Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:9 - ಕನ್ನಡ ಸತ್ಯವೇದವು C.L. Bible (BSI)

9 "ಆದಕಾರಣ ಸರ್ವೇಶ್ವರನಾದ ನಾನು ನಿಮ್ಮೊಡನೆ ಇನ್ನೂ ವ್ಯಾಜ್ಯಮಾಡುತ್ತೇನೆ; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು,” ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯವಾಡುವೆನು; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆದ್ದರಿಂದ ನಾನು ನಿಮ್ಮನ್ನು ಮತ್ತೊಮ್ಮೆ ಆಪಾದಿಸುವೆನು. ನಾನು ನಿಮ್ಮ ಮೊಮ್ಮಕ್ಕಳ ಮೇಲೂ ಆಪಾದಿಸುವೆನು” ಎನ್ನುತ್ತಾನೆ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆದ್ದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯವಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಇದಲ್ಲದೆ ನಿಮ್ಮ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:9
12 ತಿಳಿವುಗಳ ಹೋಲಿಕೆ  

“ನೀವಾದರೋ, ‘ನಾವು ನಿರ್ದೋಷಿಗಳು, ಸರ್ವೇಶ್ವರನ ಕೋಪ ನಮ್ಮ ಮೇಲಿಂದ ತೊಲಗಿಹೋಗಿದೆ, ಇದು ನಿಶ್ಚಯ’ ಎಂದುಕೊಂಡಿದ್ದೀರಿ. ‘ನಾವು ಪಾಪಮಾಡಿಲ್ಲ’ ಎಂದು ನೀವು ಹೇಳಿದ ಕಾರಣ ನಿಮ್ಮನ್ನು ನ್ಯಾಯತೀರ್ಪಿಗೆ ಗುರಿಮಾಡಿಯೇ ತೀರುವೆನು.


“ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.”


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಮಕ್ಕಳೇ, ವಾದಿಸಿರಿ; ನಿಮ್ಮ ತಾಯಿಯೊಡನೆ ವಾದಿಸಿರಿ. ಅವಳು ನನ್ನ ಪತ್ನಿಯಲ್ಲ, ನಾನು ಅವಳ ಪತಿಯಲ್ಲ. ತನ್ನ ಮುಖದಿಂದ ವೇಶ್ಯಾಚಾರದ ಸೋಗನ್ನೂ ಸ್ತನಮಧ್ಯದಿಂದ ವ್ಯಭಿಚಾರದ ಬೆಡಗನ್ನೂ ತ್ಯಜಿಸಲಿ.


ನಿಮ್ಮ ದೂರೇನು? ನೀವೆಲ್ಲರು ನನಗೆ ದ್ರೋಹಿಗಳಾದಿರಿ, ಏಕೆ?


ಮಂಡಿಸು ನನ್ನ ವಿರುದ್ಧ ನಿನ್ನ ಆಪಾದನೆಯನ್ನು; ಒಟ್ಟಿಗೆ ವಾದಿಸೋಣ ಮಂಡಿಸು ನಿನ್ನ ನ್ಯಾಯವನ್ನು; ನೀನು ನಿರ್ದೋಷಿಯೆಂದು ರುಜುಪಡಿಸು ನೋಡೋಣ.


ಸ್ವಾಮಿ ವಾದಿಸುವುದಕ್ಕೆ ಸಿದ್ಧವಿದ್ದಾರೆ. ಅವರು ಜನರ ನ್ಯಾಯವನ್ನು ನಿರ್ಣಯಿಸುವುದಕ್ಕೆ ತಯಾರಾಗಿದ್ದಾರೆ.


ನಾನು ಆ ವ್ಯಕ್ತಿಗೂ ಅವನ ಕುಟುಂಬದವರಿಗೂ ವಿಮುಖನಾಗುವೆನು; ಅವನನ್ನು ಮಾತ್ರವಲ್ಲ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕ ದೇವತೆಗೆ ಶರಣಾದವರೆಲ್ಲರನ್ನು ತಮ್ಮ ಜನದಿಂದ ತೆಗೆದುಹಾಕುವೆನು.


ಭೂಮ್ಯಾಕಾಶಗಳನು ಕರೆಯುತಿಹನು I ಪ್ರಜೆಗೆ ವಿಧಿಪಾ ತೀರ್ಪನು ನೋಡಲೆಂದು II


ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.


ಯಕೋಬನು ಅಣ್ಣನ ಜೊತೆ ತಾಯಿಯ ಗರ್ಭದಲ್ಲಿರುವಾಗಲೇ ಅವನ ಹಿಮ್ಮಡಿಯನ್ನು ಹಿಡಿದು ವಂಚಿಸಿದನು. ಪ್ರಾಯಕ್ಕೆ ಬಂದಮೇಲೆ ದೇವರೊಡನೆ ಹೋರಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು