Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:13 - ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ಇಂತೆಂದರು : “ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆಂದು ಅನ್ಯಜನಾಂಗಗಳಲ್ಲೆ ವಿಚಾರಿಸಿರಿ. ಇಸ್ರಯೇಲೆಂಬ ಯುವತಿ ಕೇವಲ ಅಸಹ್ಯಕಾರ್ಯವನ್ನೆ ಎಸಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗಿರಲು ಯೆಹೋವನು ಹೀಗೆನ್ನುತ್ತಾನೆ, “ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯಕಾರ್ಯವನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗಿರಲು ಯೆಹೋವನು ಹೀಗನ್ನುತ್ತಾನೆ - ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯ ಕಾರ್ಯವನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಹೇಳುವದನ್ನು ಆಲಿಸಿರಿ: “ಬೇರೆ ಜನಾಂಗದ ಜನರಿಗೆ ಈ ಪ್ರಶ್ನೆಯನ್ನು ಕೇಳಿರಿ, ‘ಇಸ್ರೇಲ್ ಮಾಡಿದಂಥ ದುಷ್ಕೃತ್ಯಗಳನ್ನು ಬೇರೆ ಯಾರಾದರೂ ಮಾಡಿದ್ದನ್ನು ನೀವು ಎಂದಾದರೂ ಕೇಳಿದ್ದೀರಾ?’ ಇಸ್ರೇಲ್ ದೇಶವು ದೇವರ ವಧುವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ಇತರ ಜನಾಂಗಗಳಲ್ಲಿ ವಿಚಾರಿಸಿರಿ. ಇಂಥವುಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾ ಭಯಂಕರವಾದದ್ದನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:13
14 ತಿಳಿವುಗಳ ಹೋಲಿಕೆ  

ಭೀಕರವಾದ ಹಾಗೂ ಅಸಹ್ಯವಾದ ಘಟನೆಗಳು ನಾಡಿನಲ್ಲಿ ನಡೆದುಬಂದಿವೆ.


ಇಸ್ರಯೇಲ್ ಮನೆತನದಲ್ಲಿ ಘೋರಕೃತ್ಯಗಳು ಕಾಣಿಸಿಕೊಂಡಿವೆ. ಅಲ್ಲಿ ಎಫ್ರಯಿಮಿನೊಳಗೆ ವೇಶ್ಯಾಚಾರ ನಡೆಯುತ್ತಿದೆ. ಇಸ್ರಯೇಲ್ ಕಲುಷಿತವಾಗಿದೆ.


ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥ ಸಂಗತಿಯನ್ನು ಕಂಡವರಾರು? ಒಂದೇ ದಿನದಲ್ಲಿ ದೇಶವೊಂದು ಹುಟ್ಟೀತೆ? ಕ್ಷಣಮಾತ್ರದಲ್ಲಿ ರಾಷ್ಟ್ರವನ್ನು ಹೆರಲಿಕ್ಕಾದೀತೆ? ಆದರೂ ಪ್ರಸವವೇದನೆ ತೊಡಗಿದೊಡನೆ ಸಿಯೋನೆಂಬಾಕೆ ಮಕ್ಕಳನ್ನು ಹೆತ್ತಿದ್ದಾಳೆ.”


ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳುಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು, ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ.


“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.


ಅನ್ಯಜನರಲ್ಲಿ ಕೂಡ ಇಲ್ಲದಂಥ ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ.


“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.


ಬಳಿಕ, ಹಿಲ್ಕೀಯನ ಮಗನೂ ರಾಜ ಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ಅರಸ ಹಿಜ್ಕೀಯನ ಬಳಿಗೆ ಬಂದು, ಅವನಿಗೆ ಆ ಸೇನಾಪತಿಯ ಮಾತುಗಳನ್ನು ತಿಳಿಸಿದರು.


“ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟರು. “ಅಯ್ಯೋ, ಹಿಂದೆ ಹೀಗಿರಲಿಲ್ಲ.


ಲೆಬನೋನಿನ ಹಿಮವು ಅರಣ್ಯದಾ ಶಿಖರದಿಂದ ತಪ್ಪುವುದುಂಟೆ? ಅಲ್ಲಿಂದ ಇಳಿದು ಹರಿಯುವ ತೊರೆಯ ನೀರು ಬತ್ತುವುದುಂಟೆ?


ಇಸ್ರಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯನ್ನು ಕೇಳಿ:


“ಕನ್ಯೆ ಇಸ್ರಯೇಲಳು ಬಿದ್ದಿಹಳು ಕೆಳಗೆ ಅಶಕ್ತಳು ಆಕೆ ಮರಳಿ ಏಳಲು ಮೇಲಕೆ ದಿಕ್ಕಿಲ್ಲದೆ ಒರಗಿಹಳು ಧರೆಯ ಮೇಲೆ ಮೇಲೆತ್ತಲು ಯಾರೂ ಗತಿಯಿಲ್ಲದ ಅಬಲೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು