Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:9 - ಕನ್ನಡ ಸತ್ಯವೇದವು C.L. Bible (BSI)

9 ನನ್ನ ಸೊತ್ತಾದ ಜನತೆ ನನ್ನ ದೃಷ್ಟಿಗೆ ಚಿತ್ರವರ್ಣದ ಪಕ್ಷಿಯಂತೆ ಅದರ ಸುತ್ತ ರಣಹದ್ದುಗಳ ಕೂಟ ಸೇರಿದೆ ಕಾಡುಮೃಗಗಳನ್ನೆಲ್ಲ ಕರೆದುತನ್ನಿ ಅದನ್ನು ತಿಂದುಬಿಡಲಿಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಸ್ವಾಸ್ತ್ಯವಾದ ಜನವು ನನ್ನ ದೃಷ್ಟಿಗೆ ಬೇಟೆಯ ಹಕ್ಕಿಯಂತಿದೆ, ಹದ್ದುಗಳು ಅದರ ಸುತ್ತಲೂ ವಿರುದ್ಧವಾಗಿ ಕುಳಿತಿವೆಯೋ? ಹೋಗಿರಿ, ಅದನ್ನು ತಿಂದುಬಿಡುವುದಕ್ಕೆ ಎಲ್ಲಾ ಕಾಡುಮೃಗಗಳನ್ನು ಕರೆತನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಸ್ವಾಸ್ತ್ಯವಾದ ಜನವು ನನ್ನ ದೃಷ್ಟಿಗೆ ಚಿತ್ರವರ್ಣದ ಹದ್ದಿನಂತಿದೆಯೋ? ಹದ್ದುಗಳು ಅದರ ಸುತ್ತಲು ವಿರುದ್ಧವಾಗಿ ಕೂತಿವೆಯೋ? ಹೋಗಿರಿ, ಅದನ್ನು ತಿಂದುಬಿಡುವದಕ್ಕೆ ಎಲ್ಲಾ ಕಾಡುಮೃಗಗಳನ್ನು ಕರತನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ‘ಸ್ವಾಸ್ತ್ಯವಾದ ಜನರು’ ಹದ್ದುಗಳಿಂದ ಸುತ್ತುವರಿಯಲ್ಪಟ್ಟು ಸಾಯುತ್ತಿರುವ ಪ್ರಾಣಿಯಂತಾಗಿದ್ದಾರೆ. ಆ ಪಕ್ಷಿಗಳು ಅವರ ಸುತ್ತಲೂ ಹಾರಾಡುತ್ತವೆ. ಕಾಡುಪ್ರಾಣಿಗಳೇ, ಬನ್ನಿ, ಬನ್ನಿ, ಬಂದು ನಿಮ್ಮ ಆಹಾರವನ್ನು ತೆಗೆದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನ್ನ ಸೊತ್ತು ನನಗೆ ಚಿತ್ರವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಹದ್ದುಗಳು ಅದಕ್ಕೆ ವಿರೋಧವಾಗಿವೆ. ಬನ್ನಿ, ಕಾಡುಮೃಗಗಳನ್ನೆಲ್ಲಾ ಕೂಡಿಸಿರಿ, ನುಂಗುವುದಕ್ಕೆ ಅವುಗಳನ್ನು ತನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:9
15 ತಿಳಿವುಗಳ ಹೋಲಿಕೆ  

“ಕಾಡಿನ ಮೃಗಗಳೇ ಬನ್ನಿ, ಬಂದು ನುಂಗಿಬಿಡಿ!


ಈ ಜನರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವುವು. ಅವುಗಳನ್ನು ಬೆದರಿಸಿ ಓಡಿಸಲು ಯಾರೂ ಇರುವುದಿಲ್ಲ.


ಸರ್ವೇಶ್ವರ, ತನ್ನ ದಾಸರಾದ ಪ್ರವಾದಿಗಳ ಮುಖಾಂತರ ಮುಂತಿಳಿಸಿದ ಪ್ರಕಾರ ಜುದೇಯ ರಾಜ್ಯವನ್ನು ಹಾಳುಮಾಡುವುದಕ್ಕಾಗಿ ಬಾಬಿಲೋನಿಯ, ಸಿರಿಯ, ಮೋಬಾವ, ಅಮ್ಮೋನ್ ದೇಶೀಯರಾದ ಸುಲಿಗೆಗಾರರನ್ನು ಕಳುಹಿಸಿದರು.


ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು.


“ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು ವಿಧಿಸುವೆನು : ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಯನ್ನು, ನುಂಗಿ ನಾಶಮಾಡುವುದಕ್ಕೆ ಪ್ರಾಣಿಪಕ್ಷಿಗಳನ್ನು ನೇಮಿಸುವೆನು.


ಶತ್ರುಗಳು ಯುವ ಸಿಂಹಗಳಂತೆ ಅವನಿಗೆ ವಿರುದ್ಧ ಗರ್ಜಿಸಿ ಆರ್ಭಟಿಸುತ್ತಿವೆ; ಅವನ ನಾಡನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.


ಇವರೆಲ್ಲರನ್ನು ಶತ್ರುಗಳ ವಶಕ್ಕೆ ಒಪ್ಪಿಸುವೆನು. ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು. ಇವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವುವು.


ಸಿಯೋನ್ ನಗರಿ ಕೈಚಾಚಿ ಕೂಗಿಕೊಂಡರೂ ಸಂತೈಸುವವರಾರೂ ಇಲ್ಲ. ನೆರೆಹೊರೆಯವರೇ ಆಕೆಯ ವಿರೋಧಿಗಳಾಗಲೆಂದು ಸರ್ವೇಶ್ವರ ತೀರ್ಮಾನಿಸಿದ್ದಾನಲ್ಲಾ ! ಅವರ ನಡುವೆ ಹೊಲೆಯಾದ ಹೆಣ್ಣಿನಂತೆ ಜೆರುಸಲೇಮ್ ಬಿದ್ದಿದ್ದಾಳಲ್ಲಾ !


ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.


ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,


ಕುರಿಗಾಹಿಗಳು ಇರಲಿಲ್ಲವಾದುದರಿಂದ ಅವು ಚದುರಿಹೋದುವು; ದಿಕ್ಕಾಪಾಲಾಗಿ ಕಾಡಿನ ಸಕಲ ಮೃಗಗಳಿಗೆ ತುತ್ತಾದವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು