Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ನೀನು ಅವರಿಗೆ - ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಕೇಳಿ : ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಜೆರುಸಲೇಮಿನ ಎಲ್ಲ ನಿವಾಸಿಗಳನ್ನೂ, ಅಂತು ನಾಡಿನ ಜನರೆಲ್ಲರನ್ನೂ ಅಮಲಿನಿಂದ ಮತ್ತರಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ನೀನು ಅವರಿಗೆ, “ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ನೀನು ಅವರಿಗೆ - ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಯೆರೂಸಲೇವಿುನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ ನಾನು ಅಮಲಿನಿಂದ ತುಂಬಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ನೀನು ಅವರಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ ಎಂದು ಹೇಳು. ಈ ಪ್ರದೇಶದಲ್ಲಿ ವಾಸಮಾಡುವ ಪ್ರತಿಯೊಬ್ಬ ಮನುಷ್ಯನನ್ನು ಕುಡಿದು ಮತ್ತನಾದವನಂತೆ ಅಸಹಾಯಕನನ್ನಾಗಿ ಮಾಡುತ್ತೇನೆ. ನಾನು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ರಾಜರ ಬಗ್ಗೆ ಹೇಳುತ್ತಿದ್ದೇನೆ. ನಾನು ಯಾಜಕರ, ಪ್ರವಾದಿಗಳ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಎಲ್ಲಾ ಜನರ ಬಗ್ಗೆಯೂ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:13
14 ತಿಳಿವುಗಳ ಹೋಲಿಕೆ  

ರಾಷ್ಟ್ರಗಳನು ತುಳಿದೆ ಕುಪಿತನಾಗಿ ಅವುಗಳನು ನುಚ್ಚುನೂರುಮಾಡಿದೆ ರೋಷಾವಿಷ್ಟನಾಗಿ ಅವುಗಳ ರಕ್ತವನು ನೆಲದಲಿ ಹರಿಸಿದೆ ಪ್ರವಾಹವಾಗಿ.


ಎಚ್ಚೆತ್ತುಕೊ, ಎಚ್ಚೆತ್ತುಕೊ, ನೀನೆದ್ದು ನಿಲ್ಲು ಜೆರುಸಲೇಮೆ! ಕುಡಿದುಬಿಟ್ಟಿರುವೆ ನೀ ಮತ್ತು ತರುವ ಪಾನಪಾತ್ರೆಯಿಂದ ತೊಟ್ಟನ್ನೂ ಬಿಡದೆ ಹೀರಿರುವೆ ಸರ್ವೇಶ್ವರನ ಕೋಪ ತುಂಬಿದಾ ಕೊಡದಿಂದ !


ಪ್ರಭುವಿನ ಕರಗಳಲ್ಲಿದೆ ಕೋಪಕೊಡ ಒಂದು I ತುಂಬಿದೆ ಅಮಲುಮಿಶ್ರ ರೌದ್ರರಸದಿಂದದು II ಅದನವನು ಸುರಿಯಲು ಕುಡಿವರು ಜಗದ ದುರುಳರು I ಮಡ್ಡಿಯನು ಕೂಡ ಬಿಡದೆ ಕುಡಿವರೆಲ್ಲರು II


ನಿನ್ನ ಜನರನು ಗುರಿಪಡಿಸಿದೆ ಸಂಕಟಕೆ I ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ II


ನೀನು ಸನ್ಮಾನದಿಂದಲ್ಲ, ಅವಮಾನದಿಂದ ತುಂಬಿರುವೆ; ನೀನೂ ಕುಡಿ; ಕುಡಿದು ನಗ್ನನಾಗು. ಸರ್ವೇಶ್ವರಸ್ವಾಮಿಯ ಬಲಗೈಯಲ್ಲಿರುವ ಕೋಪದ ಕೊಡ ನಿನ್ನ ಪಾಲಿಗೂ ಬರುವುದು. ಅವಮಾನವೇ ನಿನ್ನ ಸನ್ಮಾನವನ್ನು ಆವರಿಸಿಬಿಡುವುದು.


ಬಾಬಿಲೋನ್ ನನ್ನ ಕೈಯಲ್ಲಿರುವ ಹೊನ್ನಿನ ಪಾನಪಾತ್ರೆ. ಲೋಕದವರೆಲ್ಲರು ಅದರಿಂದ ಕುಡಿದು ಮತ್ತರಾದರು. ರಾಷ್ಟ್ರಗಳು ಅದರಿಂದ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಸರ್ವೇಶ್ವರಾ: “ನೀನು ಅವರಿಗೆ ಹೀಗೆಂದು ಹೇಳು: ‘ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೇಳಿದ್ದಾರೆ - ನೀವು ಕುಡಿಯಬೇಕು, ಕುಡಿದು ಕಕ್ಕಬೇಕು. ನಾನು ಕಳಿಸುವ ಖಡ್ಗಕ್ಕೆ ತುತ್ತಾಗಿ ಬೀಳಬೇಕು, ಬಿದ್ದು ಏಳಬಾರದು.’


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


ಬಾಬಿಲೋನಿನ ರಾಜ್ಯಪಾಲರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಯೋಧರು, ಇವರೆಲ್ಲರಿಗೆ ತಲೆಗೇರುವ ತನಕ ಕುಡಿಸುವೆನು. ಅವರು ಎಂದೆಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆ ಮಾಡುವರು ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರನೆಂಬ ರಾಜಾಧಿರಾಜರು.”


ಇಂತಿರಲು ಶೋಷಿತಳೇ, ಕೇಳು ನನ್ನ ಮಾತನು ದ್ರಾಕ್ಷಾರಸದಿಂದಲ್ಲ ನೀ ಅಮಲೇರಿರುವುದು.


ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ನಿಬ್ಬೆರಗಾಗಿರಿ. ಕುರುಡು ಮಾಡಿಕೊಂಡು ಕಡುಕುರುಡರಾಗಿರಿ. ಮದ್ಯಪಾನ ಮಾಡದೆಯೇ ಮತ್ತರಾಗಿರಿ, ಕುಡಿಯದೆಯೇ ಓಲಾಡಿರಿ.


“ಯೆರೆಮೀಯನೇ, ನೀನು ಅವರಿಗೆ ಹೀಗೆಂದು ಸಾರು : ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿಯ ಸಂದೇಶವನ್ನು ಕೇಳಿ - ‘ಪ್ರತಿಯೊಂದು ಕುಡಿಕೆಯು ದ್ರಾಕ್ಷಾರಸದಿಂದ ತುಂಬಿರುವುದು.’ ಆಗ ಅವರು ನಿನಗೆ - ‘ಪ್ರತಿಯೊಂದು ಕುಡಿಕೆ ದ್ರಾಕ್ಷಾರಸದಿಂದ ತುಂಬಿರುವುದು ಎಂಬುದು ನಮಗೆ ಗೊತ್ತಿಲ್ಲವೆ?’ ಎಂದು ಹೇಳುವರು.


ಇಗೋ, ನನ್ನ ಹೆಸರುಗೊಂಡಿರುವ ನಗರದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಳ್ಳುವಿರೊ? ಆಗುವುದೇ ಇಲ್ಲ. ಏಕೆಂದರೆ ಭೂನಿವಾಸಿಗಳೆಲ್ಲರಿಗೆ ವಿರುದ್ಧವಾಗಿ ಖಡ್ಗವನ್ನು ಬರಮಾಡುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು