Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:14 - ಕನ್ನಡ ಸತ್ಯವೇದವು C.L. Bible (BSI)

14 ಅಪರಿಚಿತ ನಾಡಿಗೆ ಅವರನ್ನು ಸಾಗಿಸುವೆನು. ಅಲ್ಲಿ ಶತ್ರುಗಳಿಗೇ ಊಳಿಗದವರನ್ನಾಗಿಸುವೆನು. ಏಕೆಂದರೆ ನನ್ನ ಕೋಪಾಗ್ನಿ ಉರಿಯುತ್ತಿದೆ. ಅದು ನಿಮ್ಮನ್ನು ಸುಟ್ಟುಹಾಕುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವುಗಳನ್ನು ನಿನ್ನ ಶತ್ರುಗಳ ಕೈಗೆ ಕೊಟ್ಟು, ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿನ್ನ ಶತ್ರುಗಳ ಕೈಗೆ ಕೊಟ್ಟು ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೂದದ ಜನರೇ, ನಾನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವೆನು. ಅವರು ನೀವೆಂದೂ ತಿಳಿಯದ ಪ್ರದೇಶದಿಂದ ಬಂದು ನಿಮ್ಮನ್ನು ಅಲ್ಲಿಗೆ ಸಾಗಿಸುವರು. ನನಗೆ ಅತಿಕೋಪ ಬಂದಿದೆ. ನನ್ನ ಕೋಪವು ಜ್ವಾಲೆಯಂತಿದೆ. ಆ ಜ್ವಾಲೆಯಿಂದ ನೀವು ಸುಟ್ಟುಹೋಗುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿನ್ನ ಶತ್ರುಗಳ ಕೈಗೆ ಕೊಟ್ಟು, ನಿನ್ನನ್ನು ಗೊತ್ತಿಲ್ಲದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:14
18 ತಿಳಿವುಗಳ ಹೋಲಿಕೆ  

ಈ ಕಾರಣಗಳ ನಿಮಿತ್ತ ನೀವಾಗಲಿ ನಿಮ್ಮ ಪೂರ್ವಜರಾಗಲಿ ನೋಡದ ನಾಡಿಗೆ ನಿಮ್ಮನ್ನು ಇಲ್ಲಿಂದ ಎಸೆದುಬಿಡುವೆನು. ಅಲ್ಲಿ ಹಗಲಿರುಳೂ ಅನ್ಯದೇವತೆಗಳಿಗೆ ಸೇವೆಮಾಡುವಿರಿ, ನನ್ನ ದಯೆ ದಾಕ್ಷಿಣ್ಯ ಮಾತ್ರ ನಿಮಗೆ ದೊರಕದು".


‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


ನಾನು ನಿಮಗೆ ಹಕ್ಕು ಬಾಧ್ಯತೆಯಾಗಿ ದಯಪಾಲಿಸಿದ ಸೊತ್ತನ್ನು ನೀವು ದೋಷದಿಂದಲೆ ಕಳೆದುಕೊಳ್ಳುವಿರಿ. ನೀವು ನೋಡದ ನಾಡಿನಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೇ ಊಳಿಗದವರನ್ನಾಗಿ ಮಾಡುವೆನು. ನೀವು ನನ್ನ ಕೋಪಾಗ್ನಿಯನ್ನು ಹೊತ್ತಿಸಿದ್ದೀರಿ. ಅದು ನಿರಂತರವಾಗಿ ಉರಿಯುತ್ತಿರುವುದು.


ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ನಿಮ್ಮನ್ನೂ ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯಿಸುವರು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


“ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ಏಕೆಂದರೆ ನಾನು ನಿಮ್ಮನ್ನು ದಮಸ್ಕದಿಂದ ಆಚೆ ತಳ್ಳಿ, ಸೆರೆಯಾಳುಗಳನ್ನಾಗಿ ಕಳುಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಅರಸನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೆ ಬಿಟ್ಟುಹೋಗಬೇಕಾಯಿತು.


ಈ ಜನರನ್ನು ಜಗದ ರಾಜ್ಯಗಳೆಲ್ಲವು ಭಯೋತ್ಪಾದಕರೆಂದು ಭಾವಿಸುವಂತೆ ಮಾಡುವೆನು. ಹಿಜ್ಕೀಯನ ಮಗನು ಹಾಗು ಜುದೇಯದ ಅರಸನು ಆದ ಮನಸ್ಸೆಯು ಜೆರುಸಲೇಮಿನಲ್ಲಿ ನಡೆಸಿದ ದುಷ್ಕೃತ್ಯಕ್ಕೆ ಇದು ಪ್ರತೀಕಾರವಾಗಿರುವುದು.”


ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.”


ಜುದೇಯದವರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನಾದ ನನಗಾಗಿ ಸುನ್ನತಿಯಾಗಿರಿ. ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲವಾದರೆ ನಿಮ್ಮ ಪಾಪಾಕ್ರಮಗಳ ನಿಮಿತ್ತ ನನ್ನ ಕೋಪಾಗ್ನಿಯು ಭುಗಿಲೆದ್ದು ಆರಿಸಲಾಗದಷ್ಟು ಧಗಧಗಿಸುವುದು.”


ಎಂದೇ ಸುರಿಸಿದನಾತ ರೋಷಾಗ್ನಿಯನು, ಯುದ್ಧದ ರೌದ್ರವನು ಅವರ ಮೇಲೆಲ್ಲ; ಸುತ್ತಲು ಉರಿ ಹತ್ತಿದರೂ ಅವರು ಅರಿಯಲಿಲ್ಲ, ದಹಿಸಿದರೂ ಅವರು ಕಲಿಯಲಿಲ್ಲ.


ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು