ಯೆರೆಮೀಯ 17:24 - ಕನ್ನಡ ಸತ್ಯವೇದವು C.L. Bible (BSI)24 “ಸರ್ವೇಶ್ವರನಾದ ನಾನು ಹೇಳುವ ಮಾತಿದು : ನೀವು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನು ತರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ಪವಿತ್ರವಾಗಿ ಆಚರಿಸಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನಾದ ನನ್ನ ನುಡಿ ಇದೇ - ನೀವು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ ಯಾವ ಕೆಲಸವನ್ನೂ ಮಾಡದೆ ಆ ದಿನವನ್ನು ನನ್ನ ದಿನವೆಂದು ಆಚರಿಸಿದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆದರೆ ನೀವು ಎಚ್ಚರಿಕೆಯಿಂದ ನನ್ನ ಆಜ್ಞೆಯನ್ನು ಪಾಲಿಸಬೇಕು.’” ಇದು ಯೆಹೋವನ ನುಡಿ. “‘ನೀವು ಸಬ್ಬತ್ದಿನದಂದು ಜೆರುಸಲೇಮಿನ ದ್ವಾರಗಳ ಮೂಲಕ ಯಾವ ಭಾರವನ್ನೂ ತರಬಾರದು. ಸಬ್ಬತ್ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ಆ ದಿನ ನೀವು ಯಾವ ಕೆಲಸವನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೆಹೋವ ದೇವರಾದ ನನ್ನ ನುಡಿ ಇದೇ: ನೀವು ನನ್ನನ್ನು ಜಾಗ್ರತೆಯಿಂದ ಕೇಳಿ, ಸಬ್ಬತ್ ದಿನದಲ್ಲಿ, ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತೆಗೆದುಕೊಂಡು ಬಾರದೆ, ಸಬ್ಬತ್ ದಿನದಲ್ಲಿ ಯಾವುದೊಂದು ಕೆಲಸಮಾಡದೆ ಪರಿಶುದ್ಧಮಾಡಿದರೆ, ಅಧ್ಯಾಯವನ್ನು ನೋಡಿ |
ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.