Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:31 - ಕನ್ನಡ ಸತ್ಯವೇದವು C.L. Bible (BSI)

31 ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೀವು ಎಂಥಾ ದುರ್ವಂಶ! ಯೆಹೋವನ ಮಾತನ್ನು ನೋಡಿರಿ, ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ ಗಾಢಾಂಧಕಾರದ ಪ್ರದೇಶವಾಗಿಯೂ ಪರಿಣವಿುಸಿದ್ದೆನೋ? ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು ಎಂದು ನನ್ನ ಜನರು ಹೇಳುವದು ಹೇಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಇಸ್ರಾಯೇಲರೇ, ನೀವು ಯೆಹೋವ ದೇವರ ವಾಕ್ಯವನ್ನು ಗಮನಿಸಿರಿ: “ನಾನು ಇಸ್ರಾಯೇಲಿನ ಮರುಭೂಮಿಯಾದೆನೋ? ಗಾಡಾಂಧಕಾರದ ದೇಶವಾದೆನೋ? ನನ್ನ ಜನರು, ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ, ನಾವು ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವುದಿಲ್ಲ,’ ಎಂದು ಹೇಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:31
26 ತಿಳಿವುಗಳ ಹೋಲಿಕೆ  

“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ಈಗಾಗಲೇ ನೀವು ಸಂತೃಪ್ತರಾಗಿಬಿಟ್ಟಿರೋ? ಇಷ್ಟಕ್ಕೇ ಶ್ರೀಮಂತರಾಗಿಬಿಟ್ಟಿರೋ? ನಮ್ಮನ್ನು ಬಿಟ್ಟು ನೀವು ಸಿಂಹಾಸನವೇರಿಬಿಟ್ಟಿರೋ? ನೀವು ನಿಜವಾಗಿಯೂ ರಾಜರಾಗಿದ್ದರೆ ಚೆನ್ನಾಗಿರುತ್ತಿತ್ತು! ಆಗ ನಾವೂ ನಿಮ್ಮ ಜೊತೆ ರಾಜ್ಯ ಆಳಬಹುದಿತ್ತು!


ಸರ್ವೇಶ್ವರಸ್ವಾಮಿಯಲ್ಲಿ ಭಯಭಕ್ತಿಯಿಂದಿರುವುದು ಸುಜ್ಞಾನ. ಇದು ಆ ಸ್ವಾಮಿಯ ವಾಣಿ; ಪಟ್ಟಣಕ್ಕೆ ನೀಡುವ ಎಚ್ಚರಿಕೆಯ ಕರೆ:


ಜುದೇಯದಲ್ಲಿ ಮಹಾ ಭೂಕಂಪ ಆಗುವುದಕ್ಕೆ ಎರಡು ವರ್ಷಗಳ ಮುಂಚೆ, ತೆಕೋವದ ಕುರುಬರಲ್ಲೊಬ್ಬನಾದ ಆಮೋಸನಿಗೆ ಇಸ್ರಯೇಲಿನ ವಿಷಯವಾಗಿ ದೇವರಿಂದ ಬಂದ ಪ್ರಕಟನೆಗಳು ಇವು. ಆಗ ಜುದೇಯ ನಾಡನ್ನು ಉಜ್ಜೀಯನೆಂಬ ಅರಸನು ಆಳುತ್ತಿದ್ದ ಕಾಲ. ಅಂತೆಯೇ, ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರಯೇಲನ್ನು ಆಳುತ್ತಿದ್ದ ಕಾಲ.


ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.


ನಾನು ಗುಟ್ಟುಗುಟ್ಟಾಗಿ ಮಾತಾಡಿದವನಲ್ಲ ಕಗ್ಗತ್ತಲೆಯೊಳಗಿನಿಂದ ನುಡಿದವನಲ್ಲ ಶೂನ್ಯದಲ್ಲಿ ನನ್ನ ಹುಡುಕಿರಿ ಎಂದು ಯಕೋಬ ವಂಶಕ್ಕೆ ಹೇಳಿದವನಲ್ಲ. ಸರ್ವೇಶ್ವರನಾದ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೆ ಸ್ಪಷ್ಟವಾಗಿ ಹೇಳುವವನು.”


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


“ನಮ್ಮ ತುಟಿಗೆ ಹತೋಟಿ ಬೇಕಿಲ್ಲ; ನಾಲಗೆಯೇ ಗೆಲುವಿನ ಮೂಲ I ನಮಗೊಡೆಯನ ಅವಶ್ಯವಿಲ್ಲ” ಎಂದವರಾಡುವುದು ಸಲ್ಲ II


ಸೊಕ್ಕೇರಿದ ಮುಖದಾತನು ಪ್ರಭುವನು ಅರಸುವುದಿಲ್ಲ I ಅವನ ಮನದೊಳಿದೊಂದೇ ಭಾವನೆ : “ದೇವರೇ ಇಲ್ಲ"! II


ಚಾದೋಕ್ ಸಂತಾನದ ಮಹಾಯಾಜಕ ಅಜರ್ಯನು, “ಜನರು ದೇವರಾದ ಸರ್ವೇಶ್ವರನಿಗೆ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಸರ್ವೇಶ್ವರ ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.


ನಾನು ಪ್ರಮಾಣಮಾಡಿ ಕೊಟ್ಟ ನಾಡಿಗೆ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ನಾಡಿಗೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿ, ನನ್ನನ್ನು ತಾತ್ಸಾರಮಾಡಿ, ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಗೀತೆ ಇವರ ಸಂತತಿಯವರ ಬಾಯಲ್ಲಿದ್ದು ಅವರ ಮುಂದೆ ಸಾಕ್ಷಿಕೊಡುವುದು,” ಎಂದು ಹೇಳಿದರು.


“ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.


ನಾನು, ‘ಅನ್ಯದೇವತೆಗಳನ್ನು ಅರಸಿ ಓಡಬೇಡ, ನಿನ್ನ ಪಾದರಕ್ಷೆ ಸವೇದೀತು, ನಿನ್ನ ಗಂಟಲು ಸೊರಗೀತು’ ಎಂದೆ. ನೀನೋ, ‘ಆ ಮಾತು ಆಶಾದಾಯಕವಲ್ಲ, ಅದನ್ನು ಕೇಳಲಾಗದು; ಅನ್ಯದೇವತೆಗಳ ಮೇಲೆ ಮೋಹಗೊಂಡಿದ್ದೇನೆ. ಅವರನ್ನೇ ಹಿಂಬಾಲಿಸುತ್ತೇನೆ’ ಎಂದೆ.”


ಎಲೈ ಇಸ್ರಯೇಲರೇ, ಮರೆತಿರಾ ಜನ್ಮವಿತ್ತ ಪೊರೆಬಂಡೆಯನು ಸ್ಮರಿಸಲಿಲ್ಲ ನೀವು ಹೆತ್ತತಾಯಂತಿದ್ದಾ ದೇವರನು.


ಫರೋಹನು, “ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಏಕೆ ಆಶಿಸುತ್ತಿ?” ಎಂದು ಕೇಳಿದನು. ಅವನು, “ಏನೂ ಕೊರತೆಯಾಗಿಲ್ಲ; ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಉತ್ತರಕೊಟ್ಟನು. ಹದದನು ತನ್ನ ಊರಿಗೆ ಮರಳಿದನು.


ಆದರೆ ಈ ದುರುಳರೇ, ದೇವರಿಗೆ, ‘ನಮ್ಮನ್ನು ಬಿಟ್ಟು ತೊಲಗು, ನಮಗೆ ಬೇಡವಾಗಿದೆ ನಿನ್ನ ಮಾರ್ಗದ ಅರಿವು’.


ಆದುದರಿಂದ ಗಣ್ಯವ್ಯಕ್ತಿಗಳ ಬಳಿಗೆ ಹೋಗಿ ಮಾತಾಡುವೆನು ಅವರು ಸರ್ವೇಶ್ವರನ ಮಾರ್ಗ ಹಾಗೂ ಅವರ ದೇವರ ನ್ಯಾಯವಿಧಿಗಳನ್ನು ಬಲ್ಲವರು,” ಎಂದುಕೊಂಡೆನು. ಆದರೆ ಆ ವ್ಯಕ್ತಿಗಳು ಕೂಡ ನೊಗವನ್ನು ಮುರಿದವರು, ಕಣ್ಣಿಗಳನ್ನು ಕಿತ್ತುಬಿಟ್ಟವರು.


ಆದಕಾರಣ ಅಡವಿಯ ಸಿಂಹ ಅವರನ್ನು ಕೊಲ್ಲುವುದು ಕಾಡಿನ ತೋಳ ಕೊಳ್ಳೆಹೊಡೆಯುವುದು ಚಿರತೆ ಅವರ ಪಟ್ಟಣಗಳಿಗೆ ಹೊಂಚುಹಾಕುವುದು ಅಲ್ಲಿಂದ ಹೊರಬರುವ ಪ್ರತಿಯೊಬ್ಬನನ್ನು ಸೀಳುವುದು. ಅವರ ಅಪರಾಧಗಳೋ ಬಹಳ, ಅವರ ದ್ರೋಹಗಳೋ ಅಪಾರ !


ಇಸ್ರಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದ್ದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು