Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:18 - ಕನ್ನಡ ಸತ್ಯವೇದವು C.L. Bible (BSI)

18 ಗರ್ಭ ಬಿಟ್ಟು ನಾನೇಕೆ ಹೊರಬಂದೆ? ಕಷ್ಟದುಃಖಗಳನ್ನು ಅನುಭವಿಸುವುದಕ್ಕೊ? ಅವಮಾನದಲ್ಲೆ ಬಾಳಿನ ದಿನಗಳನ್ನೆಲ್ಲ ಕಳೆಯುವುದಕ್ಕೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಶ್ರಮದುಃಖಗಳನ್ನು ನೋಡುವುದಕ್ಕೂ, ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವುದಕ್ಕೂ ಗರ್ಭದಿಂದ ಏಕೆ ಹೊರಟು ಬಂದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ಶ್ರಮದುಃಖಗಳನ್ನು ನೋಡುವದಕ್ಕೂ ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವದಕ್ಕೂ ಗರ್ಭದಿಂದ ಏಕೆ ಹೊರಟುಬಂದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ತಾಯಿಯ ಗರ್ಭದಿಂದ ಏಕೆ ಹೊರಬರಬೇಕಿತ್ತು? ನಾನು ಕಷ್ಟವನ್ನು ಮತ್ತು ದುಃಖವನ್ನು ಕಂಡಿರುವೆನಷ್ಟೇ. ನನ್ನ ಜೀವನವು ನಾಚಿಕೆಯಲ್ಲಿಯೇ ಕೊನೆಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ಕಷ್ಟವನ್ನೂ, ಚಿಂತೆಯನ್ನೂ ನೋಡುವುದಕ್ಕೂ, ನನ್ನ ದಿವಸಗಳು ನಾಚಿಕೆಯಲ್ಲಿ ಕಳೆದುಹೋಗುವುದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:18
27 ತಿಳಿವುಗಳ ಹೋಲಿಕೆ  

ಕಷ್ಟದಲ್ಲಿರುವವರಿಗೆ ಏತಕ್ಕೆ ಬೆಳಕು? ದುಃಖಪೀಡಿತನಿಗೆ ಏತಕ್ಕೆ ಬದುಕು?


ಸರ್ವೇಶ್ವರನ ಕೋಪವೆಂಬ ಕೋಲಿನಿಂದಲೇ ಪೆಟ್ಟುತಿಂದ ವ್ಯಕ್ತಿಯೆಂದರೆ ನಾನೇ


“ಹೆಣ್ಣಿನಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನು, ದುಃಖಭರಿತನು.


ನನಗಾದ ನಿಂದೆ, ಅಪಮಾನ, ಲಜ್ಜೆ ನಿನಗೆ ತಿಳಿದಿದೆಯಯ್ಯಾ I ನನ್ನ ವೈರಿ ವಿರೋಧಿಗಳು ನಿನಗೆ ಮರೆಯಾಗಿಲ್ಲವಯ್ಯಾ II


ಅಂತೆಯೇ ನಾವು ಅವರ ನಿಮಿತ್ತ ನಮಗೆ ಬರುವ ನಿಂದೆ ಅವಮಾನಗಳನ್ನು ಹೊತ್ತು ನಮ್ಮ ಪಾಳೆಯದಿಂದಾಚೆ ಅವರ ಬಳಿಗೆ ಹೋಗೋಣ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಇನ್ನೂ ಕೆಲವರು ಹಾಸ್ಯ ಪರಿಹಾಸ್ಯ, ಏಟುಪೆಟ್ಟು, ಸೆರೆಸಂಕಲೆಗಳನ್ನು ಅನುಭವಿಸಿದರು.


ದೇವರ ಚಿತ್ತವನ್ನು ನೆರವೇರಿಸಿ, ಅವರು ವಾಗ್ದಾನಮಾಡಿರುವುದನ್ನು ಪಡೆದುಕೊಳ್ಳುವಂತೆ, ನೀವೂ ದೃಢಮನಸ್ಕರಾಗಿರಬೇಕು.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನೀವು ಅತ್ತುಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು.


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


ಅಯ್ಯೋ, ನಾನು ಮುಕ್ತನಾಗಿಲ್ಲ ದುಃಖದಿಂದ ನನ್ನ ಹೃದಯ ಕುಂದಿಹೋಗಿದೆ ಶೋಕದಿಂದ.


“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.


ಅಂಗಾಲಿನಿಂದ ನಡುನೆತ್ತಿಯವರೆಗೆ ಪೆಟ್ಟು ಬಾಸುಂಡೆ, ಮಾಗದ ಗಾಯಗಳೇ ಹೊರತು ಮತ್ತೇನೂ ಅಲ್ಲ. ಅವನ್ನು ತೊಳೆದು ಕಟ್ಟಿಲ್ಲ. ಎಣ್ಣೆ ಸವರಿ ಮೃದುವಾಗಿಸಿಲ್ಲ.


ಆಹಾ! ಬಚ್ಚಿಡಲಾರೆಯಾ ನನ್ನನ್ನು ಪಾತಾಳದೊಳಗೆ? ಅಲ್ಲಿ ಮರೆಮಾಚಿಡಲಾರೆಯಾ ನಿನ್ನ ಕೋಪ ಇಳಿಯುವವರೆಗೆ? ಕಾಲವನ್ನು ಗೊತ್ತುಮಾಡಲಾರೆಯಾ ನನ್ನನು ನೆನೆಯುವುದಕೆ?


ಜ್ವಾಲೆಗಳು ಏರುವುದು ಮೇಲಕೆ ಜನರು ಹುಟ್ಟಿರುವುದು ದುಃಖಕೆ.


ಮಾಯವಾಗುತ್ತಿದೆ ನನ್ನೀ ಜೀವಮಾನ ಹೊಗೆಯಂತೆ I ಉರಿಯುತ್ತಿವೆ ಎನ್ನೆಲುಬುಗಳು ಒಲೆಯಲ್ಲಿಟ್ಟ ಕೊರಡಿನಂತೆ II


ನಾವೇ ತಂದುಕೊಂಡ ಅವಮಾನವೆಂಬ ಹಾಸಿಗೆಯಲ್ಲಿ ಬಿದ್ದಿರೋಣ. ನಾಚಿಕೆಯೆಂಬ ಹೊದಿಕೆ ನಮ್ಮನ್ನು ಮುಚ್ಚಿಬಿಡಲಿ. ಚಿಕ್ಕತನದಿಂದ ಈವರೆಗು ನಾವೂ ನಮ್ಮ ಪೂರ್ವಜರೂ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಇದಿರಾಗಿ ಪಾಪಮಾಡುತ್ತಾ ಬಂದಿರುವುದು ನಿಶ್ಚಯ. ಆ ಸ್ವಾಮಿಯ ಮಾತನ್ನು ಕೇಳದೆಹೋದೆವಲ್ಲಾ!” ಎಂದು ಮೊರೆಯಿಡುತ್ತಿದ್ದಾರೆ.


“ನನ್ನ ಹೆತ್ತತಾಯೇ, ನನ್ನ ಗತಿಯನ್ನು ಏನು ಹೇಳಲಿ! ಜಗದ ಜನರಿಗೆಲ್ಲ ನಾನೊಬ್ಬ ಜಗಳಗಂಟಿಗ, ವ್ಯಾಜ್ಯಗಾರ. ನಾನು ಹಣವನ್ನು ಸಾಲವಾಗಿ ಕೊಟ್ಟವನಲ್ಲ, ಕೊಂಡವನೂ ಅಲ್ಲ. ಆದರೂ ನನ್ನನ್ನು ಎಲ್ಲರು ಶಪಿಸುವವರೇ.


ಕೇಡನ್ನು ನಾ ನೋಡುವಂತೆ ಮಾಡಿದೆಯೇಕೆ? ಕಷ್ಟವನ್ನು ನಾ ಕಾಣುವಂತೆ ಮಾಡಿದೆಯೇಕೆ? ಹಿಂಸೆಬಾಧೆಗಳು ಇವೆ ನನ್ನ ಕಣ್ಣ ಮುಂದೆ. ಇಗೋ, ಜಗಳ ನಡೆಯುತಿದೆ, ವ್ಯಾಜ್ಯವೇಳುತಿದೆ.


ತರುವಾಯ ತಾನೊಬ್ಬನೇ, ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ದೂರಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. “ಸರ್ವೇಶ್ವರಾ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡಿ; ನನ್ನ ಪೂರ್ವಜರಿಗಿಂತ ನಾನು ಉತ್ತಮನಲ್ಲ,” ಎಂದು ದೇವರನ್ನು ಪ್ರಾರ್ಥಿಸಿದನು.


ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು