Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:19 - ಕನ್ನಡ ಸತ್ಯವೇದವು C.L. Bible (BSI)

19 ಅದಕ್ಕೆ ಸರ್ವೇಶ್ವರ : “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದರಿಂದ ಯೆಹೋವನು ಹೀಗಂದಿದ್ದಾನೆ - ನೀನು [ನನ್ನ ಕಡೆಗೆ] ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು; ನೀನು ತುಚ್ಫವಾದದ್ದನ್ನು ನಿರಾಕರಿಸಿ ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದಕಾರಣ ಯೆಹೋವ ದೇವರು ಹೀಗೆನ್ನುತ್ತಾರೆ: ನೀನು ಮಾನಸಾಂತರಪಟ್ಟರೆ, ನೀನು ನನಗೆ ಸೇವೆಮಾಡುವಂತೆ ನಾನು ನಿನ್ನನ್ನು ಪುನಃಸ್ಥಾಪಿಸುವೆನು. ನೀನು ತುಚ್ಛವಾದವುಗಳಿಗೆ ಬದಲಾಗಿ ಅಮೂಲ್ಯವಾದವುಗಳನ್ನೇ ಮಾತನಾಡುತ್ತಿದ್ದರೆ, ನೀನು ನನ್ನ ಬಾಯಿಯ ಹಾಗಿರುವೆ. ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂದಿರುಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:19
34 ತಿಳಿವುಗಳ ಹೋಲಿಕೆ  

“ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನೀನು ನನ್ನ ಮಾರ್ಗದಲ್ಲಿ ನಡೆದು, ನಾನು ನಿನಗೆ ವಹಿಸಿದ ಕಾರ್ಯವನ್ನು ನೆರವೇರಿಸಿದರೆ, ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ವ್ಯಾಪ್ತಿಯಲ್ಲಿ ಉಳ್ಳ ಎಲ್ಲದಕ್ಕೂ ವ್ಯವಸ್ಥಾಪಕನಾಗುವೆ. ಈ ಸನ್ನಿಧಾನದ ದೂತರ ಮಧ್ಯೆ ಬಂದುಹೋಗುವ ಹಕ್ಕನ್ನು ನಿನಗೆ ಕೊಡುವೆನು.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ದೇವರಿಗೆ ಮೀಸಲಾದ ವಸ್ತ್ರಗಳಾವುವು; ಸಲ್ಲದ ವಸ್ತ್ರಗಳಾವುವು; ಶುದ್ಧ, ಆಶುದ್ಧವಾದುವುಗಳಾವುವು ಎಂಬುದನ್ನು ನೀವು ವಿವೇಚಿಸಬೇಕು.


“ಮೀಸಲಾಗಿದದ್ದಕ್ಕೂ ಮೀಸಲಲ್ಲದ್ದಕ್ಕೂ ಇರುವ ಭೇದವನ್ನು ನನ್ನ ಜನರಿಗೆ ತೋರಿಸಿ, ಶುದ್ಧಾಶುದ್ಧ ವಿವೇಚನೆಯನ್ನು ಅವರಿಗೆ ಬೋಧಿಸಲಿ.


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಉಲ್ಲಂಘಿಸಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಗೊಳಿಸಿದ್ದಾರೆ; ಮೀಸಲಾದುದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ. ಶುದ್ಧಾ ಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯೆ ಅಪಕೀರ್ತಿಗೆ ಗುರಿಯಾಗಿದ್ದೇನೆ.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.


ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಆದುದರಿಂದ ಈಗಲೇ ಹೊರಡು; ನಿನ್ನ ಬಾಯಲ್ಲಿ ನಾನೇ ಇರುವೆನು; ನೀನು ಮಾತಾಡಬೇಕಾದುದನ್ನು ನಿನಗೆ ಕಲಿಸಿಕೊಡುವೆನು,” ಎಂದು ಹೇಳಿದರು.


ಅವರು ಕೇಳಲಿ ಅಥವಾ ಬಿಡಲಿ ನೀನು ನನ್ನ ವಾಕ್ಯವನ್ನು ಅವರಿಗೆ ನುಡಿಯಲೇಬೇಕು. ಅವರು ದ್ರೋಹಿಗಳೇ ಸರಿ.


ಏಕೆಂದರೆ, ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,” ಎಂದರು.


ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.


‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.


ಆದರೆ ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲಿಲ್ಲ. ಹೀಗೆ ನಿಮಗೋಸ್ಕರ ಶುಭಸಂದೇಶದ ಸತ್ಯಾರ್ಥವನ್ನು ಸುಭದ್ರವಾಗಿ ಇರಿಸಿದೆವು.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.


“ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು,” ಎಂದಿತು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಸ್ರಯೇಲಿನ ಜನರೇ, ನೀವು ಹಿಂದಿರುಗುವಿರಾದರೆ ನನ್ನ ಬಳಿಗೆ ಬನ್ನಿ. ಅಸಹ್ಯವಾದ ನಿಮ್ಮ ಮೂರ್ತಿ ಪೂಜಾವಸ್ತುಗಳನ್ನು ನನ್ನ ಕಣ್ಣೆದುರಿನಿಂದ ತೆಗೆದುಬಿಡಿ. ಆಗ ನೀವು ಅತ್ತಿತ್ತ ತೂರಾಡಲಾರಿರಿ.


ತಿದಿ ಬುಸುಬುಸುಗುಟ್ಟುತ್ತದೆ. ಸೀಸ ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಶ್ರಮವೆಲ್ಲ ವ್ಯರ್ಥ. ಏಕೆಂದರೆ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ.


ರೇಕಾಬನ ಮಗ ಯೋನಾದಾಬನ ಸಂತಾನದವರಲ್ಲಿ ನನ್ನ ಸಮ್ಮುಖ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು’ ಎಂದನು.”


ಅಡ್ಡಾಡುತ್ತಿರುವರು ಆಕೆಯ ಜನರು ಅನ್ನಕ್ಕಾಗಿ ಮಾರುತಿರುವರು ಅಮೂಲ್ಯವಾದುದನ್ನೆ ಆಹಾರಕ್ಕಾಗಿ. “ಸರ್ವೇಶ್ವರಾ, ನೋಡು, ಕಟಾಕ್ಷಿಸು, ನನ್ನ ತುಚ್ಛತೆಯನ್ನು” ಎಂದು ಹೇಳಿ ಆಕೆ ಪ್ರಲಾಪಿಸುತ್ತಿರುವಳು.


ಇವುಗಳಲ್ಲಿ ಶುದ್ಧಾಶುದ್ಧಬೇಧವನ್ನು ನಿರ್ಣಯಿಸುವ ನಿಯಮಗಳು ಇವು.


ಬಳಿಕ ಸ್ವಾಮಿ ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು