Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ಈ ಜನರಿಗೆ, ‘ಖಡ್ಗ ನಿಮ್ಮ ಕಣ್ಣಿಗೂ ಕಾಣಿಸದು, ಕ್ಷಾಮ ನಿಮಗೆಂದಿಗೂ ಬಂದೊದಗದು. ಸರ್ವೇಶ್ವರ ಈ ನಾಡಿನಲ್ಲೆ ನಿಮಗೆ ಚಿರಶಾಂತಿ ಸಮಾಧಾನವನ್ನು ಕೊಡುವರು’ ಎಂದು ಪ್ರವಾದಿಗಳೇ ನುಡಿಯುತ್ತಿದ್ದಾರೆ,” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’” ಎಂಬುದಾಗಿ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ - ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ಸ್ಥಿರಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ ಎಂಬದಾಗಿ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ನಾನು ಯೆಹೋವನಿಗೆ, “ನನ್ನ ಒಡೆಯನಾದ ಯೆಹೋವನೇ, ಪ್ರವಾದಿಗಳು ಜನರಿಗೆ ಬೇರೆಯದನ್ನೇ ಹೇಳಿದರು. ಅವರು ಯೆಹೂದದ ಜನರಿಗೆ, ‘ನೀವು ಶತ್ರುವಿನ ಖಡ್ಗಕ್ಕೆ ತುತ್ತಾಗುವದಿಲ್ಲ. ನೀವೆಂದಿಗೂ ಹಸಿವಿನಿಂದ ಬಳಲುವದಿಲ್ಲ, ಯೆಹೋವನು ಈ ದೇಶದಲ್ಲಿ ನಿಮಗೆ ನೆಮ್ಮದಿಯನ್ನು ದಯಪಾಲಿಸುವನು’ ಎಂದು ಹೇಳುತ್ತಿದ್ದರು” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ, ಪ್ರವಾದಿಗಳು ಅವರಿಗೆ: ‘ನೀವು ಖಡ್ಗವನ್ನು ನೋಡುವುದಿಲ್ಲ. ನಿಮಗೆ ಕ್ಷಾಮವು ಬಾರದು. ಆದರೆ ಯೆಹೋವ ದೇವರು ನಿಮಗೆ ಈ ಸ್ಥಳದಲ್ಲಿ ಸ್ಥಿರಸಮಾಧಾನ ಕೊಡುತ್ತಾರೆ,’ ಎಂದು ಹೇಳುತ್ತಾರೆ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:13
17 ತಿಳಿವುಗಳ ಹೋಲಿಕೆ  

ಅವರು, ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಕೇವಲ ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”


ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ನಿಶ್ಚಯವಾಗಿಯೂ ಈ ಜನರನ್ನು ಹಾಗೂ ಜೆರುಸಲೇಮಿನವರನ್ನು ಮೋಸಗೊಳಿಸಿದ್ದೀರಿ. ‘ನಿಮಗೆ ಸಮಾಧಾನವಾಗುವುದು’ ಎಂದು ಅವರಿಗೆ ಹೇಳಿದಿರಿ, ಆದರೆ ಕತ್ತಿ ಅವರ ಕುತ್ತಿಗೆಗೆ ಬಂದಿದೆ” ಎಂದೆನು.


ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.


“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಆ ಜನರು ಸರ್ವೇಶ್ವರ ಸ್ವಾಮಿಯನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ.


ಅದಕ್ಕೆ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನಾನು ಮಾತುಬಲ್ಲವನಲ್ಲ, ಇನ್ನೂ ತರುಣ,” ಎಂದು ಬಿನ್ನವಿಸಿದೆ.


ಈ ಕಾವಲುಗಾರರು ಕುರುಡರು, ಇವರಿಗೆ ತಿಳುವಳಿಕೆಯಿಲ್ಲ. ಇವರೆಲ್ಲರೂ ಬೊಗಳಲಾರದ ಮೂಕನಾಯಿಗಳು, ಮಲಗಿಕೊಂಡು ಕನವರಿಸುವ ನಿದ್ದೆಕೋರ ನಾಯಿಗಳು.


ಪ್ರವಾದಿಗಳು ಆಡುವುದೆಲ್ಲ ಬರೀ ಗಾಳಿಮಾತುಗಳು. ದೈವೋಕ್ತಿಯೆಂಬುದು ಅವುಗಳಲ್ಲಿ ಇಲ್ಲ. ಅವರಿಗೇ ತಗಲಲಿ ಅವರು ಹೇಳುವುದೆಲ್ಲ,” ಎಂದುಕೊಂಡಿದ್ದಾರೆ.


“ಇನ್ನು ಮೇಲೆ ಇಸ್ರಯೇಲ್ ವಂಶದವರಲ್ಲಿ ಯಾರಿಗೂ ಸುಳ್ಳು ದರ್ಶನವಾಗದು; ಮೋಸದ ಕಣಿ ಇರದು.


ಪಷ್ಹೂರನೇ ಕೇಳು, ನೀನು ನಿನ್ನ ಮನೆಯ ಎಲ್ಲರೊಡನೆ ಸೆರೆಗೆ ಹೋಗುವೆ. ನೀನು ಮತ್ತು ನಿನ್ನ ಸುಳ್ಳು ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಗೆಳೆಯರೂ ಬಾಬಿಲೋನಿಗೆ ಸೇರಿ ಅಲ್ಲೆ ಸತ್ತು ಮಣ್ಣಾಗುವಿರಿ’.”


‘ಬಾಬಿಲೋನಿನ ಅರಸನು ನಿಮಗೂ ಈ ನಾಡಿಗೂ ವಿರುದ್ಧವಾಗಿ ಆಕ್ರಮಣ ನಡೆಸನು’ ಎಂದು ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು