Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:13 - ಕನ್ನಡ ಸತ್ಯವೇದವು C.L. Bible (BSI)

13 “ಸಮಾರ್ಯದ ಪ್ರವಾದಿಗಳ ಅಸಹ್ಯ ಕಾರ್ಯಗಳನ್ನು ನೋಡಿರುವೆನು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿದರವರು ಹೀಗೆ ಇಸ್ರಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನೈತಿಕತೆಯನ್ನು ನೋಡಿದ್ದೇನೆ; ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ, ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಸಮಾರ್ಯದ ಪ್ರವಾದಿಗಳಲ್ಲಿ ಅಯುಕ್ತವನ್ನು ನೋಡಿದ್ದೇನೆ; ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗತಪ್ಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದುಕೊಂಡದ್ದನ್ನು ನಾನು ನೋಡಿದ್ದೇನೆ. ಅವರು ಬಾಳ್ ದೇವತೆಗೋಸ್ಕರ ಆವೇಶದಿಂದ ಪ್ರವಾದಿಸಿದ್ದನ್ನು ನಾನು ಕಂಡಿದ್ದೇನೆ. ಆ ಪ್ರವಾದಿಗಳು ಇಸ್ರೇಲಿನ ಜನರನ್ನು ಯೆಹೋವನಿಂದ ದೂರ ತೆಗೆದುಕೊಂಡು ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಸಮಾರ್ಯದ ಪ್ರವಾದಿಗಳಲ್ಲಿ ಅಸಹ್ಯಕರ ವಿಷಯವನ್ನು ನೋಡಿದ್ದೇನೆ. ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ, ನನ್ನ ಜನರಾದ ಇಸ್ರಾಯೇಲನ್ನು ತಪ್ಪುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:13
12 ತಿಳಿವುಗಳ ಹೋಲಿಕೆ  

ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’


ಈ ಜನರನ್ನು ನಡೆಸುವವರು ತಪ್ಪುದಾರಿಗೆ ಎಳೆಯುವಂಥವರು. ಅವರನ್ನು ಹಿಂಬಾಲಿಸುವವರೆಲ್ಲ ನಾಶವಾಗುವರು.


ಆದರೆ ಯೆಹೂದ್ಯರೂ ಜೆರುಸಲೇಮಿನವರೂ ಮನಸ್ಸೆಯಿಂದ ಪ್ರಚೋದಿತರಾಗಿ ಇಸ್ರಯೇಲರ ಮುಂದೆಯೇ ಸರ್ವೇಶ್ವರನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು,” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಕೊಲ್ಲಿಸಿದನು.


ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


“ನೀನು ಗ್ರಂಥ ಬರೆಯುವ ಒಂದು ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಯೇಲ್, ಯೆಹೂದ ಹಾಗೂ ಸಕಲ ರಾಷ್ಟ್ರಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲ ಬರೆ.


“ಮದ್ಯಪಾನ, ದ್ರಾಕ್ಷಾರಸ - ಇವು ಜನರನ್ನು ಬುದ್ಧಿಹೀನರನ್ನಾಗಿ ಮಾಡುತ್ತವೆ.


ನನ್ನ ಜನರು ಮರದ ತುಂಡನ್ನು ಹಿಡಿದು ಕಣಿ ಕೇಳುತ್ತಾರೆ; ಕೈಯಲ್ಲಿ ಹಿಡಿದ ದೊಣ್ಣೆಯಿಂದ ವಿವೇಕವಾಣಿಯನ್ನು ಪಡೆಯಲೆತ್ನಿಸುತ್ತಾರೆ. ವ್ಯಭಿಚಾರಗುಣ ಅವರನ್ನು ತಪ್ಪುದಾರಿಗೆ ಎಳೆದಿದೆ. ದೇವರ ಸದ್ಭಕ್ತಿಯನ್ನು ತೊರೆದು ಅವರು ಧರ್ಮಭ್ರಷ್ಠರಾಗಿದ್ದಾರೆ.


ಇದಕ್ಕೆಲ್ಲಾ ಕಾರಣ ಯಕೋಬನ ದ್ರೋಹ. ಇಸ್ರಯೇಲ್ ಮನೆತನದ ಪಾಪ. ಯಕೋಬನ ದ್ರೋಹಕ್ಕೆ ಕಾರಣ ಯಾವುದು? ಸಮಾರ್ಯ ಅಲ್ಲವೆ? ಜುದೇಯದ ವಿಗ್ರಹಾರಾಧನೆಯ ಸ್ಥಳ ಯಾವುದು? ಜೆರುಸಲೇಮ್ ಅಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು