Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:16 - ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ ಹೃದಯಾನಂದವೂ ಆದವು; ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿನ್ನ ಸಂದೇಶ ನನಗೆ ಬಂದಿತು. ನಾನು ನಿನ್ನ ಮಾತುಗಳನ್ನು ಆಹಾರವನ್ನಾಗಿ ಮಾಡಿಕೊಂಡೆ. ನಿನ್ನ ಸಂದೇಶದಿಂದ ನನಗೆ ತುಂಬಾ ಸಂತೋಷವಾಯಿತು. ನಿನ್ನನ್ನು ಹೆಸರಿಡಿದು ಕರೆಯುವುದರಿಂದ ನನಗೆ ಹೆಚ್ಚಿನ ಸಂತೋಷವಾಗಿತ್ತು. ನಿನ್ನ ಹೆಸರು ಸರ್ವಶಕ್ತನಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರ ಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವ ದೇವರೇ, ನಾನು ನಿನ್ನ ಹೆಸರಿನವನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:16
13 ತಿಳಿವುಗಳ ಹೋಲಿಕೆ  

ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ I ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ II


ಹೃದಯಾನಂದಕರ ನಿನ್ನ ಕಟ್ಟಳೆಗಳು I ನನಗಮರ ಸ್ವಾಸ್ತ್ಯವಾದುವುವು ಅವುಗಳು II


ನಿನ್ನ ಧರ್ಮಶಾಸ್ತ್ರ ನನಗೆನಿತೋ ಪ್ರಿಯ I ನಾನದರಲೇ ದಿನವೆಲ್ಲಾ ಧ್ಯಾನಮಯ II


ಸಾವಿರಾರು ಚಿನ್ನಬೆಳ್ಳಿ ನಾಣ್ಯಗಳಿಗಿಂತ I ನಿನ್ನ ಬಾಯಿಂದ ಬಂದ ಧರ್ಮಶಾಸ್ತ್ರ ಉಚಿತ II


ದಿಕ್ಕು ತೋಚದವನಂತೆ ನಿಶ್ಚಲರಾಗಿರುವಿರಿ, ಏಕೆ? ರಕ್ಷಿಸಲಾಗದ ರಣಧೀರನಂತಿರುವಿರಿ, ಏಕೆ? ಆದರೂ ಸರ್ವೇಶ್ವರಾ, ನೀವು ನಮ್ಮ ಮಧ್ಯೆ ಇರುವಿರಿ; ನಾವು ನಿಮ್ಮ ಹೆಸರಿನವರು, ನಮ್ಮನ್ನು ಕೈಬಿಡಬೇಡಿ.


“ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು: ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿತೆರೆದು ತಿಂದುಬಿಡು,” ಎಂದರು.


ಯಕೋಬ ವಂಶವು ಶಾಪಗ್ರಸ್ತವಾಗಲು ಸಾಧ್ಯವೆ? ಸರ್ವೇಶ್ವರ ತಾಳ್ಮೆಗೆಡುವುದುಂಟೆ? ಇಂಥ ಕೃತ್ಯಗಳನ್ನು ಅವರು ಮಾಡಿಯಾರೆ? ಸನ್ಮಾರ್ಗದಲ್ಲಿ ನಡೆಯುವವರಿಗೆ ಸ್ವಾಮಿಯ ವಾಕ್ಯ ಒಳಿತನ್ನುಂಟುಮಾಡುವುದಿಲ್ಲವೆ?” ಎನ್ನುವರು.


ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗಮನಿಸಿ, ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ಏನೂ ಇಲ್ಲದವರಿಗೆ ಪಾಲುಗಳನ್ನು ಕಳುಹಿಸಿ, ಬಹಳವಾಗಿ ಸಂತೋಷಪಟ್ಟರು.


ನಿನ್ನ ನಿಯಮಗಳ ನೆನೆದು ನಲಿವೆನಯ್ಯಾ I ನಿನ್ನ ವಾಕ್ಯವನು ಮರೆಯಲಾರೆನಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು