Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:10 - ಕನ್ನಡ ಸತ್ಯವೇದವು C.L. Bible (BSI)

10 ಈ ದುಷ್ಟಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬರುತ್ತಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ. ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಹಟದಂತೆ ನಡೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡೆದುಕೊಂಡು, ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಅವುಗಳನ್ನು ಆರಾಧಿಸುವುದಕ್ಕೂ ಹಿಂಬಾಲಿಸುವ ಈ ದುಷ್ಟಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:10
32 ತಿಳಿವುಗಳ ಹೋಲಿಕೆ  

ನೀವಾದರೊ ನಿಮ್ಮ ಪೂರ್ವಜರಿಗಿಂತ ಹೆಚ್ಚು ಕೇಡನ್ನು ಮಾಡಿದ್ದೀರಿ. ನೀವೆಲ್ಲರು ನನ್ನ ಮಾತನ್ನು ಕೇಳದೆ ದುಷ್ಟ ಹೃದಯವುಳ್ಳ ಹಟಮಾರಿಗಳಂತೆ ನಡೆಯುತ್ತಾ ಬಂದಿದ್ದೀರಿ.


ನನ್ನ ಮಾತನ್ನು ಕೇಳದೆ, ಧರ್ಮಮಾರ್ಗದಲ್ಲಿ ನಡೆಯದೆ, ಹಟಮಾರಿಗಳಂತೆ ಸ್ವೇಚ್ಛಾನುಸಾರ ನಡೆದುಕೊಂಡರು. ತಮ್ಮ ಪೂರ್ವಜರು ಕಲಿಸಿಕೊಟ್ಟ ಹಾಗೆ ಬಾಳ್‍ದೇವತೆಗಳನ್ನು ಹಿಂಬಾಲಿಸಿದರು.


ಮೋಶೆಗೆ ಸರ್ವೇಶ್ವರ, “ಇನ್ನೆಷ್ಟುಕಾಲ ಈ ಜನರು ನನ್ನನ್ನು ಅಲಕ್ಷ್ಯ ಮಾಡುವರು? ನಾನು ಮಾಡಿದ ಮಹತ್ಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಇನ್ನೆಷ್ಟು ಕಾಲ ನಂಬದೆ ಇರುವರು?


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಆಗ ನಾನು ಯೂಫ್ರೆಟಿಸ್ ನದಿಗೆ ಹೋಗಿ ಹುಡುಕಿ ನಾನು ಬಚ್ಚಿಟ್ಟ ಸ್ಥಳದಿಂದ ಆ ನಡುಕಟ್ಟನ್ನು ತೆಗೆದೆ. ಆದರೆ ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.


ಆ ಕಾಲ ಬಂದಾಗ ಜೆರುಸಲೇಮನ್ನೇ ‘ಸರ್ವೇಶ್ವರನ ಸಿಂಹಾಸನ’ ಎಂದು ಕರೆಯುವರು. ನನ್ನ ನಾಮಮಹತ್ವದ ಸ್ಥಾನವಾದ ಜೆರುಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದುಬರುವರು. ಆಮೇಲೆ ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”


ಸರ್ವೇಶ್ವರ ಸ್ವಾಮಿ ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು.


ಈ ಜೆರುಸಲೇಮಿನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ. ಹಿಂತಿರುಗಿ ಬರಲೊಲ್ಲರು.


ನೀವಾದರೋ ನನ್ನ ಅಧೀನದಿಂದ ತಪ್ಪಿಸಿಕೊಂಡು ಎದುರಿಬೀಳುವ ಹೃದಯವುಳ್ಳವರಾಗಿ ಇದ್ದೀರಿ. ಹದ್ದುಮೀರಿ ನನ್ನನ್ನು ಬಿಟ್ಟುಹೋಗಿ ಇದ್ದೀರಿ.


ಇದಲ್ಲದೆ ಸುಗಂಧಕ್ಕೆ ಬದಲಾಗಿ ದುರ್ಗಂಧ, ನಡುಪಟ್ಟಿಗೆ ಬದಲಾಗಿ ಹುರಿಹಗ್ಗ, ಜಡೆದಲೆಗೆ ಬದಲಾಗಿ ಬೋಳುದಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಬೆಡಗಿಗೆ ಬದಲಾಗಿ ಬೆತ್ತಲೆ, ಇಂಥ ಗತಿ ಅವರಿಗೆ ಬಂದೊದಗುವುದು.


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ಅನ್ಯರನ್ನಾಗಲಿ, ಅನಾಥರನ್ನಾಗಲಿ, ವಿಧವೆಯರನ್ನೇ ಆಗಲಿ ಶೋಷಣೆಗೆ ಗುರಿಪಡಿಸಬೇಡಿ! ಇಲ್ಲೆಲ್ಲೂ ನಿರ್ದೋಷಿಗಳ ರಕ್ತವನ್ನು ಸುರಿಸಬೇಡಿ. ನಿಮಗೆ ಹಾನಿಕರವಾದ ಅನ್ಯದೇವತಾ ಭಕ್ತಿಯನ್ನು ಬಿಟ್ಟುಬಿಡಿ.


‘ನೀನು (ಯೆರೆಮೀಯ) ವಾಸವಾಗಿರುವುದು ಮೋಸಗಾರರ ಮಧ್ಯೆ ಮೋಸಗಾರರಾಗಿರುವುದರಿಂದಲೆ ಅವರು ನನ್ನನ್ನು ಅರಿಯಲೊಲ್ಲರು’ ಎನ್ನುತ್ತಾರೆ ಸರ್ವೇಶ್ವರ.


ನನ್ನ ಮಾತನ್ನು ಕೇಳದೆಹೋದ ತಮ್ಮ ಮೂಲಪಿತೃಗಳ ದುಷ್ಕೃತ್ಯಗಳ ಕಡೆ ಈ ಜನರು ತಿರುಗಿಕೊಂಡಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸುತ್ತಿದ್ದಾರೆ. ಅವುಗಳನ್ನು ಪೂಜಿಸುತ್ತಿದ್ದಾರೆ. ನಾನು ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ಮೀರಿದ್ದಾರೆ.


ಏಕೆಂದರೆ ಸರ್ವೇಶ್ವರನೆ ಹೇಳಿರುವ ಮಾತಿವು - ‘ಇಗೋ, ನಾನು ನಿನ್ನನ್ನು ನಿನಗೂ ನಿನ್ನ ಎಲ್ಲ ಸ್ನೇಹಿತರಿಗೂ ಭಯಾನಕನನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ಅದನ್ನು ನೀನು ಕಣ್ಣಾರೆ ಕಾಣುವೆ. ನಾನು ಜುದೇಯರನೆಲ್ಲ ಬಾಬಿಲೋನಿನ ಅರಸನ ಕೈಗೊಪ್ಪಿಸುವೆನು. ಅವನು ಇವರನ್ನು ಬಾಬಿಲೋನಿಗೆ ಸೆರೆಯಾಗಿ ಕೊಂಡೊಯ್ದು ಕತ್ತಿಗೆ ತುತ್ತಾಗಿಸುವನು.


ನೀನು ನೆಮ್ಮದಿಯಾಗಿದ್ದ ಕಾಲದಲ್ಲಿ ನಿನ್ನೊಡನೆ ಮಾತಾಡಿದೆ ಆದರೆ ನೀನು, “ಕೇಳಲೊಲ್ಲೆ” ಎಂದು ಹೇಳಿಬಿಟ್ಟೆ. ನನ್ನ ಮಾತಿಗೆ ಕಿವಿಗೊಡದಿರುವುದು ನಿನಗೆ ಬಾಲ್ಯದಿಂದಲೆ ವಾಡಿಕೆ !


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಆದರೂ ಅವರು ಕಿವಿಗೊಟ್ಟು ಕೇಳಲಿಲ್ಲ. ಅನ್ಯದೇವತೆಗಳಿಗೆ ಧೂಪಾರತಿ ಎತ್ತುವುದನ್ನು ನಿಲ್ಲಿಸಲಿಲ್ಲ. ತಮ್ಮ ದುರಾಚಾರವನ್ನು ಕೈಬಿಡಲಿಲ್ಲ.


“ಸರ್ವೇಶ್ವರನ ಹೆಸರಿನಲ್ಲಿ ನೀನು ನಮಗೆ ನುಡಿದ ಮಾತನ್ನು ನಾವು ಕೇಳಲೊಲ್ಲೆವು.


ನಾನು ತಡಮಾಡದೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಓಗೊಡದೆ, ಈ ಕೃತ್ಯಗಳನ್ನೆಲ್ಲ ಮಾಡಿದ್ದೀರಿ.


ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ : “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು