Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:10 - ಕನ್ನಡ ಸತ್ಯವೇದವು C.L. Bible (BSI)

10 ಈ ಜನರನ್ನು ಕುರಿತು ಸರ್ವೇಶ್ವರ ನನಗೆ ಹೇಳಿದ ಮಾತುಗಳು : “ಇವರು ಅಲೆದಾಡಲು ಇಷ್ಟಪಡುವ ಜನರು. ತಮ್ಮ ಕಾಲಿನ ಮೇಲೆ ಹತೋಟಿಯಿಲ್ಲದವರು. ಆದಕಾರಣ ಸರ್ವೇಶ್ವರನಾದ ನಾನು ಇವರನ್ನು ಕರುಣೆಯಿಂದ ನೋಡುವುದಿಲ್ಲ. ಇದೀಗಲೆ ಇವರ ಅಪರಾಧಗಳನ್ನು ನೆನಪಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಈ ಜನರನ್ನು ಕುರಿತು - ಇವರು [ನನ್ನನ್ನು ಪ್ರಯಾಣಿಕನು ಎಂದ] ಹಾಗೆಯೇ ಅಲೆಯುವದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ; ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೂದದ ಜನರ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: “ಯೆಹೂದದ ಜನರು ನನ್ನಿಂದ ದೂರವಾಗಲು ಮನಃಪೂರ್ವಕವಾಗಿ ಇಚ್ಛಿಸುತ್ತಾರೆ. ಅವರು ಮೊದಲಿಂದಲೂ ಹೀಗೆ ಮಾಡುತ್ತಲೇ ಇದ್ದಾರೆ. ಆದ್ದರಿಂದ ಈಗ ಯೆಹೋವನು ಅವರನ್ನು ಸ್ವಿಕರಿಸುವದಿಲ್ಲ. ಆತನು ಅವರ ದುಷ್ಕೃತ್ಯಗಳನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗಾಗಿ ಅವರನ್ನು ದಂಡಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:10
25 ತಿಳಿವುಗಳ ಹೋಲಿಕೆ  

ಪೂರ್ವದಲ್ಲಿ ಗಿಬ್ಯದವರು ಭ್ರಷ್ಟರಾದಂತೆ ಎಫ್ರಯಿಮಿನವರು ಅತಿ ಭ್ರಷ್ಟರಾಗಿದ್ದಾರೆ. ದೇವರು ಅವರ ಅಪರಾಧವನ್ನು ನೆನಪಿಗೆ ತಂದುಕೊಳ್ಳುವರು. ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವರು.


ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


ನಿನ್ನ ವಾಕ್ಯವನು ಅನುಸರಿಸುವ ಧ್ಯೇಯದಿಂದ I ನನ್ನ ಹೆಜ್ಜೆಗಳನು ತಡೆದೆನು ದುರ್ಮಾರ್ಗದಿಂದ II


ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು.


ಅವರು ಶೆಬದ ಧೂಪವನ್ನಾಗಲಿ, ದೂರದೇಶದ ಒಳ್ಳೆಯ ಸುಗಂಧವನ್ನಾಗಲಿ ತಂದು ನನಗೆ ಅರ್ಪಿಸುವುದರಿಂದ ನನಗೆ ಏನೂ ಪ್ರಯೋಜನವಿಲ್ಲ. ಅವರು ಒಪ್ಪಿಸುವ ದಹನಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಯಜ್ಞಬಲಿಗಳೂ ನನಗೆ ಇಷ್ಟವಿಲ್ಲ.


ಅವರ ಪಾಪಗಳನ್ನು ಕ್ಷಮಿಸುವೆನು ಅವರ ತಪ್ಪುನೆಪ್ಪುಗಳನು ನೆನಪಿಗೆ ತಂದುಕೊಳ್ಳೆನು ಎಂದರು ಸರ್ವೇಶ್ವರ.”


ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ತಡೆಹಿಡಿಯುವೆನು ನನ್ನ ಉಗ್ರಕೋಪವನು ನಾಶಪಡಿಸಲಾರೆ ಮರಳಿ ಎಫ್ರಯಿಮನು. ನರಮಾನವನಲ್ಲ, ದೇವರು ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿಯು! ನನ್ನದಲ್ಲ ನಾಶಮಾಡುವ ರೋಷವು.


ಅವರು ನನ್ನ ಕಡೆಯಿಂದ ದೂರಹೋಗುವ ಹಠಹಿಡಿದಿದ್ದಾರೆ; ಅವರು ನೊಗದ ಭಾರವನ್ನು ತಾಳದೆ ಕೂಗಿಕೊಂಡರೂ ಅದನ್ನು ಬಿಚ್ಚುವವರು ಯಾರೂ ಇಲ್ಲ.


ಈ ಜೆರುಸಲೇಮಿನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ. ಹಿಂತಿರುಗಿ ಬರಲೊಲ್ಲರು.


ನಿಮ್ಮ ಮಾರ್ಗವನ್ನು ಕೈಬಿಟ್ಟು ಎಷ್ಟು ಸುಲಭವಾಗಿ ಅತ್ತಿತ್ತ ಓಡಾಡುತ್ತೀರಿ! ಅಸ್ಸೀರಿಯದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿರೋ ಹಾಗೆಯೇ ಈಜಿಪ್ಟಿನ ವಿಷಯವಾಗಿಯೂ ಆಶಾಭಂಗಪಡುವಿರಿ.


ಆಗ ಆಕೆ ಎಲೀಯನಿಗೆ, “ದೈವಪುರುಷನೇ, ನನ್ನ ವಿರುದ್ಧ ನಿನಗೇನಿದೆ? ನೀನು ನನ್ನ ಪಾಪವನ್ನು ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿಯೋ?” ಎಂದಳು.


“ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದರು. ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.


ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.


ಈಜಿಪ್ಟ್ ಇನ್ನು ಇಸ್ರಯೇಲ್ ವಂಶದವರ ಭರವಸೆಯಾಗದು; ಅದರ ಕಡೆಗೆ ಕಣ್ಣೆತ್ತುವಾಗ ದೇವದ್ರೋಹದ ನೆನಪು ಇಸ್ರಯೇಲರಲ್ಲಿ ಹುಟ್ಟುವುದು; ನಾನೇ ಸರ್ವೇಶ್ವರ ಎಂದು ಅವರಿಗೆ ಮನದಟ್ಟಾಗುವುದು.”


ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.


“ನನ್ನನ್ನು ತೊರೆದುಬಿಟ್ಟದ್ದರಿಂದ ಅವರು ಹಾಳಾಗಲಿ, ನನಗೆ ದ್ರೋಹವೆಸಗಿದ್ದರಿಂದ ಅವರು ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿದ್ದರೂ ಅವರು ನನಗೆ ತಪ್ಪಾಗಿ ನಡೆದುಕೊಂಡಿದ್ದಾರೆ.


“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”


ನೀನಾದರೋ ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ನಾಡಿಗೆ ಈ ಜನರನ್ನು ನಡೆಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆ ನಡೆಯುವನು. ಆದರೂ ನಾನು ಅವರನ್ನು ದಂಡಿಸುವ ದಿನದಂದು ಅವರ ಪಾಪಕ್ಕೆ ತಕ್ಕಂತೆ ದಂಡಿಸುವೆನು.


ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ I ‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು