Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:23 - ಕನ್ನಡ ಸತ್ಯವೇದವು C.L. Bible (BSI)

23 ‘ನಾನು ಅಶುದ್ಧಳಾಗಲಿಲ್ಲ, ಬಾಳ್‍ದೇವತೆಗಳನ್ನು ಹಿಂಬಾಲಿಸಲೇ ಇಲ್ಲ’ ಎಂದು ಹೇಗೆ ತಾನೆ ಹೇಳಬಲ್ಲೆ? ಆ ಕಣಿವೆಯಲ್ಲಿ ನಿನ್ನ ಹೆಜ್ಜೆಗುರುತುಗಳನ್ನು ನೋಡು ಅಲ್ಲಿ ನೀನು ಎಸಗಿದ ದುಷ್ಕೃತ್ಯಗಳನ್ನು ಮನಸ್ಸಿಗೆ ತಂದುಕೊ. ಅತ್ತ ಇತ್ತ ನೆಗೆದಾಡುವ, ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನನಗೆ ಮುಡಚಟ್ಟಾಗಲಿಲ್ಲ, ಅನ್ಯದೇವತೆಗಳನ್ನು ನಾನು ಹಿಂಬಾಲಿಸಲಿಲ್ಲವೆಂದು ಹೇಗೆ ಹೇಳುತ್ತೀ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ಕೆಲಸವನ್ನು ಮನಸ್ಸಿಗೆ ತಂದುಕೋ, ತನ್ನ ಜಾಡೆಗಳನ್ನು ತಾರುಮಾರು ಮಾಡುವ ವೇಗವಾದ ಹೆಣ್ಣು ಒಂಟೆಯಂತಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಯೆಹೂದವೇ, ‘ನಾನು ತಪ್ಪಿತಸ್ಥಳಲ್ಲವೆಂದೂ ನಾನು ಬಾಳನ ವಿಗ್ರಹಗಳನ್ನು ಪೂಜಿಸಲಿಲ್ಲವೆಂದೂ’ ನೀನು ನನಗೆ ಹೇಗೆ ಹೇಳುವೆ? ನೀನು ಕಣಿವೆಯಲ್ಲಿ ಮಾಡಿದ ಕಾರ್ಯಗಳ ಬಗ್ಗೆ ಯೋಚಿಸು. ನೀನು ಮಾಡಿದ ಕೆಲಸಗಳ ಬಗ್ಗೆ ಯೋಚಿಸು. ನೀನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಿಹೋಗುವ ತೀವ್ರಗತಿಯ ಹೆಣ್ಣು ಒಂಟೆಯಂತೆ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಇದಲ್ಲದೆ ನೀನು, ‘ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ,’ ಎಂದು ಹೇಳುವುದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು. ನೀನು ಮಾಡಿದ್ದನ್ನು ತಿಳಿದುಕೋ. ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:23
24 ತಿಳಿವುಗಳ ಹೋಲಿಕೆ  

ತಮ್ಮ ಗಂಡುಹೆಣ್ಣು ಮಕ್ಕಳನ್ನೂ ಆಹುತಿಕೊಡುವುದಕ್ಕೆ ಬೆನ್‍ಹಿನ್ನೋಮ್ ಕಣಿವೆಯಲ್ಲಿನ ತೋಫೆತೆಂಬ ಬಲಿಪೀಠವನ್ನು ಕಟ್ಟಿದ್ದಾರೆ. ಇಂಥ ಕಾರ್ಯವನ್ನು ನಾನು ವಿಧಿಸಿಲ್ಲ. ಅದು ನನ್ನ ಮನಸ್ಸಿಗೂ ಸುಳಿದಿಲ್ಲ.


ತಮ್ಮ ಕೊಳೆಯನ್ನು ತೊಳೆದುಕೊಳ್ಳದ, ತಾವೆ ಪರಿಶುದ್ಧರೆಂದು ಎಣಿಸಿಕೊಳ್ಳುವ ಜನರುಂಟು.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು.


“ನಂಬಿಕೆ ದ್ರೋಹಿಯಾದ ಕುವರಿಯೇ, ಎಂದಿನವರೆಗೆ ಅತ್ತಿತ್ತ ಅಲೆದಾಡುತ್ತಿರುವೆ? ಸರ್ವೇಶ್ವರನಾದ ನಾನು ಅಪೂರ್ವವಾದುದನ್ನು ಉಂಟಾಗಿಸಿರುವೆ: ಇಗೋ, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”


ನನ್ನ ಮಾತನ್ನು ಕೇಳದೆ, ಧರ್ಮಮಾರ್ಗದಲ್ಲಿ ನಡೆಯದೆ, ಹಟಮಾರಿಗಳಂತೆ ಸ್ವೇಚ್ಛಾನುಸಾರ ನಡೆದುಕೊಂಡರು. ತಮ್ಮ ಪೂರ್ವಜರು ಕಲಿಸಿಕೊಟ್ಟ ಹಾಗೆ ಬಾಳ್‍ದೇವತೆಗಳನ್ನು ಹಿಂಬಾಲಿಸಿದರು.


ಕಣ್ಣೆತ್ತಿ ಬೋಳು ಬೆಟ್ಟಗಳನ್ನು ನೋಡು, ಯಾವುದರಲ್ಲಿ ತಾನೆ ನೀನು ವೇಶ್ಯೆಯಾಗಿ ವರ್ತಿಸಲಿಲ್ಲ? ಅರಬೀಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುಹಾಕುತ್ತಾ ಕುಳಿತಿದ್ದೆ. ನಿನ್ನ ವೇಶ್ಯೆತನದಿಂದಲೂ ನಿನ್ನ ಕೆಟ್ಟತನದಿಂದಲೂ ನಾಡನ್ನು ಅಪವಿತ್ರಮಾಡಿರುವೆ.


ವ್ಯಭಿಚಾರಿಣಿಯ ವರ್ತನೆ ಹೀಗಿದೆ: ಅವಳು ಉಣ್ಣುತ್ತಾಳೆ, ಬಾಯಿ ಒರೆಸಿಕೊಳ್ಳುತ್ತಾಳೆ. ಬಳಿಕ ‘ನಾನು ತಪ್ಪುಮಾಡಲಿಲ್ಲವಲ್ಲಾ’ ಎನ್ನುತ್ತಾಳೆ.


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


“ಬೈಲಿಗೆ ಬಾರದು ನಿನ್ನ ದೋಷವು, ನಿನಗದು ಕೇಡು ತರದು” I ಇಂತುಲಿದು ಆ ಪಾಪದ ಜಿನುಗು ಅವನನು ವಂಚಿಸುತಿಹುದು II


ಅಲ್ಲಿನ ಯೆಹೂದ್ಯರು ಹರ್ಷಾನಂದ ಪ್ರಭಾವಗಳಿಂದ ಪುಳಕಿತರಾದರು.


ನಿಮ್ಮ ಮಾರ್ಗವನ್ನು ಕೈಬಿಟ್ಟು ಎಷ್ಟು ಸುಲಭವಾಗಿ ಅತ್ತಿತ್ತ ಓಡಾಡುತ್ತೀರಿ! ಅಸ್ಸೀರಿಯದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿರೋ ಹಾಗೆಯೇ ಈಜಿಪ್ಟಿನ ವಿಷಯವಾಗಿಯೂ ಆಶಾಭಂಗಪಡುವಿರಿ.


ಈ ಜನರನ್ನು ಕುರಿತು ಸರ್ವೇಶ್ವರ ನನಗೆ ಹೇಳಿದ ಮಾತುಗಳು : “ಇವರು ಅಲೆದಾಡಲು ಇಷ್ಟಪಡುವ ಜನರು. ತಮ್ಮ ಕಾಲಿನ ಮೇಲೆ ಹತೋಟಿಯಿಲ್ಲದವರು. ಆದಕಾರಣ ಸರ್ವೇಶ್ವರನಾದ ನಾನು ಇವರನ್ನು ಕರುಣೆಯಿಂದ ನೋಡುವುದಿಲ್ಲ. ಇದೀಗಲೆ ಇವರ ಅಪರಾಧಗಳನ್ನು ನೆನಪಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು.”


“ಇದನ್ನೆಲ್ಲ ನೀನು ಆ ಜನರಿಗೆ ತಿಳಿಸುವಾಗ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಸರ್ವೇಶ್ವರ ವಿಧಿಸಿದ್ದೇಕೆ? ನಾವು ಮಾಡಿದ ಅಪರಾಧವಾದರೂ ಏನು? ನಮ್ಮ ದೇವರಾದ ಸರ್ವೇಶ್ವರನಿಗೆ ವಿರುದ್ಧ ನಾವು ಕಟ್ಟಿಕೊಂಡ ಪಾಪವೇನು?’ ಎಂದು ಕೇಳುವರು.


ಸರ್ವೇಶ್ವರಸ್ವಾಮಿ ಪ್ರಥಮವಾಗಿ ಹೊಶೇಯನ ಸಂಗಡ ಮಾತನಾಡುತ್ತಾ ಆತನಿಗೆ ಹೇಳಿದ್ದೇನೆಂದರೆ: “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೊ. ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೊ. ಏಕೆಂದರೆ, ನನ್ನ ಪ್ರಜೆ ನನ್ನನ್ನು ತೊರೆದುಬಿಟ್ಟು ವ್ಯಭಿಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಇದು ನಿದರ್ಶನವಾಗಿರಲಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು