Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:22 - ಕನ್ನಡ ಸತ್ಯವೇದವು C.L. Bible (BSI)

22 ನೀನು ಎಷ್ಟೇ ಚೌಳಿನಿಂದ ತೊಳೆದುಕೊಂಡರೂ ಎಷ್ಟೇ ಸಬ್ಬುಸೀಗೆಯಿಂದ ಉಜ್ಜಿಕೊಂಡರೂ ನಿನ್ನ ಅಕ್ರಮ ನನ್ನೆದುರಿಗೆ ಕಣ್ಣುಕಿಚ್ಚಾಗಿ ನಿಂತಿದೆ. ಇದು ಸರ್ವೇಶ್ವರ ಸ್ವಾಮಿಯಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ” ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀನು ಬಹಳ ಚೌಳನ್ನು ಹಾಕಿಕೊಂಡು ಸಬ್ಬಿನಿಂದ ತೊಳಕೊಂಡರೂ ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕರೆಯಾಗಿ ನಿಂತಿದೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀನು ಚೌಳನಿಂದ ತೊಳೆದುಕೊಂಡರೂ ಹೆಚ್ಚು ಸೋಪನ್ನು ಉಪಯೋಗಿಸಿದರೂ ನಾನು ನಿನ್ನ ದೋಷವನ್ನು ಕಂಡುಹಿಡಿಯಬಲ್ಲೆ” ಅನ್ನುತ್ತಾನೆ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀನು ಸಾಬೂನಿನಿಂದ ತೊಳೆದುಕೊಂಡರೂ, ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:22
12 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಜುದೇಯದ ಜನರಿಗೆ ಹೀಗೆನ್ನುತ್ತಾರೆ : “ಜುದೇಯದ ಪಾಪವನ್ನು ಕಬ್ಬಿಣದ ಲೇಖನಿಯಿಂದ, ವಜ್ರದ ಮೊನೆಯಿಂದ ಬರೆಯಲಾಗಿದೆ. ಅದನ್ನು ನಿಮ್ಮ ಜನರ ಹೃದಯದ ಹಲಗೆಯ ಮೇಲೂ ಅವರ ಬಲಿಪೀಠಗಳ ಕೊಂಬುಗಳ ಮೇಲೂ ಕೆತ್ತಲಾಗಿದೆ.


ಆಗ ನನ್ನ ದ್ರೋಹವನ್ನೆಲ್ಲ ಮೂಟೆಕಟ್ಟಿ ಮೂಲೆಗೆ ಹಾಕುವೆ ನನ್ನ ದೋಷವನ್ನು ಮುಚ್ಚಿ, ನೀ ಮರೆಮಾಡುವೆ.


“ಎಫ್ರಯಿಮಿನ ಅಕ್ರಮಗಳೆಲ್ಲ ದಾಖಲಾಗಿವೆ. ಅದರ ಪಾಪಕೃತ್ಯಗಳನ್ನೆಲ್ಲ ಒಂದೂ ಬಿಡದೆ ಲೆಕ್ಕಹಾಕಿಡಲಾಗಿದೆ.


ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.


ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II


ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.


ನಿನ್ನ ನೋಟಕೆ ಮರೆಯಾಗಿಲ್ಲ ನಮ್ಮ ಪಾಪದೋಷಗಳು I ನಿನ್ನ ಮುಖಕಾಂತಿಗೆ ಬಟ್ಟಬಯಲಾಗಿವೆ ಗುಪ್ತಾಪರಾಧಗಳು II


“ಇಸ್ರಯೇಲನನು ಇಟ್ಟಿದ್ದೇನೆ ಮುದ್ರೆಹಾಕಿ ಉಗ್ರಾಣದೊಳು ಇಟ್ಟಿದ್ದೇನೆ ಭದ್ರವಾಗಿ.


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಆಗ ದಾವೀದನು, “ಹಾಗಾದರೆ ನೀನು ಈ ಹೊತ್ತು ಇಲ್ಲೇ ಇರು; ನಾಳೆ ನಿನ್ನನ್ನು ಕಳುಹಿಸುತ್ತೇನೆ,” ಎಂದು ಆಜ್ಞಾಪಿಸಿದನು. ಅಂತೆಯೇ ಊರೀಯನು ಆ ದಿನ ಜೆರುಸಲೇಮಿನಲ್ಲೇ ಇದ್ದನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಆರಿಸಿ, ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು