Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:16 - ಕನ್ನಡ ಸತ್ಯವೇದವು C.L. Bible (BSI)

16 ಹೌದು, ಮೆಮ್‍ಫಿಸ್ ಮತ್ತು ತಹಪನೇಸ್ ನಿವಾಸಿಗಳು ನಿನ್ನ ನಾಡನೆತ್ತಿಯನ್ನು ನುಣ್ಣಗೆ ಮೇದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೆಂಫೀಸ್ ಮತ್ತು ತಹಪನೇಸ್ ನಗರಗಳ ಜನರು ನಿನ್ನ ತಲೆಬುರುಡೆಯನ್ನು ಒಡೆದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:16
17 ತಿಳಿವುಗಳ ಹೋಲಿಕೆ  

“ಪ್ರಕಟಿಸಿರಿ ಈಜಿಪ್ಟಿನಲ್ಲಿ, ಪ್ರಚುರಪಡಿಸಿರಿ ಮಿಗ್ದೋಲ್, ತಹಪನೇಸ್, ಹಾಗು ಸೋಫ್ ಎಂಬೀ ನಗರಗಳಲ್ಲಿ. ಸಾರಿರಿ ಇಂತೆಂದು: ‘ಈಜಿಪ್ಟೇ, ಸ್ಥಿರವಾಗಿ ನಿಲ್ಲು, ಯುದ್ಧ ಸನ್ನದ್ಧವಾಗು, ಖಡ್ಗ ಆವರಿಸುತ್ತಿದೆ ನಿನ್ನ ಸುತ್ತಮುತ್ತಲು’


ಈಜಿಪ್ಟ್ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ನಗರಗಳಲ್ಲೂ ಮತ್ತು ಪತ್ರೋಸ್ ಪ್ರಾಂತ್ಯದಲ್ಲೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಿಳಿಯಪಡಿಸಿದ ವಾಣಿ ಇದು:


ಚೋಯನಿನ ಅಧಿಪತಿಗಳು ಮಂದಮತಿಗಳು. ನೋಫಿನ ಮುಖ್ಯಮಂತ್ರಿಗಳು ಮೋಸಗಾರರು. ಈಜಿಪ್ಟ್ ಜನಾಂಗದ ಮೂಲೆಗಲ್ಲಿನಂತಿದ್ದವರೇ ಜನರನ್ನು ತಪ್ಪುದಾರಿಗೆ ಎಳೆದಿದ್ದಾರೆ.


ಗಾದ್ ಕುಲ ಕುರಿತು ಮೋಶೆ ನುಡಿದದ್ದು: “ಗಾದ್ಯರ ಪ್ರಾಂತ್ಯವನು ವಿಸ್ತರಿಸಿದ ಸರ್ವೇಶ್ವರನಿಗೆ ಸ್ತೋತ್ರವು! ಸಿಂಹದಂತೆ ಹೊಂಚುಹಾಕಿ ಮುರಿವನು ಗಾದನು ಶತ್ರುಗಳ ಭುಜವನು, ಶಿರವನು.


ನಾನು ಈಜಿಪ್ಟಿಗೆ ಕಿಚ್ಚನ್ನು ಹತ್ತಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು; ತೆಬೆಸ್ ಭಂಗಕ್ಕೆ ಈಡಾಗುವುದು; ಮೆಂಫೀಸ್ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಮೆಂಫೀಸ್‍ನ ವಿಗ್ರಹಗಳನ್ನೆಲ್ಲ ಒಡೆದು, ಕೊನೆಗಾಣಿಸುವೆನು; ಈಜಿಪ್ಟ್ ದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.


ಈಜಿಪ್ಟಿನಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೊ. ಮೆಂಫಿಸ್ ನಗರ ಹಾಳಾಗುವುದು ಅದು ಸುಟ್ಟು ನಿರ್ಜನವಾಗುವುದು.


ಹದ್ದುಮೀರಿ ಜುದೇಯದೆಲ್ಲೆಡೆ ನುಗ್ಗಿ ಹಳ್ಳಕೊಳ್ಳಗಳನ್ನು ತುಂಬುವುದು. ಕುತ್ತಿಗೆಯ ತನಕ ಉಕ್ಕಿಬಂದು ದಿಣ್ಣೆದಿಬ್ಬಗಳನ್ನು ಮುಳುಗಿಸುವುದು. ದೇವರು ನಮ್ಮೊಡನೆ (ಇಮ್ಮಾನುವೇಲ್) ಇರುವರು. ಅವರ ಬಿಚ್ಚುರೆಕ್ಕೆಗಳು ನಾಡಿನ ಉದ್ದಗಲವನ್ನೂ ಆವರಿಸುವುವು, ಇಡೀ ನಾಡಿಗೆ ಆಶ್ರಯ ನೀಡುವುವು.


ಫರೋಹ ನೆಕೋವನು ಇವನನ್ನು ಜೆರುಸಲೇಮಿನಲ್ಲಿ ಬಹುದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ದಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.


ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಅಂಥ ಜೊಂಡನ್ನು ಊರಿಕೊಳ್ಳುವವನ ಕೈಯನ್ನೇ ಚುಚ್ಚಿ ತಿವಿಯುವ ಕೋಲು ಅದು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.’


ಪಲಾಯನವಾದವರು ಹೆಷ್ಬೋನಿನ ನೆರಳಲ್ಲಿ ನಿಂತಿದ್ದಾರೆ ಬಲಗುಂದಿದವರಾಗಿ. ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಆ ಹೆಷ್ಬೋನಿನಿಂದಲೆ ಹೊರಟಿದೆ ಅಗ್ನಿ. ಮೋವಾಬಿನ ಮೇರೆಯನ್ನೂ ಶಿಖರವನ್ನೂ ನುಂಗಿಬಿಟ್ಟಿದೆ ಆ ಬೆಂಕಿ.


ವಿನಾಶದ ದೇಶವನ್ನು ಅವರು ಬಿಟ್ಟುಹೋಗಬಹುದು. ಆದರೆ ಈಜಿಪ್ಟ್ ಅವರಿಗೆ ಸ್ಮಶಾನವಾಗುವುದು.ಮೋಫ್ ಪಟ್ಟಣದಲ್ಲಿ ಅವರಿಗೆ ಸಮಾಧಿಯಾಗುವುದು. ಅವರ ಬೆಳ್ಳಿಯ ಒಡವೆಗಳು ಮುಳ್ಳುಪೊದೆಗಳ ಪಾಲಾಗುವುವು; ಅವರ ಗುಡಾರಗಳಲ್ಲಿ ಕಳೆಗಳು ಬೆಳೆಯುವುವು.


ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು