Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:22 - ಕನ್ನಡ ಸತ್ಯವೇದವು C.L. Bible (BSI)

22 ಆ ಸಬ್ಬತ್ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿ. ಯಾವ ಕೆಲಸವನ್ನೂ ಮಾಡದಿರಿ. ನಾನು ನಿಮ್ಮ ಪೂರ್ವಜರಿಗೆ ಆಜ್ಞೆಮಾಡಿದಂತೆ ಸಬ್ಬತ್ ದಿನವನ್ನು ಪವಿತ್ರ ದಿನವನ್ನಾಗಿ ಆಚರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ; ಸಬ್ಬತ್ ದಿನವನ್ನು ನನ್ನ ದಿನವೆಂದು ಆಚರಿಸಿರಿ; ನಿಮ್ಮ ಪಿತೃಗಳಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸಬ್ಬತ್‌ದಿನದಂದು ನಿಮ್ಮ ಮನೆಯಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ. ಆ ದಿನ ಯಾವ ಕೆಲಸವನ್ನೂ ಮಾಡಬೇಡಿರಿ. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಇದೇ ಆದೇಶವನ್ನು ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸಬ್ಬತ್ ದಿನದಲ್ಲಿ ಹೊರೆಯನ್ನು ನಿಮ್ಮ ಮನೆಗಳಿಂದ ತೆಗೆದುಕೊಂಡು ಹೋಗಬೇಡಿರಿ. ಯಾವ ಕೆಲಸವನ್ನೂ ಮಾಡಬೇಡಿರಿ. ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರಕಾರವೇ, ಸಬ್ಬತ್ ದಿನವನ್ನು ಪರಿಶುದ್ಧವಾಗಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:22
19 ತಿಳಿವುಗಳ ಹೋಲಿಕೆ  

ಇದಲ್ಲದೆ, ತಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರ ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ ಅವರಿಗೂ ಸಂಕೇತವಾದ ಸಬ್ಬತ್ ದಿನಗಳನ್ನು ಅವರಿಗೆ ನೇಮಿಸಿದೆ.


“ನೀವು ಸಬ್ಬತ್‍ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್‍ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ


ವಾರದಲ್ಲಿ ನೀವು ಆರು ದಿವಸ ಕೆಲಸಮಾಡಿ. ಏಳನೆಯ ದಿವಸ ಯಾವ ಕೆಲಸವನ್ನೂ ಮಾಡದಿರಿ. ಆ ದಿನ ನಿಮ್ಮ ಎತ್ತುಗಳು, ಕತ್ತೆಗಳು, ದಾಸದಾಸಿಯರು ಹಾಗೂ ಪರದೇಶೀಯರು ವಿಶ್ರಮಿಸಿಕೊಳ್ಳಲಿ.


ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.


ಅನಂತರ ಅಲ್ಲಿಂದ ಹಿಂದಿರುಗಿ ಶವಲೇಪನಕ್ಕಾಗಿ ಸುಗಂಧದ್ರವ್ಯಗಳನ್ನು ಮತ್ತು ಪರಿಮಳ ತೈಲವನ್ನು ಸಿದ್ಧಮಾಡಿಕೊಂಡರು. ಸಬ್ಬತ್‍ದಿನ, ಧರ್ಮನಿಯಮಾನುಸಾರ ವಿಶ್ರಮಿಸಿಕೊಂಡರು.


ನರಪುತ್ರನು ಸಬ್ಬತ್ತಿಗೆ ಒಡೆಯನಾಗಿದ್ದಾನೆ,” ಎಂದು ಉತ್ತರಕೊಟ್ಟರು.


ನೀನು ನನ್ನ ಪವಿತ್ರವಸ್ತುಗಳನ್ನು ಅಲಕ್ಷ್ಯಮಾಡಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿರುವೆ. ಚಾಡಿಕೋರರು ನಿನ್ನಲ್ಲಿ ರಕ್ತ ಹರಿಸಿದ್ದಾರೆ;


ಆರು ದಿನಗಳಲ್ಲಿ ನೀವು ದುಡಿದು ಕೆಲಸಮಾಡಬೇಕು. ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದ ಸಬ್ಬತ್ ದಿನ. ಅಂದು ದೇವರ ಆರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ದುಡಿಮೆಯನ್ನೂ ಮಾಡಕೂಡದು. ನಿಮ್ಮ ನಿಮ್ಮ ನಿವಾಸಸ್ಥಳಗಳಲ್ಲೇ ಅದು ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನವಾಗಿರಬೇಕು.


ಪ್ರತಿಯೊಬ್ಬ ವ್ಯಕ್ತಿಯು ತನ್ನ ತಂದೆತಾಯಿಗಳ ವಿಷಯ಼ದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.


ಆ ಕಾಲದಲ್ಲಿ, ಜನರು ಸಬ್ಬತ್‍ದಿನ ಜುದೇಯನಾಡಿನಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನು ಕಂಡೆ; ಅಂತೆಯೇ ಕಣದ ಕಾಳನ್ನು ಕೂಡಿಸಿ ಆ ಕಾಳು, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು, ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಜೆರುಸಲೇಮಿಗೆ ತರುವುದನ್ನು ಗಮನಿಸಿದೆ. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ಅವರನ್ನು ಗದರಿಸಿದೆ.


“ಸರ್ವೇಶ್ವರನಾದ ನಾನು ಹೇಳುವ ಮಾತಿದು : ನೀವು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನು ತರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ಪವಿತ್ರವಾಗಿ ಆಚರಿಸಿದರೆ,


ನಿಮ್ಮ ಪಿತೃಗಳಂತೆ ಆಗಬೇಡಿ. ಅವರಿಗೆ ಪೂರ್ವಕಾಲದ ಪ್ರವಾದಿಗಳು, ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನಿಮ್ಮ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ಬಿಟ್ಟು ಹಿಂದಿರುಗಿ’ ಎಂದು ಸಾರಿದರು. ಆದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು