತಾರೆ; ಒಳ್ಳೇ ಮಾತಾಡಿದರೂ ಇವರನ್ನು ನಂಬಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ಜನರು ನಿನ್ನ ಸ್ವಂತ ಸಹೋದರರಾಗಿದ್ದಾರೆ. ನಿನ್ನ ಸ್ವಂತ ಕುಟುಂಬದ ಜನರೇ ನಿನ್ನ ವಿರುದ್ಧ ಕೂಗಾಡುತ್ತಾ ಸಂಚು ಮಾಡುತ್ತಿದ್ದಾರೆ. ಅವರು ನಿನ್ನೊಡನೆ ಸ್ನೇಹಿತರಂತೆ ಮಾತನಾಡಿದರೂ ಅವರನ್ನು ನಂಬಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ, ನಿನ್ನ ಸಹೋದರರೂ, ನಿನ್ನ ತಂದೆಯ ಮನೆತನದವರೂ ನಿನಗೆ ವಂಚನೆ ಮಾಡಿದ್ದಾರೆ. ಹೌದು, ಇವರೇ ನಿನಗೆ ವಿರೋಧವಾಗಿ ಬಂದು ಜೋರಾಗಿ ಕೂಗಿದ್ದಾರೆ. ಅವರು ನಿನಗೆ ಒಳ್ಳೆಯ ಮಾತುಗಳನ್ನು ಹೇಳಿದರೂ, ಅವರನ್ನು ನಂಬಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:6
25 ತಿಳಿವುಗಳ ಹೋಲಿಕೆ  

ಹಗೆಗಾರ ಸವಿನುಡಿದರೂ ನಂಬಬೇಡ; ಹೃದಯದಲ್ಲಿದೆ ಏಳ್ಮಡಿ ಹೇಯ ಕೃತ್ಯ.


ನಿಮ್ಮ ನಿಮ್ಮ ಗೆಳೆಯರ ವಿಷಯದಲ್ಲಿ ಎಚ್ಚರಿಕೆಯಾಗಿರಿ ಯಾರೇ ಆಗಲಿ, ತನ್ನ ಸಹೋದರನನ್ನೂ ನಂಬದಿರಲಿ. ಪ್ರತಿಯೊಬ್ಬ ಸೋದರನೂ ವಂಚಿಸುವುದರಲ್ಲಿ ಯಕೋಬನಿಗೆ ಸಮಾನ. ಒಬ್ಬೊಬ್ಬ ಗೆಳೆಯನೂ ತಿರುಗಾಡುತ್ತಾನೆ ಚಾಡಿಹೇಳುತ್ತಾ.


ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ಹೀಗಿರಲು, “ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಬೇಡ, ಮಾಡಿದರೆ ನಮ್ಮ ಕೈಯಿಂದಲೆ ನೀನು ಸಾಯುವೆ,” ಎಂದು ಅನಾತೋತಿನವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿದ್ದರು.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.


ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ನನ್ನವರಿಗೇ ನಾನನ್ಯನಾದೆನಯ್ಯಾ I ಒಡ ಹುಟ್ಟಿದವರಿಗೇ ಹೊರಗಿನವನಾದೆನಯ್ಯಾ II


ಹರಿದು ಓಡುವ ತೊರೆಯಂತೆ ಉಕ್ಕಿ ಹರಿಯುವ ಪ್ರವಾಹದಂತೆ ದ್ರೋಹವೆಸಗಿದ್ದಾರೆ ಸೋದರರು ನನಗೆ.


ಅವರ ಸೋದರರಿಗೆ ಕೂಡ ಅವರಲ್ಲಿ ವಿಶ್ವಾಸವಿರಲಿಲ್ಲ.


ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.


ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಸಿಂಹವೋ ಪ್ರಾಯದ ಸಿಂಹವೋ ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಆ ಕೂಗನ್ನು ಕೇಳಿ ಕುರುಬರನೇಕರು ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದು, ಅವರ ಗದ್ದಲಕ್ಕೆ ಎದೆಗುಂದದು. ಅಂತೆಯೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆದ ನಾನು ಯುದ್ಧಮಾಡಲು ಸಿಯೋನ್ ಶಿಖರದ ಮೇಲೆ ಇಳಿದು ಬರುವಾಗ ನನ್ನನ್ನು ಯಾರೂ ಹೆದರಿಸುವುದಿಲ್ಲ, ಎದೆಗುಂದಿಸುವಂತಿಲ್ಲ.


ಜನರ ಗುಂಪು ಅವರೊಡನೆ ಸೇರಿ ದೊಂಬಿಮಾಡಿತು. ನ್ಯಾಯಾಧಿಪತಿಗಳು ಪೌಲ ಮತ್ತು ಸೀಲರ ವಸ್ತ್ರಗಳನ್ನು ಕಿತ್ತುಹಾಕಿಸಿ ಛಡಿ ಏಟುಗಳನ್ನು ಕೊಡುವಂತೆ ಆಜ್ಞೆಮಾಡಿದರು.


ಅಕಟಾ, ದಾರಿಗರು ತಂಗುವ ಗುಡಿಸಲೊಂದು ಕಾಡಿನಲ್ಲಿ ಸಿಗಬಾರದೆ ! ಆಗ ಜನರನ್ನು ತ್ಯಜಿಸಿಬಿಟ್ಟು ನಾನಲ್ಲಿಗೆ ತೆರಳುತ್ತಿದ್ದೆ ! ಅವರೆಲ್ಲರು ವ್ಯಭಿಚಾರಿಗಳು, ದ್ರೋಹಿಗಳ ಗುಂಪೇ ಅಲ್ಲವೆ?


ಎಲ್ಲರು ತಂತಮ್ಮ ಗೆಳೆಯರಿಗೆ ಮೋಸಮಾಡುತ್ತಾರೆ ಸತ್ಯವನ್ನು ನುಡಿವುದೇ ಇಲ್ಲ; ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ ಆಯಾಸವಾಗುವ ಮಟ್ಟಿಗೂ ಕೆಡಕನ್ನು ಮಾಡುತ್ತಿದ್ದಾರೆ.


ಕಪಟವಾಡುವ ತುಟಿಗಳನು ಪ್ರಭು ಕಡಿದುಬಿಡಲಿ I ಬಡಾಯಿಕೊಚ್ಚುವ ಜಿಹ್ವೆಯನು ಕತ್ತರಿಸಿಬಿಡಲಿ II


ನೀನು ತಿಂದ ತುತ್ತನ್ನೆ ಕಕ್ಕಿ ಬಿಡುವೆ, ನೀನು ಆಡಿದ ಸವಿಮಾತೆಲ್ಲ ವ್ಯರ್ಥವೆ.


ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು