Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:3 - ಕನ್ನಡ ಸತ್ಯವೇದವು C.L. Bible (BSI)

3 ‘ಜುದೇಯದ ಅರಸರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನ ಸಂದೇಶವನ್ನು ಕೇಳಿರಿ. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ: ಈ ಸ್ಥಳದ ಮೇಲೆ ನಾನು ಕೇಡನ್ನು ಬರಮಾಡುವೆನು. ಅದರ ಸುದ್ದಿಯನ್ನು ಕೇಳುವವರ ಕಿವಿಗಳೂ ನಿಮಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೂದದ ಅರಸರೇ, ಯೆರೂಸಲೇವಿುನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಮೊರ್ರೆನ್ನುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ಜೊತೆಯಲ್ಲಿದ್ದ ಜನರಿಗೆ ಹೇಳು, ‘ಯೆಹೂದದ ರಾಜನೇ, ಜೆರುಸಲೇಮಿನ ಜನರೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಇಸ್ರೇಲರ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆ ಹೇಳುತ್ತಾನೆ: ನಾನು ಈ ಸ್ಥಳಕ್ಕೆ ಒಂದು ಭಯಂಕರವಾದ ಕೇಡನ್ನು ಉಂಟುಮಾಡುವೆನು. ಅದರ ಬಗ್ಗೆ ಕೇಳಿದ ಪ್ರತಿಯೊಬ್ಬ ವ್ಯಕ್ತಿಯು ವಿಸ್ಮಯಪಡುವನು ಮತ್ತು ಭಯಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ‘ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ. ಅದನ್ನು ಕೇಳುವವರೆಲ್ಲರ ಕಿವಿಗೆ ಜುಮ್ಮೆನ್ನುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:3
18 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ಸಮುವೇಲನಿಗೆ, “ನಾನು ಇಸ್ರಯೇಲರಲ್ಲಿ ಒಂದು ವಿಶೇಷಕಾರ್ಯವನ್ನು ನಡಿಸುವೆನು. ಈ ವಿಷಯವನ್ನು ಕೇಳುವವರ ಕಿವಿಗಳೆರಡೂ ನಿಮಿರುವುವು!


‘ಈ ಬಾಗಿಲುಗಳಲ್ಲಿ ಸೇರುವ ಜುದೇಯದ ಅರಸರೇ, ಎಲ್ಲ ಯೆಹೂದ್ಯರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಕೇಳಿರಿ.


ಜಗವೇ ಕೇಳು. ಇದೋ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಕೇಡನ್ನು ಬರಮಾಡುವೆನು. ಅವರ ಯೋಜನೆಗಳಿಗೆ ಅದೇ ತಕ್ಕ ಪ್ರತಿಫಲ.


ಅದು ಹಾದುಹೋಗುವಾಗಲೆಲ್ಲಾ ನಿಮ್ಮನ್ನು ಹಿಡಿದುಬಿಡುವುದು. ಪ್ರತಿದಿನವೂ ಹಗಲೂ ರಾತ್ರಿ ಅದು ಹಾದುಹೋಗುವುದು. ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”


ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.


ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.


ಬೆಂಬಲವಾಗಿ ನಿಂತಿಹನು ಪ್ರಭು ನಿನ್ನ ಹತ್ತಿರದಲೆ I ಸದೆಬಡಿವನು ಅರಸರನು ತನ್ನ ಪ್ರಕೋಪ ದಿನದಲೆ II


ಹೆದರುವುವು ಪ್ರಭುವೆಂಬ ನಿನ್ನ ನಾಮಕೆ ಜನಾಂಗಗಳು I ಭಯಪಡುವರು ನಿನ್ನ ಪ್ರತಾಪಕೆ ಭೂರಾಜರುಗಳು II


ಎಂತಲೇ ವಿವೇಕಿಗಳಾಗಿರಿ, ರಾಜರುಗಳೇ, I ಬುದ್ಧಿವಾದಕೆ ಕಿವಿಗೊಡಿ, ದೇಶಾಧಿಪತಿಗಳೇ II


“ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ಈ ನಗರದವರೂ ಇದರ ಸುತ್ತಮುತ್ತಿನ ಊರಿನವರೂ ನನ್ನ ಮಾತನ್ನು ಕೇಳದೆಹೋದರು. ತಮ್ಮ ಮನಸ್ಸನ್ನು ಕಲ್ಲಾಗಿಸಿಕೊಂಡರು. ಆದುದರಿಂದ ನಾನು ಈ ನಗರಕ್ಕೆ ಶಾಪ ಹಾಕಿದ ಕೇಡನ್ನೆಲ್ಲಾ ಅವರಿಗೆ ಬರಮಾಡುವೆನು,” ಎಂದು ಎಲ್ಲ ಜನರಿಗೆ ಸಾರಿದನು.


ಆದ್ದರಿಂದ ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ಯೆಹೂದ್ಯರಿಗೂ ಜೆರುಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ’.”


ಈಗ ನೀನು ಜುದೇಯದ ಹಾಗು ಜೆರುಸಲೇಮಿನ ಜನರಿಗೆ ಈ ಸಂದೇಶವನ್ನು ತಿಳಿಸು - ‘ಸರ್ವೇಶ್ವರ ಹೀಗೆನ್ನುತ್ತಾರೆ : ನಾನು ನಿಮಗೆ ವಿರುದ್ಧ ವಿಪತ್ತನ್ನು ಕಲ್ಪಿಸುತ್ತಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ದುರ್ಮಾರ್ಗವನ್ನು ಬಿಟ್ಟು ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


ಇಗೋ, ನನ್ನ ಹೆಸರುಗೊಂಡಿರುವ ನಗರದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಳ್ಳುವಿರೊ? ಆಗುವುದೇ ಇಲ್ಲ. ಏಕೆಂದರೆ ಭೂನಿವಾಸಿಗಳೆಲ್ಲರಿಗೆ ವಿರುದ್ಧವಾಗಿ ಖಡ್ಗವನ್ನು ಬರಮಾಡುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.’


ಅಲ್ಲಿನವರು ತಮಗೂ ನಿಮಗೂ ಮತ್ತು ನಿಮ್ಮ ಪೂರ್ವಜರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ಪೂಜಿಸುವುದಕ್ಕೆ ತವಕಪಟ್ಟರು. ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದರು. ಆದ್ದರಿಂದಲೇ ಆ ಸ್ಥಳಗಳು ಹಾಳಾದವು, ನಿರ್ಜನಪ್ರದೇಶಗಳಾದವು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಅಯ್ಯೋ, ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು