Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:3 - ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮ ಪ್ರಾಂತ್ಯಗಳಲ್ಲೆಲ್ಲ ನೀವು ಮಾಡಿದ ಪಾಪದ ನಿಮಿತ್ತ ನಾನು ನಿಮ್ಮ ಎಲ್ಲ ಸೊತ್ತುಸಂಪತ್ತುಗಳನ್ನು ಮತ್ತು ಪೂಜಾಸ್ಥಳಗಳನ್ನು ಸೂರೆಗೆ ಈಡುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬೈಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತಗಳಲ್ಲಿ ನೀವು ಮಾಡಿದ ಪಾಪದ ನಿವಿುತ್ತ ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನೂ ಪೂಜಾಸ್ಥಳಗಳನ್ನೂ ಸೂರೆಗೆ ಈಡುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ಆ ವಸ್ತುಗಳನ್ನು ಬೆಟ್ಟಗಳ ಮೇಲೆಯೂ ಬಯಲು ಪ್ರದೇಶದಲ್ಲಿಯೂ ಜ್ಞಾಪಿಸಿಕೊಳ್ಳುವರು. ಯೆಹೂದದ ಜನರಲ್ಲಿ ಭಂಡಾರಗಳಿವೆ. ನಾನು ಅವುಗಳನ್ನು ಬೇರೆಯವರಿಗೆ ಒಪ್ಪಿಸುತ್ತೇನೆ. ನಿಮ್ಮ ದೇಶದಲ್ಲಿದ್ದ ಎಲ್ಲಾ ಉನ್ನತಸ್ಥಳಗಳನ್ನು ಜನರು ನಾಶಮಾಡುವರು. ಆ ಸ್ಥಳಗಳಲ್ಲಿ ಪೂಜೆಮಾಡಿ ನೀವು ಪಾಪಕ್ಕೆ ಗುರಿಯಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾಡಿನಲ್ಲಿರುವ ನನ್ನ ಪರ್ವತವೇ, ನಿನ್ನ ಎಲ್ಲಾ ಪ್ರಾಂತಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಪೂಜಾಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:3
23 ತಿಳಿವುಗಳ ಹೋಲಿಕೆ  

ಸರ್ವೇಶ್ವರ : “ನಾಡಿನಾದ್ಯಂತ ನನ್ನ ಜನರು ಮಾಡಿದ ಎಲ್ಲ ಪಾಪಗಳ ನಿಮಿತ್ತ ಅವರ ಸೊತ್ತು ಸಂಪತ್ತನ್ನು ಪುಕ್ಕಟೆಯಾಗಿ ಕೊಳ್ಳೆಗಾರರ ಪಾಲಾಗಿಸುವೆನು.


“ಜುದೇಯದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮಿಕಾಯನು ಯೆಹೂದ್ಯರೆಲ್ಲರಿಗೆ: ‘ಸೇನಾಧೀಶ್ವರ ಸರ್ವೇಶ್ವರನ ಮಾತನ್ನು ಕೇಳಿರಿ: ಸಿಯೋನ್ ನಗರವನ್ನು ಹೊಲದಂತೆ ಉಳಲಾಗುವುದು; ಜೆರುಸಲೇಮ್ ಹಾಳುದಿಬ್ಬಗಳಾಗಿ ಮಾರ್ಪಡುವುದು; ಸರ್ವೇಶ್ವರನ ಆಲಯವಿರುವ ಪರ್ವತ ಕಾಡುಗುಡ್ಡಗಳಂತಾಗುವುದು’ ಎಂದು ಸಾರಿದ.


ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು.


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ಮಂಟಪವನ್ನು ಕೆಡವಿ, ನಿನ್ನ ಜಗಲಿಗಳನ್ನು ಒಡೆದು, ನಿನ್ನ ಬಟ್ಟೆಗಳನ್ನು ಕಿತ್ತು, ನಿನ್ನ ಒಡವೆಗಳನ್ನು ಸುಲಿದುಕೊಂಡು, ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು.


‘ಇಸ್ರಯೇಲಿನ ಬೆಟ್ಟಗಳೇ, ಸರ್ವೇಶ್ವರನಾದ ದೇವರ ಈ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಬೆಟ್ಟಗುಡ್ಡಗಳಿಗೂ ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾರೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.


ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ !


ನಾಡಿನ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಕೊಳ್ಳೆಗಾರರು ಕಾಡುಗುಡ್ಡೆಗಳ ಮೇಲೆಲ್ಲ ಕಂಡುಬಂದಿದ್ದಾರೆ. ಕಬಳಿಸಿಬಿಡುವುದು ನನ್ನ ಖಡ್ಗ ಯಾರಿಗು ನೆಮ್ಮದಿಯಿಲ್ಲದ ಹಾಗೆ.


ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.


ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II


ಅಷ್ಟು ಮಾತ್ರವಲ್ಲ, ಈ ನಗರದ ಎಲ್ಲ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಹಾಗು ಜುದೇಯದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಇವರ ಶತ್ರುಗಳ ಕೈವಶಮಾಡುವೆನು. ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.


ಅವರ ಆಸ್ತಿಪಾಸ್ತಿಯೆಲ್ಲಾ ಸೂರೆಯಾಗುವುದು, ಅವರ ಮನೆಮಠಗಳು ಹಾಳಾಗುವುವು; ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು; ದ್ರಾಕ್ಷಾತೋಟಗಳನ್ನು ಬೆಳೆಸಿಕೊಂಡರೂ ಅವುಗಳಿಂದ ದ್ರಾಕ್ಷಾರಸವನ್ನು ಕುಡಿಯರು.”


ಕಣಿವೆಯಲ್ಲಿನ ನಗರಿಯೇ, ಬಯಲಿನ ಬಂಡೆಯಲ್ಲಿರುವ ಪುರಿಯೇ, ‘ನಮ್ಮ ಮೇಲೆ ಯಾರಿಳಿದು ಬಂದಾರು? ನಮ್ಮ ನಿವಾಸಗಳಿಗೆ ಯಾರು ನುಗ್ಗಿಯಾರು?’ ಎನ್ನುವವರೇ, ಇಗೋ ನಾನೆ ನಿಮಗೆ ವಿರುದ್ಧವಾಗಿದ್ದೇನೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ಹೆಂಗಸರ ದಂಡನೆಗಾಗಿ ಸಭೆಯನ್ನು ಸೇರಿಸುವೆನು. ಇವರನ್ನು ಸೂರೆಗೆ ಒಳಗಾಗಿಸಿ ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು