Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:3 - ಕನ್ನಡ ಸತ್ಯವೇದವು C.L. Bible (BSI)

3 ಮರುದಿನ ಆ ಪಷ್ಹೂರನು ಯೆರೆಮೀಯನನ್ನು ಸೆರೆಯಿಂದ ಬಿಡಿಸಿದಾಗ ಯೆರೆಮೀಯ ಅವನಿಗೆ ಹೀಗೆಂದು ಹೇಳಿದನು: “ಸರ್ವೇಶ್ವರ ನಿನ್ನ ಹೆಸರನ್ನು ಪಷ್ಹೂರ್ ಎಂದು ಕರೆಯದೆ ‘ಮಾಗೋರ್ ಮಿಸ್ಸಾಬೀಬ್’ ಎಂದು ಕರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು, “ಯೆಹೋವನು ನಿನ್ನ ಹೆಸರನ್ನು ಪಷ್ಹೂರ್ ಎಂದು ಹೇಳದೆ ಮಾಗೋರ್ ಮಿಸ್ಸಾಬೀಬ್ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು - ಯೆಹೋವನು ನಿನ್ನ ಹೆಸರನ್ನು ಪಷ್ಹೂರ್ ಎಂದು ಹೇಳದೆ ಮಾಗೋರ್ ವಿುಸ್ಸಾಬೀಬ್ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಪಷ್ಹೂರನಿಗೆ ಹೀಗೆ ಹೇಳಿದನು: “ದೇವರು ನಿನ್ನನ್ನು ಪಷ್ಹೂರ್ ಎಂದು ಹೇಳುವದಿಲ್ಲ. ಈಗ ಯೆಹೋವನು ನಿನಗಿಟ್ಟ ಹೆಸರು, ‘ಪ್ರತಿಯೊಂದು ಭಾಗದಲ್ಲಿಯೂ ಭಯಂಕಾರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮಾರನೆ ದಿವಸದಲ್ಲಿ, ಪಷ್ಹೂರನು ಯೆರೆಮೀಯನನ್ನು ಬಂಧನದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ, “ಯೆಹೋವ ದೇವರು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ ಮಾಗೋರ್ ಮಿಸ್ಸಾಬೀಬ್ ಎಂದು ಕರೆಯುತ್ತಾರೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:3
18 ತಿಳಿವುಗಳ ಹೋಲಿಕೆ  

ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ಸುತ್ತಮುತ್ತಲೂ ದಿಗಿಲು ಹುಟ್ಟಿಸುವ ನನ್ನ ಹಗೆಗಳನ್ನೆ ಕರೆಸಿದೆಯಲ್ಲಾ ಹಬ್ಬಕ್ಕೋ ಎಂಬಂತೆ ! ಸರ್ವೇಶ್ವರನ ಪ್ರಕೋಪದ ದಿನದಂದು ತಪ್ಪಿಸಿಕೊಳ್ಳಲಿಲ್ಲ ಯಾರೂ; ಉಳಿಯಲಿಲ್ಲ ಯಾರೂ. ಶತ್ರು ಸಂಹರಿಸಿಬಿಟ್ಟನಲ್ಲಾ ನಾನು ಸಾಕಿ ಆರೈಕೆ ಮಾಡಿದವರನ್ನೂ !


“ಆದರೆ, ನನ್ನ ಕಣ್ಣಿಗೆ ಕಾಣುತ್ತಿರುವುದೇನು? ಅವರು ಓಡುತ್ತಿರುವರು ನೋಡು, ಧೈರ್ಯಗೆಟ್ಟು, ಬೆನ್ನುಗೊಟ್ಟು. ಅವರ ಶೂರರು ಹಿಂದಿರುಗದೆ ಓಡುತ್ತಿರುವರು ಪೆಟ್ಟುತಿಂದು, ದಿಗಿಲು ಕವಿದಿದೆ ಸುತ್ತ ಮುತ್ತಲು,” ಸರ್ವೇಶ್ವರನ ವಾಣಿ ಇದು.


ನನಗೆ ವಿರುದ್ಧ ಜನರಾಡುವ ಗುಸುಗುಸು ಮಾತು ಕೇಳಿ ಬರುತಿದೆ I ಭಯಭೀತಿ ಎನ್ನನಾವರಿಸಿದೆ, ಒಳಸಂಚು, ಪ್ರಾಣಹರಣ ನಡೆಯುತಿವೆ II


ಊರ ಹೊರಗೆ ಹೋಗುವಂತಿಲ್ಲ, ದಾರಿಯಲ್ಲಿ ನಡೆಯುವಂತಿಲ್ಲ. ಸುತ್ತಮುತ್ತಲೂ ಶತ್ರುವಿನ ಕತ್ತಿ, ಎಲ್ಲೆಲ್ಲೂ ದಿಗಿಲು ಎಂದರೆ ದಿಗಿಲು!”


ಸ್ವಲ್ಪಕಾಲವಾದ ನಂತರ ನಾನು ಪ್ರವಾದಿನಿಯನ್ನು ಕೂಡಲು ಆಕೆ ಗರ್ಭವತಿಯಾಗಿ ಗಂಡುಮಗುವನ್ನು ಹೆತ್ತಳು. ಆಗ ನನಗೆ: “ಆ ಮಗುವಿಗೆ ‘ಮಹೇರ್ ಶಾಲಾಲ್ ಹಾಷ್ ಬಜ್’ ಎಂದು ಹೆಸರಿಡು.


ಅನಂತರ ಅವರನ್ನು ಹೊರಗೆ ಕರೆತಂದು, “ಸ್ವಾಮಿಗಳೇ, ಜೀವೋದ್ಧಾರ ಪಡೆಯಲು ನಾನು ಮಾಡಬೇಕಾದುದು ಏನು?” ಎಂದು ವಿಚಾರಿಸಿದನು.


ಯಾಜಕನಾದ ಚೆಫನ್ಯನು ಈ ಪತ್ರವನ್ನು ನನ್ನ ಮುಂದೆ ಓದಿದನು.


ಆದಕಾರಣ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್‍ಹಿನ್ನೋಮಿನ ಕಣಿವೆ ಎಂಬ ಹೆಸರುಗಳು ಹೋಗಿ, ‘ಕೊಲೆಯ ಕಣಿವೆ’ ಎಂದು ಹೆಸರಿಸಲಾಗುವ ಕಾಲ ಬರುವುದು.


ಬೋಕಿಯ ಬಾಗಿಲಿನ ಸಮೀಪದಲ್ಲಿರುವ ‘ಬೆನ್‍ಹಿನ್ನೋಮ್’ ಕಣಿವೆಗೆ ಹೋಗು. ನಾನು ನಿನಗೆ ತಿಳಿಸುವ ಈ ಸಂದೇಶವನ್ನು ಅಲ್ಲಿ ಸಾರು -


ಆದ್ದರಿಂದ ಇಗೋ, ಆ ಕಣಿವೆಗೆ ತೋಫೆತ್ ಮತ್ತು ಬೆನ್‍ಹಿನ್ನೋಮ್ ಎಂಬ ಹೆಸರುಗಳು ಹೋಗಿ ಸಂಹಾರದ ಕಣಿವೆ ಎಂದು ಕರೆಯಲಾಗುವ ದಿನಗಳು ಬರಲಿವೆ. ಇನ್ನೆಲ್ಲೂ ಸ್ಥಳವಿಲ್ಲವಾಗಿ ಶವಗಳನ್ನು ಆ ತೋಫೆತಿನಲ್ಲಿ ಹೂಣುವರು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ದೇವರುಅಬ್ರಹಾಮನಿಗೆ ಇನ್ನೂ ಹೇಳಿದ್ದು ಏನೆಂದರೆ: “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳು ಎಂದು ಕರೆಯದೆ ಸಾರಳು ಎಂದು ಕರೆಯಬೇಕು.


ಇನ್ನು ಮುಂದೆ ನಿನಗೆ ‘ಅಬ್ರಾಮ’ ಎಂಬ ಹೆಸರಿರುವುದಿಲ್ಲ. ನಿನ್ನನ್ನು ನಾನು ಅನೇಕಾನೇಕ ರಾಷ್ಟ್ರಗಳಿಗೆ ಮೂಲಪುರುಷನನ್ನಾಗಿ ನೇಮಿಸುವುದರಿಂದ ನಿನಗೆ ‘ಅಬ್ರಹಾಮ’ ಎಂಬ ಹೆಸರಿರುವುದು.


ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು