Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:5 - ಕನ್ನಡ ಸತ್ಯವೇದವು C.L. Bible (BSI)

5 ತಮ್ಮ ಮಕ್ಕಳನ್ನು ಬಾಳ್‍ದೇವತೆಗೆ ಆಹುತಿಕೊಡಲು ಆ ದೇವತೆಗೆ ಬಲಿಪೀಠಗಳನ್ನು ಕೂಡ ಏರ್ಪಡಿಸಿದ್ದಾರೆ. ನಾನು ಇಂಥ ಆಚಾರಗಳನ್ನು ವಿಧಿಸಲಿಲ್ಲ. ಅದರ ಮಾತನ್ನೇ ಎತ್ತಲಿಲ್ಲ. ಅಂಥದ್ದು ನನ್ನ ಮನಸ್ಸಿಗೂ ತೋಚಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ, ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿ ಕೊಡುವುದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ. ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ, ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿಕೊಡುವದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ; ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ. ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೂದದ ರಾಜರು ಬಾಳ್ ದೇವರಿಗಾಗಿ ಉನ್ನತವಾದ ಸ್ಥಳಗಳನ್ನು ಕಟ್ಟಿಸಿದರು. ಅವರು ಆ ಸ್ಥಳಗಳಲ್ಲಿ ತಮ್ಮ ಗಂಡುಮಕ್ಕಳನ್ನು ಹೋಮಮಾಡಿದರು. ಅವರು ಬಾಳ್ ದೇವರಿಗೆ ತಮ್ಮ ಗಂಡುಮಕ್ಕಳನ್ನು ಆಹುತಿಕೊಟ್ಟರು. ನಾನು ಹಾಗೆ ಮಾಡಲು ಅವರಿಗೆ ಹೇಳಿರಲಿಲ್ಲ. ನಿಮ್ಮ ಗಂಡುಮಕ್ಕಳನ್ನು ಆಹುತಿಯಾಗಿ ಕೊಡಿ ಎಂದು ನಿಮಗೆ ಹೇಳಲಿಲ್ಲ. ಅಂಥ ವಿಚಾರ ನನ್ನ ಮನಸ್ಸಿನಲ್ಲಿ ಬರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತಮ್ಮ ಮಕ್ಕಳನ್ನು ಬಾಳನಿಗೆ ದಹನಬಲಿಗಳಾಗಿ ಬೆಂಕಿಯಲ್ಲಿ ಸುಡುವುದಕ್ಕೆ ಬಾಳನ ಉನ್ನತ ಪೂಜಾಸ್ಥಳಗಳನ್ನು ಕಟ್ಟಿದ್ದಾರೆ. ಇಂಥಾದ್ದನ್ನು ನಾನು ಆಜ್ಞಾಪಿಸಲಿಲ್ಲ. ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:5
14 ತಿಳಿವುಗಳ ಹೋಲಿಕೆ  

ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿಕೊಡುವುದಕ್ಕಾಗಿ ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಾಳ್‍ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೆ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.”


ಸರ್ವೇಶ್ವರನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೆ ಮಾಡುತ್ತಾರೆ; ತಮ್ಮ ಗಂಡುಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೆ ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡುವ ಸೇವೆ ಹಾಗಿರಬಾರದು.


ನಿಮ್ಮ ಮಕ್ಕಳಲ್ಲಿ ಯಾರನ್ನೂ ಮೋಲೆಕ ದೇವತೆಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ಸರ್ವೇಶ್ವರ ನಾನೇ.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದರು. ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟವುಗಳನ್ನು ಮಾಡಿದರು. ಕಣಿಹೇಳುವುದು, ಯಂತ್ರಮಂತ್ರಗಳನ್ನು ಮಾಡುವುದು, ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನೇ ಮಾರಿಬಿಟ್ಟು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದರು.


“ರಾಜರೇ, ನೀವು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನು ಸಂಭವಿಸುವುದೋ ಎಂಬ ಯೋಚನೆ ನಿಮ್ಮಲ್ಲಿ ಹುಟ್ಟಿತ್ತು. ಗುಟ್ಟುಗಳನ್ನು ಬಟ್ಟಬಯಲಾಗಿಸುವಾತ ಮುಂದೆ ಸಂಭವಿಸುವುದನ್ನು ನಿಮಗೆ ಗೋಚರಪಡಿಸಿದ್ದಾರೆ.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವುವು:


ಅವರು ತಮ್ಮ ಚೊಚ್ಚಲುಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರವಸ್ಥೆಗೆ ತಂದೆನು.


ಅವನು ಬೆನ್‍ಹಿನ್ನೋಮ್ ಎಂಬ ಕಣಿವೆಯಲ್ಲಿ ಧೂಪ ಹಾಕಿಸಿದ್ದಲ್ಲದೆ ಸರ್ವೇಶ್ವರಸ್ವಾಮಿ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದ್ದನು.


ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು ‘ಬಾಳ್’ ಎಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಯೇಲರ ಶಿಬಿರದೊಂದು ಭಾಗವನ್ನು ತೋರಿಸಿದನು.


“ಆಹಾ, ಮಿತಿಮೀರಿದ ನಿನ್ನ ಕಾಮಾತುರ! ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಮಿಂಡರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲ ಅಸಹ್ಯವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,


ಇದಲ್ಲದೆ ಅವನು ತನ್ನ ಮಗನನ್ನು ಬಲಿಯಗ್ನಿಪರೀಕ್ಷೆಗೆ ಗುರಿಯಾಗಿಸಿದನು. ಕಣಿ ಹೇಳಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು