Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:27 - ಕನ್ನಡ ಸತ್ಯವೇದವು C.L. Bible (BSI)

27 ಹಿಂದಿರುಗಬೇಕೆಂದು ಹಂಬಲಿಸಿದರೂ ತಾಯ್ನಾಡಿಗೆ ಹಿಂದಿರುಗುವುದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹಿಂದಿರುಗಬೇಕೆಂದು ಹಂಬಲಿಸುವ ದೇಶಕ್ಕೆ ಅವರು ಹಿಂದಿರುಗುವುದೇ ಇಲ್ಲ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅಲ್ಲೇ ಸಾಯುವಿರಿ, ಹಿಂದಿರುಗಬೇಕೆಂದು ಹಂಬಲಿಸುವ ದೇಶಕ್ಕೆ ಅವರು ಹಿಂದಿರುಗುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋಯಾಚೀನನೇ, ನೀನು ನಿನ್ನ ದೇಶಕ್ಕೆ ಹಿಂದಿರುಗಬೇಕೆಂದು ಅಪೇಕ್ಷಿಸಿದರೂ ನಿನಗೆ ಬರಲು ಸಾಧ್ಯವಾಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ಅವರು ತಿರುಗಿ ಬರುವುದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂದಿರುಗಲಾರರು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:27
11 ತಿಳಿವುಗಳ ಹೋಲಿಕೆ  

ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಆ ಜುದೇಯದ ಅಳಿದುಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಅಲ್ಲಿಂದ ತಪ್ಪಿಸಿಕೊಂಡು ಜುದೇಯಕ್ಕೆ ಹಿಂದಿರುಗಿದರು. ಕೆಲವು ನಿರಾಶ್ರಿತರನ್ನು ಬಿಟ್ಟರೆ ಯಾವನೂ ಹಿಂತಿರುಗುವುದಿಲ್ಲ’.”


ಜುದೇಯದ ಅರಸನಾದ ಯೋಷೀಯನ ಮಗನೂ ತನ್ನ ತಂದೆ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಹಾಗು ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಸರ್ವೇಶ್ವರ ಹೇಳುವುದು ಏನೆಂದರೆ:


ನಿನ್ನ ದಾಸನಿಗೆ ನೀಡು ಮನದಾನಂದವನು I ನಿನಗೆ ಅಭಿಮುಖವಾಗಿಸಿರುವೆ ಎನ್ನಾತ್ಮವನು II


ನಿನ್ನನ್ನೂ ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂಮಿಯಲ್ಲದ ಅನ್ಯದೇಶಕ್ಕೆ ಎಸೆದುಬಿಡುವೆನು. ನೀವು ಅಲ್ಲೇ ಸಾಯುವಿರಿ.


ಕೊನ್ಯನು ಬಿಸಾಡಲ್ಪಟ್ಟ ಒಡಕು ಕುಡಿಕೆಯೆ? ಯಾರಿಗೂ ಬೇಡವಾದ ಮಣ್ಣಿನ ಮಡಿಕೆಯೆ? ಅವನೂ ಅವನ ಮಡದಿಮಕ್ಕಳೇಕೆ ಬೀದಿಪಾಲಾಗಿದ್ದಾರೆ?


ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಯೆಕೊನ್ಯನನ್ನು ಮತ್ತು ಬಾಬಿಲೋನಿಗೆ ಸೆರೆಹೋದ ಎಲ್ಲ ಯೆಹೂದ್ಯರನ್ನು ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನ ನುಡಿ.”


“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಜೆರುಸಲೇಮಿನ ಮೇಲೆ ಹೇಗೆ ಸುರಿಯಿತೋ ಹಾಗೆಯೆ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೆ ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ನಾಡನ್ನು ನೀವು ಮತ್ತೆ ನೋಡಲಾರಿರಿ.’


“ಸತ್ತವನಿಗಾಗಿ (ಯೋಷೀಯನಿಗಾಗಿ) ಅಳಬೇಡಿ ಅವನಿಗಾಗಿ ಗೋಳಾಡಬೇಡಿ. ಬದಲಿಗೆ ಸೆರೆಹೋದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ ಇನ್ನು ಅವನು ಹಿಂತಿರುಗನು ಸ್ವಂತ ನಾಡನ್ನು ಮತ್ತೆ ನೋಡನು!


“ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬರುವುದಿಲ್ಲ. ಅವನನ್ನು ಎಲ್ಲಿಗೆ ಸೆರೆ ಒಯ್ದರೋ ಅಲ್ಲೇ ಅವನು ಸಾಯುವನು. ಈ ನಾಡನ್ನು ಇನ್ನು ಅವನು ನೋಡುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು