Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:26 - ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರ ಹೀಗೆನ್ನುತ್ತಾರೆ : “ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುತ್ತಾನೋ ಹಾಗೆಯೆ, ಎಲೈ ಇಸ್ರಯೇಲ್ ಜನರೇ, ನೀವು ನಾಚಿಕೆಪಡುವಿರಿ. ಮರಕ್ಕೆ, ‘ನೀನು, ನನ್ನ ತಂದೆ’ ಎಂತಲೂ ಕಲ್ಲಿಗೆ, ‘ನೀನು ಹೆತ್ತ ತಾಯಿ’ ಎಂತಲೂ ಹೇಳುತ್ತೀರಿ. ನಿಮ್ಮ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಎಲ್ಲರು ಮಾನಭಂಗಕ್ಕೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವದು; ಮರಕ್ಕೆ, ನೀನು ನನ್ನ ತಂದೆ ಎಂತಲೂ ಕಲ್ಲಿಗೆ, ಹೆತ್ತ ತಾಯಿ ನೀನು ಎಂತಲೂ ಹೇಳುವ ಪ್ರಜೆಗಳು, ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಜನರ ಕೈಗೆ ಸಿಕ್ಕಿಬಿದ್ದಾಗ ಕಳ್ಳನಿಗೆ ನಾಚಿಕೆಯಾಗುತ್ತದೆ. ಅದೇ ರೀತಿಯಲ್ಲಿ ಇಸ್ರೇಲ್ ವಂಶವು ನಾಚಿಕೆಪಡುತ್ತದೆ. ರಾಜರು ಮತ್ತು ನಾಯಕರು ನಾಚಿಕೆಪಡುವರು. ಯಾಜಕರು ಮತ್ತು ಪ್ರವಾದಿಗಳು ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲ್ ಜನರಿಗೆ ನಾಚಿಕೆ ಆಯಿತು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:26
18 ತಿಳಿವುಗಳ ಹೋಲಿಕೆ  

ಅದರ ಅರಸರು, ಮಂತ್ರಿಗಳು, ಯಾಜಕರು, ಪ್ರವಾದಿಗಳು, ಜುದೇಯದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು, ಹೀಗೆ ಎಲ್ಲ ಇಸ್ರಯೇಲರೂ ಯೆಹೂದ್ಯರೂ ಅಧರ್ಮವನ್ನು ಹೇರಳವಾಗಿಮಾಡಿ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ಈ ನಗರವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂದಿದೆ.


ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ; ನಮ್ಮ ಪಾಪಗಳ ನಿಮಿತ್ತ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಸಿಕ್ಕಿಬಿದ್ದೆವು. ಈಗಿರುವಂತೆ, ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿ ಆದೆವು.


ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.


ಮೋವಾಬೇ, ನೀನು ಇಸ್ರಯೇಲನ್ನು ಕುರಿತು ಗೇಲಿಮಾಡುತ್ತಿದ್ದೆಯಲ್ಲವೆ? ಕಳ್ಳರ ಗುಂಪಿಗೆ ಸೇರಿ ಅದು ಸಿಕ್ಕಿಕೊಂಡಂತೆ ನಿನಗೆ ಕಾಣುತ್ತಿತ್ತೇ? ಇಸ್ರಯೇಲಿನ ಪ್ರಸ್ತಾಪ ಎತ್ತಿದಾಗಲೆಲ್ಲ ನೀನು ತಲೆಯಾಡಿಸಿ ಹಿಯ್ಯಾಳಿಸುತ್ತಿಯಲ್ಲವೆ?


ನಿಮ್ಮ ಮಾರ್ಗವನ್ನು ಕೈಬಿಟ್ಟು ಎಷ್ಟು ಸುಲಭವಾಗಿ ಅತ್ತಿತ್ತ ಓಡಾಡುತ್ತೀರಿ! ಅಸ್ಸೀರಿಯದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿರೋ ಹಾಗೆಯೇ ಈಜಿಪ್ಟಿನ ವಿಷಯವಾಗಿಯೂ ಆಶಾಭಂಗಪಡುವಿರಿ.


ನೀವು ಬಯಸಿದ ಎಲ್ಲಾ ಮರಗಳನ್ನು ಪೂಜಿಸಿದ್ದಕ್ಕಾಗಿ ಹೇಸುವಿರಿ: ಪವಿತ್ರ ವನಗಳನ್ನು ನಿರ್ಮಿಸಿದ್ದಕ್ಕಾಗಿ ನಾಚಿಕೆಪಡುವಿರಿ.


ಹೀಗಿರಲು, ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವೆ, ನಾಚಿಕೆಪಡುವೆ.


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಉಲ್ಲಂಘಿಸಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಗೊಳಿಸಿದ್ದಾರೆ; ಮೀಸಲಾದುದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ. ಶುದ್ಧಾ ಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯೆ ಅಪಕೀರ್ತಿಗೆ ಗುರಿಯಾಗಿದ್ದೇನೆ.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ನಾನು ಶಾಪವನ್ನು ಕಳುಹಿಸುತ್ತೇನೆ. ಅದು ಕಳ್ಳನ ಮನೆಯನ್ನೂ ನನ್ನ ಹೆಸರೆತ್ತಿ ಸುಳ್ಳಾಣೆಯಿಡುವವನ ಮನೆಯನ್ನೂ ಹೊಕ್ಕು, ಅಲ್ಲಿ ತಂಗಿದ್ದು ಅದನ್ನು ಕಲ್ಲುಮರ ಸಹಿತ ಸಂಪೂರ್ಣವಾಗಿ ಭಸ್ಮಮಾಡುವುದು,” ಎಂದನು.


ನಾಚಲಿ ವ್ಯರ್ಥವಿಗ್ರಹಗಳನು ಪೂಜಿಸಿ ಹಿಗ್ಗುವವರು I ಪ್ರಭುವಿಗೆ ಅಡ್ಡಬೀಳಲಿ ಆ ದೇವರುಗಳೆಲ್ಲರು II


ವಿಗ್ರಹಗಳನ್ನು ಕೆತ್ತುವವರೆಲ್ಲರು ನಿರರ್ಥಕರು; ಅವರ ಇಷ್ಟಬೊಂಬೆಗಳು ಏತಕ್ಕೂ ಬಾರವು; ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.


ವಿಗ್ರಹಾರಾಧಕರೆಲ್ಲರೂ ಆಶಾಭಂಗಪಡುವರು. ಅದನ್ನು ಕೆತ್ತಿದವರು ಕೇವಲ ಮನುಷ್ಯ ಮಾತ್ರರು. ಅವರೆಲ್ಲರು ಇಲ್ಲಿಗೆ ಕೂಡಿಬರಲಿ; ನಿಶ್ಚಯವಾಗಿ ಅವರು ಹೆದರಿ ಲಜ್ಜೆಪಡುವರು.


ಸರ್ವೇಶ್ವರ ಸ್ವಾಮಿ ಹೀಗೆಂದರು - “ಆ ದಿನದಂದು ಅರಸರು ಎದೆಗುಂದುವರು, ಅಧಿಪತಿಗಳ ಹೃದಯ ಕುಗ್ಗುವುದು. ಯಾಜಕರು ಸ್ತಬ್ಧರಾಗುವರು; ಪ್ರವಾದಿಗಳು ನಿಬ್ಬೆರಗಾಗುವರು.”


ನಿನ್ನನ್ನು ಅಟ್ಟಿ ಮೇಯಿಸುವ ಕುರುಬರನ್ನು ಗಾಳಿ ಅಟ್ಟಿಸಿಕೊಂಡು ಹೋಗುವುದು. ನಿನ್ನ ಮಿಂಡರನ್ನು ಸೆರೆಹಿಡಿದುಕೊಂಡು ಹೋಗುವರು. ಆಗ ಖಂಡಿತವಾಗಿ ನೀನು ಆಶಾಭಂಗಪಡುವೆ ನಿನ್ನ ದುಷ್ಕೃತ್ಯಗಳ ನಿಮಿತ್ತ ಅವಮಾನಕ್ಕೀಡಾಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು