Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:7 - ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರನಲ್ಲಿ ಭರವಸೆಯಿಟ್ಟವನಾದರೋ ಧನ್ಯ ! ಅಂಥವನಿಗೆ ಸರ್ವೇಶ್ವರನಲ್ಲೇ ವಿಶ್ವಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾವನು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾನೋ ಯಾವನಿಗೆ ಯೆಹೋವನು ಭರವಸವಾಗಿದ್ದಾನೋ ಅವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಯೆಹೋವನಲ್ಲಿ ನಂಬಿಕೆಯುಳ್ಳ ಮನುಷ್ಯನು ದೇವರ ಕೃಪೆಗೆ ಪಾತ್ರನಾಗುವನು. ಏಕೆಂದರೆ ತಾನು ನಂಬಿಕೆಯುಳ್ಳವನೆಂದು ಅವನು ಯೆಹೋವನಿಗೆ ತೋರಿಸಿಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಯಾವನು ಯೆಹೋವ ದೇವರಲ್ಲಿ ನಂಬಿಕೆ ಇಟ್ಟಿರುವನೋ, ಯಾವನಿಗೆ ಯೆಹೋವ ದೇವರು ಭರವಸೆಯಾಗಿದ್ದಾನೋ, ಆ ಮನುಷ್ಯನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:7
16 ತಿಳಿವುಗಳ ಹೋಲಿಕೆ  

ಸವಿದು ನೋಡು ಪ್ರಭುವಿನ ಮಾಧುರ್ಯವನು I ಆತನನು ಆಶ್ರಯಿಸಿಕೊಂಡವನು ಧನ್ಯನು II


ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು I ಗರ್ವಿಗಳನು, ಸುಳ್ಳುದೇವರನು, ಹಿಂಬಾಲಿಸನವನು II


ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ದೇವರ ವಾಕ್ಯ ಸ್ಮರಿಸುವವನು ಸುಕ್ಷೇಮದಿಂದ ಬಾಳುವನು; ಸರ್ವೇಶ್ವರನಲ್ಲಿ ಭರವಸೆ ಇಡುವವನು ಭಾಗ್ಯವಂತನು.


ಪ್ರಭುವೇ, ಸ್ವರ್ಗಸೇನಾಧೀಶ್ವರನೇ I ನಿನ್ನಲಿ ನಂಬಿಕೆ ಇಡುವವನೇ ಧನ್ಯನು I


ಇಸ್ರಯೇಲ ಕುಲದೇವರು ಯಾರಿಗೆ ಉದ್ಧಾರಕನೋ, ಅವನೇ ಧನ್ಯನು I ಪ್ರಭುವನು ತನ್ನ ದೇವರೆಂದು ಯಾರು ನಂಬಿಹನೋ, ಅವನೇ ಧನ್ಯನು II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು.


ಸ್ವಾಮಿ ದೇವಾ, ನೀನೇ ನನ್ನ ಭರವಸೆ I ಬಾಲ್ಯದಿಂದಲೂ ನೀನೇ ನನ್ನ ನಂಬಿಕೆ II


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ನೀನು ನನ್ನಲ್ಲಿ ಭರವಸೆಯಿಟ್ಟ ಕಾರಣ ನಿನ್ನನ್ನು ರಕ್ಷಿಸಿಯೇ ರಕ್ಷಿಸುವೆನು. ನೀನು ಕತ್ತಿಗೆ ತುತ್ತಾಗಲಾರೆ. ಅದರ ಬಾಯಿಂದ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ. ಇದು ಸರ್ವೇಶ್ವರನಾದ ನನ್ನ ವಾಣಿ.”


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!


ಕೆಳಗಿಳಿವರವರು, ಕುಸಿದು ಬೀಳುವರವರು I ಏಳುವೆವು, ಸ್ಥಿರನಿಲ್ಲುವೆವು ನಾವೆಲ್ಲರು II


ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು