Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:19 - ಕನ್ನಡ ಸತ್ಯವೇದವು C.L. Bible (BSI)

19 ಇವನನ್ನು ಜೆರುಸಲೇಮಿನ ಬಾಗಿಲ ಹೊರಗಡೆ ಬಿಸಾಡುವರು ಕತ್ತೆಗೆ ತಕ್ಕ ಮರ್ಯಾದೆಯೊಂದಿಗೆ ಹೂಣುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇವನನ್ನು ಯೆರೂಸಲೇಮಿನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಡಿ ಮಣ್ಣುಪಾಲು ಮಾಡುವರು” ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇವನನ್ನು ಯೆರೂಸಲೇವಿುನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಟು ಮಣ್ಣುಪಾಲುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಜೆರುಸಲೇಮಿನ ಜನರು ಯೆಹೋಯಾಕೀಮನನ್ನು ಒಂದು ಕತ್ತೆಯನ್ನು ಹೂಳಿದಂತೆ ಹೂಳಿಬಿಡುತ್ತಾರೆ. ಅವರು ಅವನ ಶವವನ್ನು ದೂರ ಎಳೆದುಕೊಂಡು ಹೋಗುತ್ತಾರೆ. ಅವನ ಶವವನ್ನು ಜೆರುಸಲೇಮಿನ ದ್ವಾರಗಳ ಹೊರಗೆ ಎಸೆದುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕತ್ತೆಯನ್ನು ಹೂಳಿಡುವ ಪ್ರಕಾರ ಅವನನ್ನು ಹೂಳಿಡುವರು. ಅವನನ್ನು ಎಳೆದುಕೊಂಡು ಹೋಗಿ, ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:19
13 ತಿಳಿವುಗಳ ಹೋಲಿಕೆ  

ಈ ಕಾರಣ ಜುದೇಯದ ಅರಸ ಯೆಹೋಯಾಕೀಮನು ಆದ ನಿನ್ನ ವಿರುದ್ಧ ಸರ್ವೇಶ್ವರ ಹೀಗೆನ್ನುತ್ತಾರೆ - ಇವನ ಸಂತಾನದಲ್ಲಿ ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು. ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ಇರುಳಿನ ಚಳಿಗೂ ಈಡಾಗುವುದು.


ಆದುದರಿಂದ ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಈ ಸುರುಳಿಯಲ್ಲಿ ಬರೆದಿರುವ ಸರ್ವೇಶ್ವರನ ವಾಕ್ಯಗಳನ್ನು, ಉಪವಾಸದಿನದಂದು, ಸರ್ವೇಶ್ವರನ ಆಲಯದೊಳಗೆ ಕೂಡಿರುವ ಜನರಿಗೂ ಆಯಾಯ ಊರುಗಳಿಂದ ಬಂದಿರುವ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ಓದು.


“ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು ವಿಧಿಸುವೆನು : ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಯನ್ನು, ನುಂಗಿ ನಾಶಮಾಡುವುದಕ್ಕೆ ಪ್ರಾಣಿಪಕ್ಷಿಗಳನ್ನು ನೇಮಿಸುವೆನು.


ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಬಾಬಿಲೋನಿಗೆ ಕೊಂಡೊಯ್ಯುವುದಕ್ಕಾಗಿ ಅವನಿಗೆ ಬೇಡಿಹಾಕಿದನು.


ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳು ಹೊರತಾಗಿ ಬೇರೇನೂ ಸಿಕ್ಕಲಿಲ್ಲ.


ಆದುದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ, ಸ್ವತಂತ್ರರಾಗಲಿ, ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಸಂಹರಿಸಿಬಿಡುವೆನು. ಕಸವನ್ನು ಗುಡಿಸಿ ಎಸೆಯುವಂತೆ ನಾನು ನಿನ್ನ ಮನೆಯವರನ್ನು ಎಸೆದುಬಿಡುವೆನು; ಅವರು ನಿರ್ನಾಮವಾಗುವರು.


ಯೆಹೋಯಾಕೀಮನು ಅರಸನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ರೂಮದವಳೂ ಪೆದಾಯನ ಮಗಳೂ ಆದ ಜೆಬೂದಾ ಎಂಬಾಕೆ ಅವನ ತಾಯಿ.


ಅವನು ಮೃತನಾಗಿ ಪಿತೃಗಳ ಬಳಿ ಸೇರಿದನು. ಅವನ ಸ್ಥಾನದಲ್ಲಿ ಅವನ ಮಗ ಯೆಹೋಯಾಖೀನನು ಅರಸನಾದನು.


ಒಬ್ಬನು ನೂರಾರು ಮಕ್ಕಳನ್ನು ಪಡೆಯಬಹುದು, ಹಣ್ಣುಹಣ್ಣು ಮುದುಕನಾಗುವ ತನಕ ಬದುಕಬಹುದು. ಆದರೆ ಜೀವನದಲ್ಲಿ ಸುಖಾನುಭವ ಇಲ್ಲದೆ, ಉತ್ತರಕ್ರಿಯೆಯೂ ಇಲ್ಲದೆಹೋದರೆ ಏನು ಪ್ರಯೋಜನ? ಅವನಿಗಿಂತ ಗರ್ಭಸ್ರಾವದ ಪಿಂಡವೇ ಮೇಲು ಎಂದುಕೊಂಡೆ.


ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


ಆಗ ಬಂದವು ಸುತ್ತಲಿನ ರಾಷ್ಟ್ರಗಳು ಒಟ್ಟುಗೂಡಿ, ಸಿಕ್ಕಿಸಿದವು ಅದನ್ನು ಬಲೆಯೊಡ್ಡಿ, ಗುಂಡಿತೋಡಿ.


ನಾನೇ ಅಪ್ಪಣೆಕೊಟ್ಟಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು