Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:20 - ಕನ್ನಡ ಸತ್ಯವೇದವು C.L. Bible (BSI)

20 ಹೇ ಸರ್ವೇಶ್ವರಾ, ಒಪ್ಪಿಕೊಂಡಿದ್ದೇವೆ ನಮ್ಮ ದುಷ್ಟತನವನ್ನು ನಮ್ಮ ಪೂರ್ವಜರು ಎಸಗಿದ ದುರಾಚಾರವನ್ನು ನಾವು ಮಾಡಿದ ಪಾಪ ನಿಮಗೆ ವಿರುದ್ಧವೆಂಬುದನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನೇ, ನಮ್ಮ ದುಷ್ಟತನವನ್ನೂ ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಿನಗೇ ಪಾಪಮಾಡಿದ್ದೇವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನೇ, ನಾವು ಬಹಳ ಕೆಟ್ಟ ಜನರೆಂಬುದು ನಮಗೆ ಗೊತ್ತು. ನಮ್ಮ ಪೂರ್ವಿಕರು ದುಷ್ಕೃತ್ಯಗಳನ್ನು ಮಾಡಿದರೆಂಬುದನ್ನು ನಾವು ಬಲ್ಲೆವು. ಹೌದು, ನಾವು ನಿನ್ನ ವಿರುದ್ಧ ಪಾಪಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರೇ, ನಮ್ಮ ದುಷ್ಟತನವನ್ನೂ, ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ, ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:20
21 ತಿಳಿವುಗಳ ಹೋಲಿಕೆ  

ನಾವೇ ತಂದುಕೊಂಡ ಅವಮಾನವೆಂಬ ಹಾಸಿಗೆಯಲ್ಲಿ ಬಿದ್ದಿರೋಣ. ನಾಚಿಕೆಯೆಂಬ ಹೊದಿಕೆ ನಮ್ಮನ್ನು ಮುಚ್ಚಿಬಿಡಲಿ. ಚಿಕ್ಕತನದಿಂದ ಈವರೆಗು ನಾವೂ ನಮ್ಮ ಪೂರ್ವಜರೂ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಇದಿರಾಗಿ ಪಾಪಮಾಡುತ್ತಾ ಬಂದಿರುವುದು ನಿಶ್ಚಯ. ಆ ಸ್ವಾಮಿಯ ಮಾತನ್ನು ಕೇಳದೆಹೋದೆವಲ್ಲಾ!” ಎಂದು ಮೊರೆಯಿಡುತ್ತಿದ್ದಾರೆ.


ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II


ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.


ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.


ಇಸ್ರಯೇಲ್ ಸಂತಾನದವರು, ಎಲ್ಲ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು ನಿಂತು, ತಮ್ಮ ಪಾಪಗಳನ್ನೂ ತಮ್ಮ ಪಿತೃಗಳ ಪಾಪಗಳನ್ನೂ ಅರಿಕೆಮಾಡಿದರು.


ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.


ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.


ಜನರು : “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ಸರ್ವೇಶ್ವರಾ, ನಮ್ಮ ದ್ರೋಹಗಳು ಹಲವು ನಿಮಗೆ ವಿರುದ್ಧ ಪಾಪಮಾಡಿದೆವು. ನಮ್ಮ ಅಪರಾಧಗಳೇ ನಮಗೆ ವಿರುದ್ಧ ಸಾಕ್ಷಿ ನೀಡುತ್ತಿವೆ ಆದರೂ ನಿಮ್ಮ ನಾಮದ ನಿಮಿತ್ತ ಕೈನೀಡು ನಮಗೆ.


“ಹೇ, ಸರ್ವೇಶ್ವರಾ, ಕಟಾಕ್ಷಿಸು; ನಾ ಇಕ್ಕಟ್ಟಿಗೆ ಸಿಕ್ಕಿಕೊಂಡಿರುವೆ. ಕರುಳು ಕುದಿಯುತ್ತಿದೆ, ಹೃದಯ ವಿಮುಖವಾಗಿದೆ ನಾ ಗೈದ ದ್ರೋಹಕ್ಕೆ, ಕತ್ತಿಗೆ ತುತ್ತಾಗುತ್ತಿರುವೆ ಹೊರಗೆ ಪ್ರಾಣಸಂಕಟಕ್ಕೆ ಗುರಿಯಾಗಿರುವೆ ಒಳಗೆ.


“ನಾವು ಅವಿಧೇಯರಾಗಿ ಪಾಪಮಾಡಿದೆವು ನೀನು ಕ್ಷಮಿಸಲಿಲ್ಲ ನಮ್ಮನ್ನು.


ನಮ್ಮ ಪಿತೃಗಳು ಪಾಪಮಾಡಿ ಗತಿಸಿಹೋದರು ಅವರ ದೋಷಫಲವನ್ನು ನಾವು ಸವಿಯಬೇಕಾಗಿ ಬಂದಿತು.


ಮಿಡತೆಗಳು ನಾಡಿನ ಪೈರು ಪಚ್ಚೆಯನ್ನೆಲ್ಲ ತಿಂದುಬಿಟ್ಟವು. ಆಮೇಲೆ ನಾನು ಪ್ರಭುವಿಗೆ ಹೀಗೆಂದು ಮೊರೆಯಿಟ್ಟೆ: “ಒಡೆಯರಾದ ಸರ್ವೇಶ್ವರಾ, ನಮ್ಮನ್ನು ಆಲಿಸಿ, ಕ್ಷಮಿಸಿರಿ; ಅತಿ ಚಿಕ್ಕದಾದ ಯಕೋಬ ಜನಾಂಗ ಈ ಪಿಡುಗಿನಿಂದ ಉಳಿಯುವುದುಂಟೆ?”


“ಸರ್ವೇಶ್ವರಾ, ನಮ್ಮ ದೇವರೇ, ನೀವು ನಿಮ್ಮ ಭುಜಪರಾಕ್ರಮವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟಿನಿಂದ ಪಾರುಮಾಡಿ, ಇಂದಿನವರೆಗೂ ಸುಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡವರಾಗಿದ್ದೀರಿ. ಈಗ ಚಿತ್ತೈಸಿ. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು