Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:9 - ಕನ್ನಡ ಸತ್ಯವೇದವು C.L. Bible (BSI)

9 “ಇದು ಸರ್ವೇಶ್ವರನಾದ ನನ್ನ ನುಡಿ - ಈ ಪ್ರಕಾರವಾಗಿಯೇ ನಾನು ಜುದೇಯದ ದೊಡ್ಡಸ್ತಿಕೆಯನ್ನು ಹಾಗು ಜೆರುಸಲೇಮಿನ ಘನವಾದ ದೊಡ್ಡಸ್ತಿಕೆಯನ್ನು ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಇದು ಯೆಹೋವನಾದ ನನ್ನ ನುಡಿ, ಈ ನಡುಕಟ್ಟಿನಂತೆ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಮತ್ತು ಯೆರೂಸಲೇಮಿನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದು ಯೆಹೋವನಾದ ನನ್ನ ನುಡಿ - ಇದೇ ಪ್ರಕಾರವಾಗಿ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಯೆರೂಸಲೇವಿುನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಹೀಗೆ ಹೇಳಿದನು, “ನಡುಪಟ್ಟಿಯು ಹಾಳಾಗಿ ನಿಷ್ಪ್ರಯೋಜಕವಾಗಿದೆ. ಅಂತೆಯೇ ನಾನು ಯೆಹೂದದ ಮತ್ತು ಜೆರುಸಲೇಮಿನ ಜಂಬದ ಜನರನ್ನು ಹಾಳುಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ, ಯೆರೂಸಲೇಮಿನ ಮಹಾ ಗರ್ವವನ್ನು ಕೆಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:9
19 ತಿಳಿವುಗಳ ಹೋಲಿಕೆ  

ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣವಾಗಿಸುವೆನು. ನೀವು ಸಾಗುವಳಿ ಮಾಡುವ ಭೂಮಿಯನ್ನು ತಾಮ್ರವಾಗಿಸುವೆನು.


ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ.


ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


“ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು.


(ಸರ್ವೇಶ್ವರ, ಕೊಳ್ಳೆಗಾರರು ಸುಲಿಗೆಮಾಡಿದ್ದನ್ನೂ ಮುರಿದುಹಾಕಿದ ದ್ರಾಕ್ಷಿಯ ತೋಟಗಳನ್ನೂ ಸರಿಪಡಿಸಲಿದ್ದಾರೆ. ಯಕೋಬಿನ ಮಹತ್ವವನ್ನು ಹಾಗೂ ಇಸ್ರಯೇಲಿನ ಮಹಿಮೆಯನ್ನು ಈಗ ಮತ್ತೆ ಸ್ಥಾಪಿಸಲಿದ್ದಾರೆ).


ಅರಾಮಿನ ಕುವರಿಯರು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುವರಿಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮುಂಚೆ, ನಿನ್ನ ಕೆಟ್ಟತನವು ಬೆಳಕಿಗೆ ಬರುವುದಕ್ಕೆ ಮೊದಲು,


ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲಮಾಡಿದೆ.


ಮೋವಾಬ್ಯರಿಗೆ ಬಹಳ ಸೊಕ್ಕೇರಿದೆ! ಅವರ ಹೆಮ್ಮೆಯ ಸುದ್ದಿ, ಡಂಭಾಚಾರ, ಅಹಂಕಾರ, ಗರ್ವ, ಸ್ವಪ್ರತಿಷ್ಠೆ ಇವುಗಳ ಸಮಾಚಾರ ನಮ್ಮ ಕಿವಿಗೆ ಬಿದ್ದಿದೆ. -


ಯೆಹೂದ ಜನತೆ ಪೇಳ್ವರವರಿಗೆ : “ನಮ್ಮ ಕಿವಿಗೆ ಬಿದ್ದಿದೆ ಮೋವಾಬ್ಯರ ಮದ, ತಿಳಿದಿದೆ ನಮಗೆ ಅವರ ದುರಹಂಕಾರ, ಅವರ ಒಣ ಡಂಭಾಚಾರ, ಗರ್ವೋದ್ರೇಕ".


ಆಗ ಸರ್ವೇಶ್ವರ ನನಗೆ ದಯಪಾಲಿಸಿದ ವಾಕ್ಯವೇನೆಂದರೆ :


ಜೆರುಸಲೇಮಿಗೂ ಜುದೇಯದ ನಗರಗಳಿಗೂ, ಅರಸರುಗಳಿಗೂ ಕುಡಿಸಿದೆ. ಇದರಿಂದ ಅವರು ಹಾಳಾಗಿ ಇಂದು ಪರಿಹಾಸ್ಯಕ್ಕೂ ಶಾಪಕ್ಕೂ ಗುರಿಯಾಗುವಂತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು