Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:4 - ಕನ್ನಡ ಸತ್ಯವೇದವು C.L. Bible (BSI)

4 ನಾಡಿನಲ್ಲಿ ಮಳೆಯಿಲ್ಲದೆ ಭೂಮಿ ಬಿರುಕುಬಿಟ್ಟಿದೆ ನೇಗಿಲಯೋಗಿ ನಿರಾಶೆಗೊಂಡು ಮೋರೆ ಮುಚ್ಚಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇಶದಲ್ಲಿ ಮಳೆಯಿಲ್ಲದೆ ಭೂವಿುಯು ಬಿರುಕುಬಿಟ್ಟಿರುವದರಿಂದ ರೈತರು ನಾಚಿಕೆಪಟ್ಟು ಮೋರೆಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಭೂಮಿಗೆ ಮಳೆ ಬೀಳುವದಿಲ್ಲ. ಯಾರೂ ಬಿತ್ತನೆಗಾಗಿ ಭೂಮಿಯನ್ನು ಉಳುವದಿಲ್ಲ. ರೈತರು ಎದೆಗುಂದುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಿರಾಶರಾಗಿ ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:4
10 ತಿಳಿವುಗಳ ಹೋಲಿಕೆ  

ರೈತರೇ, ರೋದಿಸಿರಿ; ತೋಟಗಾರರೇ, ಪರಿತಪಿಸಿರಿ; ಗೋದಿಯೂ ಜವೆಗೋದಿಯೂ ಹಾಳಾಗಿವೆ; ಹೊಲದ ಬೆಳೆ ನಾಶವಾಗಿದೆ.


ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !


ಬೀಜಗಳು ಹೆಂಟೆಗಳ ಅಡಿಯಲ್ಲೇ ಒಣಗುತ್ತಿವೆ; ಉಗ್ರಾಣಗಳು ಬರಿದಾಗಿವೆ; ದವಸಧಾನ್ಯದ ಕೊರತೆಯಿಂದ ಕಣಜಗಳು ಕುಸಿದುಬಿದ್ದಿವೆ.


ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


ಅಲ್ಲಿಂದಲೂ ನಿರಾಶೆಯಿಂದ ತಲೆಯ ಮೇಲೆ ಕೈಹೊತ್ತು ಹೊರಡುವಿರಿ. ನೀವು ಯಾರಲ್ಲಿ ನಂಬಿಕೆಯಿಟ್ಟಿದ್ದಿರೋ ಅವರನ್ನು ಸರ್ವೇಶ್ವರನಾದ ನಾನು ನಿರಾಕರಿಸಿದ್ದೇನೆ. ಅವರಿಂದ ನಿಮ್ಮ ಕಾರ್ಯ ಕೈಗೂಡದು.”


ಹಲವಾರು ಊರಿನವರು ಕುಡಿಯುವ ನೀರಿಗಾಗಿ ಪರದಾಡುತ್ತಾ ಪಕ್ಕದ ಪಟ್ಟಣಕ್ಕೆ ಹೋದರೂ ಅವರ ದಾಹವು ಇಂಗಲಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಗೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ದಂಡಿಸುವೆನು; ನಿಮ್ಮ ಗರ್ವವನ್ನು ಅಡಗಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು