Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:4 - ಕನ್ನಡ ಸತ್ಯವೇದವು C.L. Bible (BSI)

4 ಈ ಜನರನ್ನು ಜಗದ ರಾಜ್ಯಗಳೆಲ್ಲವು ಭಯೋತ್ಪಾದಕರೆಂದು ಭಾವಿಸುವಂತೆ ಮಾಡುವೆನು. ಹಿಜ್ಕೀಯನ ಮಗನು ಹಾಗು ಜುದೇಯದ ಅರಸನು ಆದ ಮನಸ್ಸೆಯು ಜೆರುಸಲೇಮಿನಲ್ಲಿ ನಡೆಸಿದ ದುಷ್ಕೃತ್ಯಕ್ಕೆ ಇದು ಪ್ರತೀಕಾರವಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇವಿುನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಅವರನ್ನು ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೂದದ ಜನರನ್ನು ಭೂಲೋಕದ ಎಲ್ಲಾ ಜನರಿಗೆ ಒಂದು ಭಯಾನಕವಾದ ಉದಾಹರಣೆಯಾಗುವಂತೆ ಮಾಡುತ್ತೇನೆ. ಮನಸ್ಸೆಯು ಜೆರುಸಲೇಮಿನಲ್ಲಿ ಮಾಡಿದ ಪಾಪಕೃತ್ಯಗಳ ಫಲವಾಗಿ ನಾನು ಯೆಹೂದದಲ್ಲಿ ಹೀಗೆ ಮಾಡುತ್ತೇನೆ. ಮನಸ್ಸೆಯು ರಾಜನಾದ ಹಿಜ್ಕೀಯನ ಮಗನಾಗಿದ್ದನು. ಮನಸ್ಸೆಯು ಯೆಹೂದದ ರಾಜನಾಗಿದ್ದನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯು ಯೆರೂಸಲೇಮಿನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:4
19 ತಿಳಿವುಗಳ ಹೋಲಿಕೆ  

ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.


ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ಹೆಂಗಸರ ದಂಡನೆಗಾಗಿ ಸಭೆಯನ್ನು ಸೇರಿಸುವೆನು. ಇವರನ್ನು ಸೂರೆಗೆ ಒಳಗಾಗಿಸಿ ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದು ಇದು - ನೀವು ನನ್ನ ಮಾತನ್ನು ಕೇಳಲಿಲ್ಲ, ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ. ಇಗೋ ಸರ್ವೇಶ್ವರನಾದ ನನ್ನ ನುಡಿ: ಖಡ್ಗ-ವ್ಯಾಧಿ-ಕ್ಷಾಮ ಇವುಗಳಿಗೆ ನೀವು ಗುರಿ ಆಗುವಂತೆ ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ. ಲೋಕದ ಸಮಸ್ತ ರಾಜ್ಯಗಳ ಕಣ್ಣಿಗೆ ನೀವು ಭಯಾಸ್ಪದವಾಗುವಂತೆ ಮಾಡುವೆನು.


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.


ಇವರಿಗಾಗಲಿ ಇವರ ಪೂರ್ವಜರಿಗಾಗಲಿ ಪರಿಚಯವಿಲ್ಲದ ಜನಾಂಗಗಳ ನಡುವೆ ಇವರನ್ನು ಚದರಿಸಿಬಿಡುವೆನು. ಇವರು ಅಳಿದು ಹಾಳಾಗುವ ತನಕ ಇವರ ಹಿಂದೆ ಖಡ್ಗವನ್ನು ಕಳಿಸುವೆನು.”


“ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಮನಸ್ಸೆ ಅರಸನಾದಾಗ ಅವನಿಗೆ ಹನ್ನೆರಡು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು; ಅವನ ತಾಯಿಯ ಹೆಸರು ಹೆಫ್ಚಿಬಾ.


ಮನಸ್ಸೆ ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು.


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


“ಆದರೆ ನೀವು, - ‘ತಂದೆಯ ದೋಷಫಲವನ್ನು ಮಗನು ಹೇಗೆ ಅನುಭವಿಸುವುದಿಲ್ಲ?’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ ನನ್ನ ವಿಧಿಗಳನ್ನೆಲ್ಲಾ ಕೈಗೊಂಡು ಆಚರಿಸಿದರೆ ಖಂಡಿತ ಜೀವಿಸುವನು.


ಅವರು ಈಜಿಪ್ಟ್ ದೇಶವನ್ನು ಬಿಟ್ಟುಬಂದ ಪಿತೃಗಳ ಕಾಲ ಮೊದಲ್ಗೊಂಡು ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ,” ಎಂದು ಹೇಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು