Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:23 - ಕನ್ನಡ ಸತ್ಯವೇದವು C.L. Bible (BSI)

23 ‘ಲೆಬನೋನ್’ ಅರಮನೆಯಲ್ಲಿ ವಾಸಿಸುವವಳೇ, ದೇವದಾರುಗಳ ನಡುವೆ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂಥ ಸಂಕಟಗಳು ಸಂಭವಿಸಿದಾಗ ನಿನಗೊದಗುವ ಪರಿಸ್ಥಿತಿ ಎಷ್ಟೋ ದುಃಖಕರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ರಾಜನೇ, ಬೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನ್ನ ಮನೆಯಲ್ಲಿ ನೀನು ವಾಸಿಸುವೆ. ಆ ಮನೆಯು ಲೆಬನೋನಿನ ಮರದ ತೋಪಿನಂತಿದೆ. ನೀನು ಎತ್ತರವಾದ ಪರ್ವತ ಪ್ರದೇಶದಲ್ಲಿದ್ದ ನಿನ್ನ ವಿಶಾಲವಾದ ಮನೆಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿದುಕೊಂಡಿರುವೆ. ಆದರೆ ನಿನಗೆ ದಂಡನೆಯಾದಾಗ ನೀನು ನರಳುವೆ. ಪ್ರಸವವೇದನೆಯಂಥ ನೋವನ್ನು ನೀನು ಅನುಭವಿಸುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಓ, ‘ಲೆಬನೋನಿನಲ್ಲಿ’ ವಾಸಮಾಡುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡವಳೇ, ನಿನ್ನ ಮೇಲೆ ಬೇನೆಗಳೂ, ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ದುಃಖಕರವಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:23
18 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಜನರು : “ಈ ಸುದ್ದಿಯನ್ನು ಕೇಳಿದಾಗ ನಮ್ಮ ಕೈಗಳು ಜೋಲುಬಿದ್ದುವು. ಪ್ರಸವವೇದನೆಯಂಥ ಯಾತನೆ ನಮ್ಮನ್ನು ಆವರಿಸಿತು.


ಹೌದು, ಜುದೇಯದ ಅರಸನ ಮನೆತನವನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ : “ನನ್ನ ದೃಷ್ಟಿಗೆ ನೀನಿರುವೆ ಗಿಲ್ಯಾದಿನಂತೆ, ಲೆಬನೋನಿನ ಶಿಖರದಂತೆ ಆದರೆ ನಿನ್ನನ್ನು ಮರುಭೂಮಿಯಂತೆ , ನಿರ್ಜನಪ್ರದೇಶದಂತೆ ಮಾಡುವೆನೆಂಬುದು ನಿಶ್ಚಯ.


ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ!


ಅದಕ್ಕೆ ಸರ್ವೇಶ್ವರ: “ನೀನು ಹದ್ದಿನ ಮಟ್ಟದಲ್ಲಿ ಹಾರಾಡುತ್ತಿದ್ದರೂ ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದಲೂ ನಿನ್ನನ್ನು ಇಳಿಸಿಬಿಡುತ್ತೇನೆ,” ಎನ್ನುತ್ತಾರೆ.


ಅವರು ಪಾತಾಳಕ್ಕೆ ಇಳಿದುಹೋದರೂ ಅಲ್ಲಿಂದ ಅವರನ್ನು ಎಳೆದುತರುವೆನು. ಆಕಾಶಕ್ಕೆ ಹತ್ತಿಹೋದರೂ ಅಲ್ಲಿಂದ ಇಳಿಸುವೆನು.


ಅವರು ಹೃದಯಪೂರ್ವಕವಾಗಿ ನನಗೆ ಪ್ರಾರ್ಥನೆಮಾಡುವುದಿಲ್ಲ. ಬದಲಿಗೆ ಅವರ ಹಾಸಿಗೆಗಳ ಮೇಲೆ ಬಿದ್ದು ಅರಚುತ್ತಾರೆ. ಧಾನ್ಯದ್ರಾಕ್ಷಾರಸಗಳಿಗಾಗಿ ಕಿರಿಚಿಕೊಳ್ಳುತ್ತಾರೆ. ನನಗೆ ವಿರುದ್ಧವಾಗಿ ಪ್ರತಿಭಟಿಸುತ್ತಾ ತಮ್ಮ ದೇಹಗಳನ್ನು ಪರಚಿಕೊಳ್ಳುತ್ತಾರೆ.


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.


“ಮೋವಾಬ್ಯರೇ, ನಗರಗಳನ್ನು ಬಿಟ್ಟು ಹೋಗಿ ಬಂಡೆಗಳ ಗುಹೆಯಲ್ಲಿ ವಾಸಮಾಡಿ. ಹಳ್ಳಕೊಳ್ಳಗಳ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತೆ ಜೀವಿಸಿರಿ.


ಕಣಿವೆಯಲ್ಲಿನ ನಗರಿಯೇ, ಬಯಲಿನ ಬಂಡೆಯಲ್ಲಿರುವ ಪುರಿಯೇ, ‘ನಮ್ಮ ಮೇಲೆ ಯಾರಿಳಿದು ಬಂದಾರು? ನಮ್ಮ ನಿವಾಸಗಳಿಗೆ ಯಾರು ನುಗ್ಗಿಯಾರು?’ ಎನ್ನುವವರೇ, ಇಗೋ ನಾನೆ ನಿಮಗೆ ವಿರುದ್ಧವಾಗಿದ್ದೇನೆ.


ಇಗೋ ಕೇಳಿ, ಬೋಳು ಗುಡ್ಡಗಳ ಮೇಲಿಂದ ಒಂದು ಶಬ್ದ : ‘ನಾವು ಡೊಂಕುದಾರಿಯನ್ನು ಹಿಡಿದಿದ್ದೇವೆ. ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯನ್ನು ಮರೆತುಬಿಟ್ಟಿದ್ದೇವೆ’ ಎಂದು ಇಸ್ರಯೇಲರು ಕಣ್ಣೀರು ಸುರಿಸುತ್ತಾ ದೇವರ ಕೃಪೆಯನ್ನು ಬೇಡುತ್ತಿದ್ದಾರೆ.


ಬಳಿಕ ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಇಂತೆಂದು ನುಡಿದನು: “ನಿಮ್ಮ ನಿವಾಸಸ್ಥಳ ಸುರಕ್ಷಿತ ಬೆಟ್ಟದ ತುತ್ತತುದಿಯಲ್ಲಿ ಗೂಡು ಕಟ್ಟಿಕೊಂಡಷ್ಟು ಸುರಕ್ಷಿತ


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಗಲ ಹಾಗು ಉದ್ದವಾದ ರೆಕ್ಕೆಗಳುಳ್ಳ ವಿವಿಧ ವರ್ಣದ ಗರಿಗಳಿಂದ ಕೂಡಿದ ದೊಡ್ಡ ಹದ್ದೊಂದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ತುದಿಯ ರೆಂಬೆಯನ್ನು ಕಿತ್ತಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು