Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:6 - ಕನ್ನಡ ಸತ್ಯವೇದವು C.L. Bible (BSI)

6 “ಇಸ್ರಯೇಲಿನ ವಂಶಜರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೇ? ಇಸ್ರಯೇಲಿನ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ ಹಾಗೆಯೇ ನೀವು ನನ್ನ ಕೈಯಲ್ಲಿ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಯೆಹೋವನು ಹೀಗೆನ್ನುತ್ತಾನೆ, ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಬಾರದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ, ನೀವು ನನ್ನ ಕೈಯಲ್ಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ ನೀವು ನನ್ನ ಕೈಯಲ್ಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಇಸ್ರೇಲ್ ಮನೆತನದವರೇ, ನಾನು ನಿಮಗೆ ಹೀಗೆಯೇ ಮಾಡಲು ಸಾಧ್ಯವೆಂಬುದನ್ನು ನೀವು ಬಲ್ಲಿರಿ. ನೀವು ಕುಂಬಾರನ ಕೈಯಲ್ಲಿದ್ದ ಜೇಡಿಮಣ್ಣಿನಂತಿದ್ದೀರಿ. ನಾನು ಆ ಕುಂಬಾರನಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಈ ಇಸ್ರಾಯೇಲಿನ ಮನೆತನದವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡಲಾರೆನೇ, ಎಂದು ಯೆಹೋವ ದೇವರು ಅನ್ನುತ್ತಾರೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ, ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:6
8 ತಿಳಿವುಗಳ ಹೋಲಿಕೆ  

ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ಧಿಕ್ಕಾರ ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ?


ಅವನು ಜೇಡಿ ಮಣ್ಣಿನಿಂದ ಮಾಡುತ್ತಿದ್ದ ಒಂದು ಪಾತ್ರೆ ಕೆಟ್ಟುಹೋಗುತ್ತಿದ್ದಾಗಲೆಲ್ಲ ಅದನ್ನು ಮತ್ತೆ ತನಗೆ ಸರಿತೋಚಿದ ಹಾಗೆ ಹೊಸ ಪಾತ್ರೆಯನ್ನಾಗಿ ಮಾಡುತ್ತಿದ್ದ.


ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.


ಕಾವಲುಗಾರನಾದ ದೂತನು ಆಕಾಶದಿಂದ ಇಳಿದುಬಂದು: ‘ಈ ಮರವನ್ನು ಕಡಿದು ಹಾಳುಮಾಡಿ. ಅದರ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಹಿತ್ತಾಳೆ ಕಬ್ಬಿಣಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ. ಅಡವಿಯ ಹುಲ್ಲು ಅದರ ಸುತ್ತಲು ಬೆಳೆದಿರಲಿ, ಆಕಾಶದ ಇಬ್ಬನಿ ಅದನ್ನು ತೋಯಿಸಲಿ. ಏಳು ವರ್ಷಕಾಲ ಕಳೆಯುವ ತನಕ ಕಾಡುಮೃಗಗಳ ಸಹವಾಸದ ಗತಿ ಬರಲಿ’ ಎಂದು ಸಾರುವುದನ್ನು ರಾಜರಾದ ನೀವೇ ನೋಡಿದ್ದೀರಿ.”


“ಪ್ರಭುವಿನ ಮನಸ್ಸನ್ನು ಅರಿತವರಾರು? ಅವರಿಗೆ ಉಪದೇಶಿಸುವವರಾರು?


ಆಗ ಸರ್ವೇಶ್ವರ ನನಗೆ ಅನುಗ್ರಹಿಸಿದ ಸಂದೇಶ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು